Latest

ಡಿಜಿಟಲ್ ಅರೆಸ್ಟ್” ಹೆಸರಿನಲ್ಲಿ ಕೋಟಿ ಕೋಟಿ ಎಗರಿಸಿದ್ದ ಆರೋಪಿಯನ್ನು ಹೆಡಿಮುರಿ ಕಟ್ಟಿದ ಕಾರವಾರ ಪೊಲೀಸರು.

ಕಾರವಾರ: ‘ಡಿಜಿಟಲ್ ಅರೆಸ್ಟ್ ‘ ಎಂಬ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದು, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರದ ಸಿ.ಇ.ಎನ್ ಅಪರಾಧ ಪೊಲೀಸರು ಕಾರ್ಯಾಚರಣೆ ನಡೆಸಿ ನಕಲಿ ಪೊಲೀಸನನ್ನು ಬಂಧಿಸಿದ್ದಾರೆ.

ದಿನಾಂಕ 23-10-2024 ರಂದು ಕಾರವಾರದ ವಿಲ್ಸನ್ ಫರ್ನಾಂಡಿಸ್ ಎಂಬುವರಿಗೆ ಒಬ್ಬ ವ್ಯಕ್ತಿ ಕರೆ ಮಾಡಿ ನಾನು ಡಿ ಎಚ್ ಎಲ್ ಕೋರಿಯರ್ ಸರ್ವಿಸ್ ಮುಂಬೈನಿಂದ ಮಾತನಾಡುತ್ತಿದ್ದೇನೆ ಎಂದು ಹೇಳಿ ನಿಮ್ಮ ಹೆಸರಿನಲ್ಲಿರುವ ಪಾರ್ಸೆಲ್ ನಲ್ಲಿ MDMA ಮಾದಕ ವಸ್ತು ಇದೆ ಹಾಗಾಗಿ ಆನ್ಲೈನ್ ಮೂಲಕ ಕಂಪ್ಲೇಂಟ್ ರಿಜಿಸ್ಟರ್ ಮಾಡಬೇಕಾಗುತ್ತದೆ ಎಂದು ತಿಳಿಸಿದ ನಂತರ ಮತ್ತೊಬ್ಬ ನಕಲಿ ಪೊಲೀಸ್ ಅಧಿಕಾರಿಯ ವೇಷದಲ್ಲಿ ವ್ಯಾಟ್ಸಾಪ್ ವಿಡಿಯೋ ಕಾಲ್ ಕರೆ ಮಾಡಿ ನಿಮ್ಮ ಹೆಸರಿನಲ್ಲಿರುವ ಪಾರ್ಸೆಲ್ ನಲ್ಲಿ ಮಾದಕ ವಸ್ತು ಸೇರಿದಂತೆ ಬೇರೆ ಬೇರೆ ಹೆಸರಿನಲ್ಲಿರುವ ಪಾಸ್ಪೋರ್ಟ್ ಗಳು, ಕ್ರೆಡಿಟ್ ಕಾರ್ಡ್ ಗಳು, ಬಟ್ಟೆ ಇರುವುದಾಗಿ ತಿಳಿಸಿ ವೆರಿಫಿಕೇಶನ್ ಮುಗಿಯುವವರೆಗೂ ಯಾರಿಗೂ ವಿಷಯವನ್ನು ತಿಳಿಸದೆ, ಯಾರ ಸಂಪರ್ಕಕ್ಕೂ ಸಿಗದೆ ವಾಟ್ಸಾಪ್ ವಿಡಿಯೋ ಕಾಲ್ ಅನ್ನು ಕಟ್ಟು ಮಾಡಬಾರದೆಂದು ಹೆದರಿಸಿ ರೂಪಾಯಿ 3 ಲಕ್ಷ 80,000 ಹಣವನ್ನು ತಮ್ಮ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿಸಿಕೊಂಡು ಮೋಸ ಮಾಡಿದ್ದ ಬಿಹಾರ ರಾಜ್ಯದ ಹರ್ದೀಪ್ ಸಿಂಗ್ ಎಂಬಾತನನ್ನು ಕಾರವಾರದ ಸಿ.ಇ.ಎನ್ ಅಪರಾಧ ಪೊಲೀಸರು ಬಂಧಿಸಿದ್ದಾರೆ.
ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಲ್ಸನ್ ಫರ್ನಾಂಡಿಸ್ ಅವರ ಅಣ್ಣನಾದ ರಾಫೆಲ್ ಫರ್ನಾಂಡಿಸ್ ಕಾರವಾರ ರವರು ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಗೆ ಹಾಜರಾಗಿ ತನ್ನ ತಮ್ಮನಿಗೆ ಆದ ಮೋಸದ ಬಗ್ಗೆ ಲಿಖಿತವಾಗಿ ದೂರನ್ನು ನೀಡಿದ್ದು ,
ಸದರಿ ಪ್ರಕರಣವನ್ನು ಕೈಗೆತ್ತಿಕೊಂಡ ಪೊಲೀಸರು ಆರೋಪಿಯನ್ನು ಹೆಡೆಮುರಿ ಕಟ್ಟಲು ಮಾನ್ಯ ಪೊಲೀಸ್ ಅಧಿಕ್ಷಕರು ಉತ್ತರ ಕನ್ನಡ ಜಿಲ್ಲೆ ಕಾರವಾರ ಹಾಗೂ ಹೆಚ್ಚುವರಿ ಪೊಲೀಸ್ ಅಧಿಕ್ಷಕರು ಉತ್ತರ ಕನ್ನಡ ಜಿಲ್ಲೆ ಕಾರವಾರ ರವರ ಮಾರ್ಗದರ್ಶನದಲ್ಲಿ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯ ಉಪಾಧಿಕ್ಷಕರಾದ ಬಿ ಅಶ್ವಿನಿ ಅವರ ನೇತೃತ್ವದಲ್ಲಿ ಅನುಕೂಲ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ನಾಮದೇವ್ ನಾಂದ್ರೆ ಇವರನ್ನು ಒಳಗೊಂಡ ತಂಡವು ಬಿಹಾರ ರಾಜ್ಯಕ್ಕೆ ತೆರಳಿ ಆರೋಪಿತನಾದ ಹರ್ದೀಪ್ ಸಿಂಗ್ ವಶಕ್ಕೆ ಪಡೆದು ಕಾರವಾರಕ್ಕೆ ಕರೆತಂದಿರುತ್ತಾರೆ.
ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ ನಂತರ ಆರೋಪಿಯು ದೇಶದ ಹಲವು ಭಾಗಗಳಲ್ಲಿ 29 ಸೈಬರ್ ಹಾಗೂ ಡಿಜಿಟಲ್ ಅರೆಸ್ಟ್ ಮತ್ತು ಹೂಡಿಕೆ ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು ಇರುತ್ತದೆ. ಪ್ರಮುಖವಾಗಿ ತಮಿಳುನಾಡು ರಾಜ್ಯದಲ್ಲಿ 9 ಕೋಟಿ, ಆಂಧ್ರಪ್ರದೇಶದಲ್ಲಿ 2 ಕೋಟಿ 47 ಲಕ್ಷ, ಬೆಂಗಳೂರಿನ ಎರಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1ಕೋಟಿ 54 ಲಕ್ಷ ಸೇರಿದಂತೆ ರೂಪಾಯಿ 40 ಕೋಟಿ 95 ಲಕ್ಷ ವಂಚಿಸಿದ ಬಗ್ಗೆ ಪತ್ತೆಯಾಗಿದೆ.
ಈ ಕಾರ್ಯಾಚರಣೆಯನ್ನು ಶ್ರೀ ಎಂ. ನಾರಾಯಣ ಪೊಲೀಸ ಅಧೀಕ್ಷಕರು ಉತ್ತರ ಕನ್ನಡ ಜಿಲ್ಲೆ ಕಾರವಾರ, ಶ್ರೀ ಜಗದೀಶ ಎಂ, ಹೆಚ್ಚುವರಿ ಪೊಲೀಸ ಅಧೀಕ್ಷಕರು -02, ಇವರ ಮಾರ್ಗದರ್ಶನದಲ್ಲಿ ಸಿ.ಇ.ಎನ್ ಅಪರಾಧ ಪೊಲೀಸ ಠಾಣೆಯ ಪೊಲೀಸ ಉಪಾಧೀಕ್ಷಕರಾದ ಬಿ. ಅಶ್ವಿನಿ ಇವರ ನೇತ್ರತ್ವದಲ್ಲಿ ಅಂಕೋಲಾ ಪೊಲೀಸ ಠಾಣೆಯ ಪಿ.ಎಸ್.ಐ ಶ್ರೀ ಉದ್ದಪ್ಪ ಧರೆಪ್ಪನವರ ಹಾಗೂ ಸಿ.ಇ.ಎನ್ ಅಪರಾಧ ಪೊಲೀಸ ಠಾಣೆಯ ಸಿಬ್ಬಂದಿಯಾದ ಶ್ರೀ ನಾಮದೇವ ನಾಂದ್ರೆ ಕಾರವಾರ ಟೆಕ್ನಿಕಲ್ ಸೆಲ್ ವಿಭಾಗದ ಸಿಬ್ಬಂದಿಯವರಾದ ಉದಯ ಗುನಗಾ ಮತ್ತು ಬಬನ್ ಕದಂ ಇವರು ಈ ಕಾರಾಚರಣೆಯಲ್ಲಿ ಪಾಲ್ಗೊಂಡಿರತ್ತಾರೆ. ವರದಿ: ಮಂಜುನಾಥ್ ಎಫ್ ಎಚ್

nazeer ahamad

Recent Posts

ಮೊರಾರ್ಜಿ ವಸತಿ ಶಾಲೆಯ ಬಾಲಕಿ ಗರ್ಭಿಣಿ! ವರ್ಷಪೂರ್ತಿ ಅತ್ಯಾಚಾರ: ಕಾಮುಕನ ವಿರುದ್ಧ ಪೋಕ್ಸೋ ಕೇಸ್

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…

34 minutes ago

ಮನೆ ಮಾಲೀಕರಿಗೇ ಶಾಕ್ ಕೊಟ್ಟ ಬಾಡಿಗೆದಾರರು! ಮನೆ ಖಾಲಿ ಇದ್ದ ವೇಳೆ 45 ಗ್ರಾಂ ಚಿನ್ನ ದೋಚಿದ ದಂಪತಿ ಅರೆಸ್ಟ್

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…

35 minutes ago

ಅಸ್ಸಾಂಗೆ ಮಾಹಿತಿ ನೀಡದೆ ತೆರಳಿದ ಪ್ರಕರಣ: ಹುಳಿಯಾರು ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…

11 hours ago

ರಾಜಾಜಿನಗರದಲ್ಲಿ ಭೀಕರ ಅವಘಡ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ, ಸವಾರ ಕೋಮಾದಲ್ಲಿ

ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…

11 hours ago

ವೈರಲ್ ವಿಡಿಯೋ ಕುರಿತು ಸ್ಪಷ್ಟನೆ: ಮಗುವಿಗೆ ಹೊಡೆದ ಮಹಿಳೆ ಅಂಗನವಾಡಿ ಕಾರ್ಯಕರ್ತೆ ಅಲ್ಲ, ಮಗುವಿನ ತಾಯಿಯೇ ಎಂಬ ಮಾಹಿತಿ

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…

11 hours ago

ವೃದ್ಧ ದೂರುದಾರನ ಎದುರು ಮೇಜಿನ ಮೇಲೆ ಕಾಲು: ಮಹಿಳಾ ಕಾನ್‌ಸ್ಟೇಬಲ್ ಅಮಾನತು, ವೈರಲ್ ಫೋಟೋಗೆ ಇಲಾಖೆ ಕಂಗಾಲು

ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…

11 hours ago