Latest

ಡಿಜಿಟಲ್ ಅರೆಸ್ಟ್” ಹೆಸರಿನಲ್ಲಿ ಕೋಟಿ ಕೋಟಿ ಎಗರಿಸಿದ್ದ ಆರೋಪಿಯನ್ನು ಹೆಡಿಮುರಿ ಕಟ್ಟಿದ ಕಾರವಾರ ಪೊಲೀಸರು.

ಕಾರವಾರ: ‘ಡಿಜಿಟಲ್ ಅರೆಸ್ಟ್ ‘ ಎಂಬ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದು, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರದ ಸಿ.ಇ.ಎನ್ ಅಪರಾಧ ಪೊಲೀಸರು ಕಾರ್ಯಾಚರಣೆ ನಡೆಸಿ ನಕಲಿ ಪೊಲೀಸನನ್ನು ಬಂಧಿಸಿದ್ದಾರೆ.

ದಿನಾಂಕ 23-10-2024 ರಂದು ಕಾರವಾರದ ವಿಲ್ಸನ್ ಫರ್ನಾಂಡಿಸ್ ಎಂಬುವರಿಗೆ ಒಬ್ಬ ವ್ಯಕ್ತಿ ಕರೆ ಮಾಡಿ ನಾನು ಡಿ ಎಚ್ ಎಲ್ ಕೋರಿಯರ್ ಸರ್ವಿಸ್ ಮುಂಬೈನಿಂದ ಮಾತನಾಡುತ್ತಿದ್ದೇನೆ ಎಂದು ಹೇಳಿ ನಿಮ್ಮ ಹೆಸರಿನಲ್ಲಿರುವ ಪಾರ್ಸೆಲ್ ನಲ್ಲಿ MDMA ಮಾದಕ ವಸ್ತು ಇದೆ ಹಾಗಾಗಿ ಆನ್ಲೈನ್ ಮೂಲಕ ಕಂಪ್ಲೇಂಟ್ ರಿಜಿಸ್ಟರ್ ಮಾಡಬೇಕಾಗುತ್ತದೆ ಎಂದು ತಿಳಿಸಿದ ನಂತರ ಮತ್ತೊಬ್ಬ ನಕಲಿ ಪೊಲೀಸ್ ಅಧಿಕಾರಿಯ ವೇಷದಲ್ಲಿ ವ್ಯಾಟ್ಸಾಪ್ ವಿಡಿಯೋ ಕಾಲ್ ಕರೆ ಮಾಡಿ ನಿಮ್ಮ ಹೆಸರಿನಲ್ಲಿರುವ ಪಾರ್ಸೆಲ್ ನಲ್ಲಿ ಮಾದಕ ವಸ್ತು ಸೇರಿದಂತೆ ಬೇರೆ ಬೇರೆ ಹೆಸರಿನಲ್ಲಿರುವ ಪಾಸ್ಪೋರ್ಟ್ ಗಳು, ಕ್ರೆಡಿಟ್ ಕಾರ್ಡ್ ಗಳು, ಬಟ್ಟೆ ಇರುವುದಾಗಿ ತಿಳಿಸಿ ವೆರಿಫಿಕೇಶನ್ ಮುಗಿಯುವವರೆಗೂ ಯಾರಿಗೂ ವಿಷಯವನ್ನು ತಿಳಿಸದೆ, ಯಾರ ಸಂಪರ್ಕಕ್ಕೂ ಸಿಗದೆ ವಾಟ್ಸಾಪ್ ವಿಡಿಯೋ ಕಾಲ್ ಅನ್ನು ಕಟ್ಟು ಮಾಡಬಾರದೆಂದು ಹೆದರಿಸಿ ರೂಪಾಯಿ 3 ಲಕ್ಷ 80,000 ಹಣವನ್ನು ತಮ್ಮ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿಸಿಕೊಂಡು ಮೋಸ ಮಾಡಿದ್ದ ಬಿಹಾರ ರಾಜ್ಯದ ಹರ್ದೀಪ್ ಸಿಂಗ್ ಎಂಬಾತನನ್ನು ಕಾರವಾರದ ಸಿ.ಇ.ಎನ್ ಅಪರಾಧ ಪೊಲೀಸರು ಬಂಧಿಸಿದ್ದಾರೆ.
ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಲ್ಸನ್ ಫರ್ನಾಂಡಿಸ್ ಅವರ ಅಣ್ಣನಾದ ರಾಫೆಲ್ ಫರ್ನಾಂಡಿಸ್ ಕಾರವಾರ ರವರು ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಗೆ ಹಾಜರಾಗಿ ತನ್ನ ತಮ್ಮನಿಗೆ ಆದ ಮೋಸದ ಬಗ್ಗೆ ಲಿಖಿತವಾಗಿ ದೂರನ್ನು ನೀಡಿದ್ದು ,
ಸದರಿ ಪ್ರಕರಣವನ್ನು ಕೈಗೆತ್ತಿಕೊಂಡ ಪೊಲೀಸರು ಆರೋಪಿಯನ್ನು ಹೆಡೆಮುರಿ ಕಟ್ಟಲು ಮಾನ್ಯ ಪೊಲೀಸ್ ಅಧಿಕ್ಷಕರು ಉತ್ತರ ಕನ್ನಡ ಜಿಲ್ಲೆ ಕಾರವಾರ ಹಾಗೂ ಹೆಚ್ಚುವರಿ ಪೊಲೀಸ್ ಅಧಿಕ್ಷಕರು ಉತ್ತರ ಕನ್ನಡ ಜಿಲ್ಲೆ ಕಾರವಾರ ರವರ ಮಾರ್ಗದರ್ಶನದಲ್ಲಿ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯ ಉಪಾಧಿಕ್ಷಕರಾದ ಬಿ ಅಶ್ವಿನಿ ಅವರ ನೇತೃತ್ವದಲ್ಲಿ ಅನುಕೂಲ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ನಾಮದೇವ್ ನಾಂದ್ರೆ ಇವರನ್ನು ಒಳಗೊಂಡ ತಂಡವು ಬಿಹಾರ ರಾಜ್ಯಕ್ಕೆ ತೆರಳಿ ಆರೋಪಿತನಾದ ಹರ್ದೀಪ್ ಸಿಂಗ್ ವಶಕ್ಕೆ ಪಡೆದು ಕಾರವಾರಕ್ಕೆ ಕರೆತಂದಿರುತ್ತಾರೆ.
ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ ನಂತರ ಆರೋಪಿಯು ದೇಶದ ಹಲವು ಭಾಗಗಳಲ್ಲಿ 29 ಸೈಬರ್ ಹಾಗೂ ಡಿಜಿಟಲ್ ಅರೆಸ್ಟ್ ಮತ್ತು ಹೂಡಿಕೆ ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು ಇರುತ್ತದೆ. ಪ್ರಮುಖವಾಗಿ ತಮಿಳುನಾಡು ರಾಜ್ಯದಲ್ಲಿ 9 ಕೋಟಿ, ಆಂಧ್ರಪ್ರದೇಶದಲ್ಲಿ 2 ಕೋಟಿ 47 ಲಕ್ಷ, ಬೆಂಗಳೂರಿನ ಎರಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1ಕೋಟಿ 54 ಲಕ್ಷ ಸೇರಿದಂತೆ ರೂಪಾಯಿ 40 ಕೋಟಿ 95 ಲಕ್ಷ ವಂಚಿಸಿದ ಬಗ್ಗೆ ಪತ್ತೆಯಾಗಿದೆ.
ಈ ಕಾರ್ಯಾಚರಣೆಯನ್ನು ಶ್ರೀ ಎಂ. ನಾರಾಯಣ ಪೊಲೀಸ ಅಧೀಕ್ಷಕರು ಉತ್ತರ ಕನ್ನಡ ಜಿಲ್ಲೆ ಕಾರವಾರ, ಶ್ರೀ ಜಗದೀಶ ಎಂ, ಹೆಚ್ಚುವರಿ ಪೊಲೀಸ ಅಧೀಕ್ಷಕರು -02, ಇವರ ಮಾರ್ಗದರ್ಶನದಲ್ಲಿ ಸಿ.ಇ.ಎನ್ ಅಪರಾಧ ಪೊಲೀಸ ಠಾಣೆಯ ಪೊಲೀಸ ಉಪಾಧೀಕ್ಷಕರಾದ ಬಿ. ಅಶ್ವಿನಿ ಇವರ ನೇತ್ರತ್ವದಲ್ಲಿ ಅಂಕೋಲಾ ಪೊಲೀಸ ಠಾಣೆಯ ಪಿ.ಎಸ್.ಐ ಶ್ರೀ ಉದ್ದಪ್ಪ ಧರೆಪ್ಪನವರ ಹಾಗೂ ಸಿ.ಇ.ಎನ್ ಅಪರಾಧ ಪೊಲೀಸ ಠಾಣೆಯ ಸಿಬ್ಬಂದಿಯಾದ ಶ್ರೀ ನಾಮದೇವ ನಾಂದ್ರೆ ಕಾರವಾರ ಟೆಕ್ನಿಕಲ್ ಸೆಲ್ ವಿಭಾಗದ ಸಿಬ್ಬಂದಿಯವರಾದ ಉದಯ ಗುನಗಾ ಮತ್ತು ಬಬನ್ ಕದಂ ಇವರು ಈ ಕಾರಾಚರಣೆಯಲ್ಲಿ ಪಾಲ್ಗೊಂಡಿರತ್ತಾರೆ. ವರದಿ: ಮಂಜುನಾಥ್ ಎಫ್ ಎಚ್

nazeer ahamad

Recent Posts

ರೀಲ್ಸ್ ಹುಚ್ಚಾಟದ ದುರಂತ: ಹುಬ್ಬಳ್ಳಿಯಲ್ಲಿ ಬಾಲಕ ಸಾವು – ಇಬ್ಬರ ಬಂಧನ

ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…

2 hours ago

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

15 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

17 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

1 day ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

1 day ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

1 day ago