ಕೋಲಾರ: ಆಂಧ್ರ ಪ್ರದೇಶ ಪೊಲೀಸರು ಚಿನ್ನದ ರಾಬರಿ ಪ್ರಕರಣದಲ್ಲಿ ಕೆಜಿಎಫ್ ಮೂಲದ ಕಾಂಗ್ರೆಸ್ ಮುಖಂಡನನ್ನು ಬಂಧಿಸಿರುವ ಘಟನೆ ರಾಜ್ಯ ರಾಜಕೀಯ ವಲಯದಲ್ಲಿ ಸದ್ದು ಮಾಡಿದೆ. ಜಿಲ್ಲೆಯಲ್ಲಿ ಗುರುತಿಸಿಕೊಂಡಿರುವ ಕಾಂಗ್ರೆಸ್ ಮುಖಂಡ ಹಾಗೂ ಹಾಲಿ ನಗರಸಭಾ ಸದಸ್ಯ ಜಯಪಾಲ್ ಅವರು ಈ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ.
ಈ ಘಟನೆ ಏಪ್ರಿಲ್ 2ರ ರಾತ್ರಿ ತಮಿಳುನಾಡಿನಿಂದ ಚಿನ್ನದ ವ್ಯಾಪಾರಿಯಾಗಿರುವ ಚೇತನ್ ಜೈನ್ ಎಂಬುವವರು ಚಿನ್ನದ ಬಂಡಲದೊಂದಿಗೆ ಕೆಜಿಎಫ್ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ನಡೆದಿದೆ. ಚಾಲಿಸುತ್ತಿದ್ದ ಕಾರನ್ನು ಆಂಧ್ರ–ತಮಿಳುನಾಡು ಗಡಿಯಲ್ಲಿ ಇರುವ ನಾಯಕನೇರಿ ಘಾಟ್ ಬಳಿ ಆರೋಪಿಗಳ ತಂಡ ಅಡ್ಡಗಟ್ಟಿದ್ದು, ಸುಮಾರು 3.5 ಕಿಲೋಗ್ರಾಂ ಚಿನ್ನವನ್ನು ದೋಚಲಾಗಿದೆ.
ರಾಬರಿಯಲ್ಲಿ ಭಾಗಿಯಾದವರು ನಾಲ್ವರು ಎಂಬ ಮಾಹಿತಿ ದೊರೆತಿದೆ. ಜಯಪಾಲ್ ಅವರ ಜೊತೆ ಕಾರು ಚಾಲಕ ಮುಕ್ರಂ ಪಾಷಾ ಮತ್ತು ತಮಿಳುನಾಡು ಮೂಲದ ಇಬ್ಬರು ಇನ್ನಿತರರು ಸೇರಿ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯ ಬಳಿಕ ವಿಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಆಂಧ್ರದ ವಿಕೋಟ ಪೊಲೀಸರು ಈಗಾಗಲೇ ಪ್ರಕರಣ ಸಂಬಂಧ ಆರೋಪಿತರಿಂದ ದೋಚಲಾದ ಚಿನ್ನ ಹಾಗೂ ರಾಬರಿಯಲ್ಲಿ ಬಳಸಲಾದ ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆ ಮುಂದುವರಿದಿದೆ.
ಶಿಕ್ಷಣಕ್ಕೆ ಬೆಂಬಲ ನೀಡಿ ಪತ್ನಿಗೆ ಸರ್ಕಾರಿ ಉದ್ಯೋಗ ಸಿಗುವಂತೆ ಮಾಡಿದ ಗಂಡನೊಬ್ಬ, ನಂತರ ಪತ್ನಿಯ ನಿರ್ಲಕ್ಷ್ಯ ಮತ್ತು ಕಿರುಕುಳದಿಂದ ಮನನೊಂದು…
ಚಿಕ್ಕಮಗಳೂರು ಜಿಲ್ಲೆಯ ಕಳಸದಿಂದ ಬಾಳೆಹೊನ್ನೂರುವರೆಗೆ ಭದ್ರಾ ನದಿ ಪ್ರದೇಶದಲ್ಲಿ ಇತ್ತೀಚೆಗೆ ಕಡಿಮೆ ಎತ್ತರದಲ್ಲಿ ಹಾರಾಡುತ್ತಿದ್ದ ನಿಗೂಢ ವಿಮಾನ ಸಾರ್ವಜನಿಕರಲ್ಲಿ ಭೀತಿ…
ಧಾರವಾಡ ಜಿಲ್ಲೆಯ ರಾಮಾಪುರ ಅರಣ್ಯ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ…
ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಹತ್ವದ ಮಾಹಿತಿ ಬಹಿರಂಗವಾಗಿದೆ. ವಿಧಾನಸಭೆಯಲ್ಲಿ ಸಂಡೂರು ಕ್ಷೇತ್ರದ ಶಾಸಕ…
ಕರ್ನಾಟಕ ಸರ್ಕಾರವು ನಾಗರಿಕ ಸೇವೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಮಹತ್ವದ ಹೊಸ ನಿಯಮ ಜಾರಿಗೆ ತಂದಿದೆ. ಇನ್ಮುಂದೆ ಸರ್ಕಾರಿ ನೌಕರರು ಮುಂಬಡ್ತಿ…
ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಚಿತ್ರದ ಸದ್ದು ಭಾರತದ ಬಾಕ್ಸ್ ಆಫೀಸ್ನಲ್ಲಿ ಕೇಳಿಬರುತ್ತಿರುವಂತೆಯೇ, ಅದರ ಪ್ರಭಾವ…