Latest

ಡಿಜಿಟಲ್ ಅರೆಸ್ಟ್” ಹೆಸರಿನಲ್ಲಿ ಕೋಟಿ ಕೋಟಿ ಎಗರಿಸಿದ್ದ ಆರೋಪಿಯನ್ನು ಹೆಡಿಮುರಿ ಕಟ್ಟಿದ ಕಾರವಾರ ಪೊಲೀಸರು.

ಕಾರವಾರ: ‘ಡಿಜಿಟಲ್ ಅರೆಸ್ಟ್ ‘ ಎಂಬ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದು, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರದ ಸಿ.ಇ.ಎನ್ ಅಪರಾಧ ಪೊಲೀಸರು ಕಾರ್ಯಾಚರಣೆ ನಡೆಸಿ ನಕಲಿ ಪೊಲೀಸನನ್ನು ಬಂಧಿಸಿದ್ದಾರೆ.

ದಿನಾಂಕ 23-10-2024 ರಂದು ಕಾರವಾರದ ವಿಲ್ಸನ್ ಫರ್ನಾಂಡಿಸ್ ಎಂಬುವರಿಗೆ ಒಬ್ಬ ವ್ಯಕ್ತಿ ಕರೆ ಮಾಡಿ ನಾನು ಡಿ ಎಚ್ ಎಲ್ ಕೋರಿಯರ್ ಸರ್ವಿಸ್ ಮುಂಬೈನಿಂದ ಮಾತನಾಡುತ್ತಿದ್ದೇನೆ ಎಂದು ಹೇಳಿ ನಿಮ್ಮ ಹೆಸರಿನಲ್ಲಿರುವ ಪಾರ್ಸೆಲ್ ನಲ್ಲಿ MDMA ಮಾದಕ ವಸ್ತು ಇದೆ ಹಾಗಾಗಿ ಆನ್ಲೈನ್ ಮೂಲಕ ಕಂಪ್ಲೇಂಟ್ ರಿಜಿಸ್ಟರ್ ಮಾಡಬೇಕಾಗುತ್ತದೆ ಎಂದು ತಿಳಿಸಿದ ನಂತರ ಮತ್ತೊಬ್ಬ ನಕಲಿ ಪೊಲೀಸ್ ಅಧಿಕಾರಿಯ ವೇಷದಲ್ಲಿ ವ್ಯಾಟ್ಸಾಪ್ ವಿಡಿಯೋ ಕಾಲ್ ಕರೆ ಮಾಡಿ ನಿಮ್ಮ ಹೆಸರಿನಲ್ಲಿರುವ ಪಾರ್ಸೆಲ್ ನಲ್ಲಿ ಮಾದಕ ವಸ್ತು ಸೇರಿದಂತೆ ಬೇರೆ ಬೇರೆ ಹೆಸರಿನಲ್ಲಿರುವ ಪಾಸ್ಪೋರ್ಟ್ ಗಳು, ಕ್ರೆಡಿಟ್ ಕಾರ್ಡ್ ಗಳು, ಬಟ್ಟೆ ಇರುವುದಾಗಿ ತಿಳಿಸಿ ವೆರಿಫಿಕೇಶನ್ ಮುಗಿಯುವವರೆಗೂ ಯಾರಿಗೂ ವಿಷಯವನ್ನು ತಿಳಿಸದೆ, ಯಾರ ಸಂಪರ್ಕಕ್ಕೂ ಸಿಗದೆ ವಾಟ್ಸಾಪ್ ವಿಡಿಯೋ ಕಾಲ್ ಅನ್ನು ಕಟ್ಟು ಮಾಡಬಾರದೆಂದು ಹೆದರಿಸಿ ರೂಪಾಯಿ 3 ಲಕ್ಷ 80,000 ಹಣವನ್ನು ತಮ್ಮ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿಸಿಕೊಂಡು ಮೋಸ ಮಾಡಿದ್ದ ಬಿಹಾರ ರಾಜ್ಯದ ಹರ್ದೀಪ್ ಸಿಂಗ್ ಎಂಬಾತನನ್ನು ಕಾರವಾರದ ಸಿ.ಇ.ಎನ್ ಅಪರಾಧ ಪೊಲೀಸರು ಬಂಧಿಸಿದ್ದಾರೆ.
ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಲ್ಸನ್ ಫರ್ನಾಂಡಿಸ್ ಅವರ ಅಣ್ಣನಾದ ರಾಫೆಲ್ ಫರ್ನಾಂಡಿಸ್ ಕಾರವಾರ ರವರು ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಗೆ ಹಾಜರಾಗಿ ತನ್ನ ತಮ್ಮನಿಗೆ ಆದ ಮೋಸದ ಬಗ್ಗೆ ಲಿಖಿತವಾಗಿ ದೂರನ್ನು ನೀಡಿದ್ದು ,
ಸದರಿ ಪ್ರಕರಣವನ್ನು ಕೈಗೆತ್ತಿಕೊಂಡ ಪೊಲೀಸರು ಆರೋಪಿಯನ್ನು ಹೆಡೆಮುರಿ ಕಟ್ಟಲು ಮಾನ್ಯ ಪೊಲೀಸ್ ಅಧಿಕ್ಷಕರು ಉತ್ತರ ಕನ್ನಡ ಜಿಲ್ಲೆ ಕಾರವಾರ ಹಾಗೂ ಹೆಚ್ಚುವರಿ ಪೊಲೀಸ್ ಅಧಿಕ್ಷಕರು ಉತ್ತರ ಕನ್ನಡ ಜಿಲ್ಲೆ ಕಾರವಾರ ರವರ ಮಾರ್ಗದರ್ಶನದಲ್ಲಿ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯ ಉಪಾಧಿಕ್ಷಕರಾದ ಬಿ ಅಶ್ವಿನಿ ಅವರ ನೇತೃತ್ವದಲ್ಲಿ ಅನುಕೂಲ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ನಾಮದೇವ್ ನಾಂದ್ರೆ ಇವರನ್ನು ಒಳಗೊಂಡ ತಂಡವು ಬಿಹಾರ ರಾಜ್ಯಕ್ಕೆ ತೆರಳಿ ಆರೋಪಿತನಾದ ಹರ್ದೀಪ್ ಸಿಂಗ್ ವಶಕ್ಕೆ ಪಡೆದು ಕಾರವಾರಕ್ಕೆ ಕರೆತಂದಿರುತ್ತಾರೆ.
ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ ನಂತರ ಆರೋಪಿಯು ದೇಶದ ಹಲವು ಭಾಗಗಳಲ್ಲಿ 29 ಸೈಬರ್ ಹಾಗೂ ಡಿಜಿಟಲ್ ಅರೆಸ್ಟ್ ಮತ್ತು ಹೂಡಿಕೆ ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು ಇರುತ್ತದೆ. ಪ್ರಮುಖವಾಗಿ ತಮಿಳುನಾಡು ರಾಜ್ಯದಲ್ಲಿ 9 ಕೋಟಿ, ಆಂಧ್ರಪ್ರದೇಶದಲ್ಲಿ 2 ಕೋಟಿ 47 ಲಕ್ಷ, ಬೆಂಗಳೂರಿನ ಎರಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1ಕೋಟಿ 54 ಲಕ್ಷ ಸೇರಿದಂತೆ ರೂಪಾಯಿ 40 ಕೋಟಿ 95 ಲಕ್ಷ ವಂಚಿಸಿದ ಬಗ್ಗೆ ಪತ್ತೆಯಾಗಿದೆ.
ಈ ಕಾರ್ಯಾಚರಣೆಯನ್ನು ಶ್ರೀ ಎಂ. ನಾರಾಯಣ ಪೊಲೀಸ ಅಧೀಕ್ಷಕರು ಉತ್ತರ ಕನ್ನಡ ಜಿಲ್ಲೆ ಕಾರವಾರ, ಶ್ರೀ ಜಗದೀಶ ಎಂ, ಹೆಚ್ಚುವರಿ ಪೊಲೀಸ ಅಧೀಕ್ಷಕರು -02, ಇವರ ಮಾರ್ಗದರ್ಶನದಲ್ಲಿ ಸಿ.ಇ.ಎನ್ ಅಪರಾಧ ಪೊಲೀಸ ಠಾಣೆಯ ಪೊಲೀಸ ಉಪಾಧೀಕ್ಷಕರಾದ ಬಿ. ಅಶ್ವಿನಿ ಇವರ ನೇತ್ರತ್ವದಲ್ಲಿ ಅಂಕೋಲಾ ಪೊಲೀಸ ಠಾಣೆಯ ಪಿ.ಎಸ್.ಐ ಶ್ರೀ ಉದ್ದಪ್ಪ ಧರೆಪ್ಪನವರ ಹಾಗೂ ಸಿ.ಇ.ಎನ್ ಅಪರಾಧ ಪೊಲೀಸ ಠಾಣೆಯ ಸಿಬ್ಬಂದಿಯಾದ ಶ್ರೀ ನಾಮದೇವ ನಾಂದ್ರೆ ಕಾರವಾರ ಟೆಕ್ನಿಕಲ್ ಸೆಲ್ ವಿಭಾಗದ ಸಿಬ್ಬಂದಿಯವರಾದ ಉದಯ ಗುನಗಾ ಮತ್ತು ಬಬನ್ ಕದಂ ಇವರು ಈ ಕಾರಾಚರಣೆಯಲ್ಲಿ ಪಾಲ್ಗೊಂಡಿರತ್ತಾರೆ. ವರದಿ: ಮಂಜುನಾಥ್ ಎಫ್ ಎಚ್

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

11 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

11 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

11 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

11 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago