ಕೋಲಾರ: ಆಂಧ್ರ ಪ್ರದೇಶ ಪೊಲೀಸರು ಚಿನ್ನದ ರಾಬರಿ ಪ್ರಕರಣದಲ್ಲಿ ಕೆಜಿಎಫ್ ಮೂಲದ ಕಾಂಗ್ರೆಸ್ ಮುಖಂಡನನ್ನು ಬಂಧಿಸಿರುವ ಘಟನೆ ರಾಜ್ಯ ರಾಜಕೀಯ ವಲಯದಲ್ಲಿ ಸದ್ದು ಮಾಡಿದೆ. ಜಿಲ್ಲೆಯಲ್ಲಿ ಗುರುತಿಸಿಕೊಂಡಿರುವ ಕಾಂಗ್ರೆಸ್ ಮುಖಂಡ ಹಾಗೂ ಹಾಲಿ ನಗರಸಭಾ ಸದಸ್ಯ ಜಯಪಾಲ್ ಅವರು ಈ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ.
ಈ ಘಟನೆ ಏಪ್ರಿಲ್ 2ರ ರಾತ್ರಿ ತಮಿಳುನಾಡಿನಿಂದ ಚಿನ್ನದ ವ್ಯಾಪಾರಿಯಾಗಿರುವ ಚೇತನ್ ಜೈನ್ ಎಂಬುವವರು ಚಿನ್ನದ ಬಂಡಲದೊಂದಿಗೆ ಕೆಜಿಎಫ್ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ನಡೆದಿದೆ. ಚಾಲಿಸುತ್ತಿದ್ದ ಕಾರನ್ನು ಆಂಧ್ರ–ತಮಿಳುನಾಡು ಗಡಿಯಲ್ಲಿ ಇರುವ ನಾಯಕನೇರಿ ಘಾಟ್ ಬಳಿ ಆರೋಪಿಗಳ ತಂಡ ಅಡ್ಡಗಟ್ಟಿದ್ದು, ಸುಮಾರು 3.5 ಕಿಲೋಗ್ರಾಂ ಚಿನ್ನವನ್ನು ದೋಚಲಾಗಿದೆ.
ರಾಬರಿಯಲ್ಲಿ ಭಾಗಿಯಾದವರು ನಾಲ್ವರು ಎಂಬ ಮಾಹಿತಿ ದೊರೆತಿದೆ. ಜಯಪಾಲ್ ಅವರ ಜೊತೆ ಕಾರು ಚಾಲಕ ಮುಕ್ರಂ ಪಾಷಾ ಮತ್ತು ತಮಿಳುನಾಡು ಮೂಲದ ಇಬ್ಬರು ಇನ್ನಿತರರು ಸೇರಿ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯ ಬಳಿಕ ವಿಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಆಂಧ್ರದ ವಿಕೋಟ ಪೊಲೀಸರು ಈಗಾಗಲೇ ಪ್ರಕರಣ ಸಂಬಂಧ ಆರೋಪಿತರಿಂದ ದೋಚಲಾದ ಚಿನ್ನ ಹಾಗೂ ರಾಬರಿಯಲ್ಲಿ ಬಳಸಲಾದ ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆ ಮುಂದುವರಿದಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…