Categories: CrimeLatest

ಶಿವಮೊಗ್ಗದಲ್ಲಿ ತಲೆಮರೆಸಿಕೊಂಡಿದ್ದ ಜಿಂಕೆ ಮಾಂಸ ಪ್ರಕರಣದ ಪ್ರಮುಖ ಆರೋಪಿ ಬಂಧನ

ಮುಂಡಗೋಡ: ಅರಣ್ಯ ವಲಯದ ಇಂದೂರು ಶಾಖೆಯ ನಂದಿಕಟ್ಟ ಗಸ್ತು ವ್ಯಾಪ್ತಿಯಲ್ಲಿ ಜುಲೈ 17ರಂದು ಪತ್ತೆಯಾದ ಅಕ್ರಮ ಜಿಂಕೆ ಮಾಂಸ ಪ್ರಕರಣದ ಪ್ರಮುಖ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶಿವಮೊಗ್ಗ ಜಿಲ್ಲೆಯ ಆನವಟ್ಟಿ ಗ್ರಾಮದಲ್ಲಿ ಬಂಧಿಸಿ ನ್ಯಾಯಾಂಗ ಪ್ರಕ್ರಿಯೆಗೆ ಒಳಪಡಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಆರೋಪಿ ರಮೇಶ್ ಅವರನ್ನು ಜುಲೈ 17ರಂದೇ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಆದರೆ ಮತ್ತೋರ್ವ ಪ್ರಮುಖ ಆರೋಪಿ ವಸಂತ ಕೊರವರ್ (ಗಾಂಧಿನಗರ, ಮುಂಡಗೋಡ) ಪ್ರಕರಣದ ಬಳಿಕ ಶಿವಮೊಗ್ಗ ಜಿಲ್ಲೆಗೆ ಪರಾರಿಯಾಗಿದ್ದನು.
ಆರೋಪಿಯ ಪತ್ತೆಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಸತತ 50 ಗಂಟೆಗಳ ಕಾಲ ವಿವಿಧ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿದರು. ಖಚಿತ ಮಾಹಿತಿ ಆಧರಿಸಿ ಜುಲೈ 19ರಂದು ಶಿವಮೊಗ್ಗ ಜಿಲ್ಲೆಯ ಆನವಟ್ಟಿಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದರು.
ಬಂಧಿತ ಆರೋಪಿಯನ್ನು ನ್ಯಾಯಾಂಗ ಪ್ರಕ್ರಿಯೆಗೆ ಒಳಪಡಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ತನಿಖೆ ಹಾಗೂ ಕಾರ್ಯಾಚರಣೆ ಮುಂದುವರಿದಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಈ ಯಶಸ್ವಿ ಕಾರ್ಯಾಚರಣೆಯು ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಶ್ರೀ ಅಜೀಜ್ ಶೇಖ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಶ್ರೀ ಈರೇಶ್ ಕಬ್ಬಿನ ಅವರ ಮಾರ್ಗದರ್ಶನದಲ್ಲಿ, ಮುಂಡಗೋಡ ವಲಯ ಅರಣ್ಯಾಧಿಕಾರಿ ಶ್ರೀ ಅಪ್ಪಾರಾವ್ ಕಲಶೆಟ್ಟಿ ಅವರ ನೇತೃತ್ವದಲ್ಲಿ ನಡೆಯಿತು.
ಕಾರ್ಯಾಚರಣೆಯಲ್ಲಿ ಡಿಆರ್‌ಎಫ್‌ಒಗಳಾದ ಕು. ಸುನೀತಾ, ರಾಕೇಶ್ ಆನವೇರಿ, ಅರ್ಜುನ್ ಮೊರಬ ಹಾಗೂ ಗಸ್ತು ಅರಣ್ಯ ಪಾಲಕರಾದ ಅಮಿತ ಸಣ್ಣಕ್ಕಿ, ಮುಸ್ತಾಕ್ ಅಲಿ, ಮರ್ದಾನ್ ಅಲಿ, ಸಂತೋಷ್, ರಾಘವೇಂದ್ರ, ಶಿವಾನಂದ ಸೇರಿದಂತೆ ಇತರ ಸಿಬ್ಬಂದಿ ಭಾಗವಹಿಸಿದ್ದರು.

ಭ್ರಷ್ಟರ ಬೇಟೆ

Recent Posts

₹300 ಮೌಲ್ಯದ ದಿನಸಿಗೆ ಆಸೆ! ಕೋಟಿ ಮೌಲ್ಯದ ಫ್ಲ್ಯಾಟ್ ನಿವಾಸಿಗಳ ನಡೆ ಬಯಲಿಗೆ ತಂದ ಡೆಲಿವರಿ ಬಾಯ್ ಎಡವಟ್ಟು

ನೋಯ್ಡಾದ ಪ್ರತಿಷ್ಠಿತ ಅಪಾರ್ಟ್‌ಮೆಂಟ್ ಸೊಸೈಟಿಯೊಂದರಲ್ಲಿ ನಡೆದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಕೇವಲ ₹300 ಮೌಲ್ಯದ ದಿನಸಿ…

45 minutes ago

ಪ್ರಶ್ನೆಪತ್ರಿಕೆ ಸೋರಿಕೆ ಆರೋಪಿಗಳ ವಿರುದ್ಧ ಕ್ರಮ ಎಲ್ಲಿದೆ? ನ್ಯಾಯ ಕೇಳಿದ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರಕ್ಕೆ ಆಕ್ರೋಶ

ನವದೆಹಲಿ: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳ ವಿರುದ್ಧ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಸಮಗ್ರ ತನಿಖೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು…

46 minutes ago

ಪತ್ನಿಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ಕೊಡಲು ಬಂದ ಪತಿ; ಅಕ್ರಮ ಸಂಬಂಧ ಕಂಡು ಇಂಜಿನಿಯರ್ ಪತ್ನಿಯಿಂದ ಕೊಲೆಯಾದ..!

ಭುವನೇಶ್ವರ: ಪತ್ನಿಯ ಹುಟ್ಟುಹಬ್ಬದಂದು ಆಕೆಗೆ ಸರ್ಪ್ರೈಸ್ ನೀಡಲು ಸಂತಸದಿಂದ ಮನೆಗೆ ಬಂದಿದ್ದ ಇಂಜಿನಿಯರ್‌ ಒಬ್ಬರು ಕೆಲವೇ ಗಂಟೆಗಳಲ್ಲಿ ರಕ್ತದ ಮಡುವಿನಲ್ಲಿ…

47 minutes ago

ಬಾಗಲಕೋಟೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಬಯಲು: ಡಿಸಿ ಸೇರಿ ಗಣಿ ಇಲಾಖೆ ಅಧಿಕಾರಿಗಳು, ಐವರು ತಹಶೀಲ್ದಾರ್‌ಗಳ ವಿರುದ್ಧ ಲೋಕಾಯುಕ್ತ ಪ್ರಕರಣ

ಬಾಗಲಕೋಟೆ ಜಿಲ್ಲೆಯಲ್ಲಿ ವ್ಯಾಪಕ ಪ್ರಮಾಣದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆದಿರುವುದು ಲೋಕಾಯುಕ್ತ ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಗಣಿ ಮತ್ತು ಭೂವಿಜ್ಞಾನ…

5 hours ago

ಶೋಭಕ್ಕ, ಬಿಡದಿ ಟೌನ್‌ಶಿಪ್‌ಗೆ ಟೆಂಡರ್ ಕರೆದಿದ್ದು ನಿಮ್ಮ ಯಜಮಾನ’ ಹೇಳಿಕೆ ವಿವಾದ: ನೋವಾಗಿದ್ದರೆ ಸಂಪೂರ್ಣ ವಿಷಾದ ಎಂದ ಶಾಸಕ ಎಚ್.ಸಿ. ಬಾಲಕೃಷ್ಣ

ಮಾಗಡಿ ಕಾಂಗ್ರೆಸ್ ಶಾಸಕ ಎಚ್.ಸಿ. ಬಾಲಕೃಷ್ಣ ಅವರು ತಮ್ಮ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿ, ತಮ್ಮ ಮಾತಿನಿಂದ ಯಾರಿಗಾದರೂ…

5 hours ago

ಒಂಟಿಯಾಗಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ: ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

ನಂಜನಗೂಡು: ಮೈಸೂರಿನ ನಂಜನಗೂಡು ತಾಲೂಕಿನ ಕಡಬೂರು ಗ್ರಾಮದಲ್ಲಿ ಒಂಟಿಯಾಗಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪದ ಮೇಲೆ…

21 hours ago