Latest

ಮನೆಗೆ ಕನ್ನ ಹಾಕುತ್ತಿದ್ದ ಮತ್ತು ದ್ವಿಚಕ್ರ ವಾಹನಗಳನ್ನು ಕದಿಯುತ್ತಿದ್ದ ಖದೀಮರು ಪೊಲೀಸರ ಬಲೆಗೆ!

ಮೈಸೂರು ನಗರ ಸಿ.ಸಿ.ಬಿ. ಪೊಲೀಸರು ವಿಜಯನಗರ ಪೊಲೀಸ್ ಠಾಣಾ ಕನ್ನಾ ಕಳುವು ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಾಂಕ: ೧೮/೦೭/೨೦೨೨ ರಂದು ಮೈಸೂರು ನಗರ ಸಿಟಿ ಬಸ್ ನಿಲ್ದಾಣದಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿ, ವಿಚಾರಣೆಗೊಳಪಡಿಸಲಾಗಿ, ಈತನು ತನ್ನ ಇನ್ನಿಬ್ಬರು ಸಹಚರರೊಂದಿಗೆ ಸೇರಿಕೊಂಡು ಮೈಸೂರು ನಗರ, ಮೈಸೂರು ಜಿಲ್ಲೆ, ಮಂಡ್ಯ ಜಿಲ್ಲೆ, ಬೆಂಗಳೂರು ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಮನೆ ಕನ್ನ ಕಳುವು ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಈತನು ನೀಡಿದ ಮಾಹಿತಿ ಮೇರೆಗೆ ಈ ಕಳುವು ಪ್ರಕರಣಗಳಲ್ಲಿ ಮಾಲುಗಳನ್ನು ಸ್ವೀಕರಿಸಿ ವಿಲೇವಾರಿ ಮಾಡುತ್ತಿದ್ದ ಮತ್ತೊಬ್ಬ ಆರೋಪಿಯನ್ನು ದಿನಾಂಕ: ೧೮/೦೭/೨೦೨೨ ರಂದು ದಸ್ತಗಿರಿ ಮಾಡಲಾಗಿದ್ದು, ಸದರಿ ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಒಟ್ಟು ೦೯ ಮನೆ ಕನ್ನ ಕಳುವು ಪ್ರಕರಣಗಳಿಗೆ ಸಂಬಂಧಪಟ್ಟಂತೆ, ರೂ. ೧೦,೧೫,೦೦೦/- ಮೌಲ್ಯದ ೧೯೧ ಗ್ರಾಂ ತೂಕದ ಚಿನ್ನಾಭರಣಗಳು, ೧ಕೆ.ಜಿ.೩೩೦ ಗ್ರಾಂ ತೂಕದ ಬೆಳ್ಳಿಯ ಪದಾರ್ಥಗಳು ಒಂದು ಏರ್‌ಗನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ೧ನೇ ಆರೋಪಿಯು ತನ್ನ ಬಾಲ್ಯಾವಸ್ಥೆಯಿಂದಲೂ ಮನೆಗಳ್ಳತನ ಮಾಡಿ, ಬಾಲ ಮಂದಿರದಲ್ಲಿದ್ದು, ಅಲ್ಲಿಂದ ತಪ್ಪಿಸಿಕೊಂಡು ಹೋಗಿ, ನಂತರ ಪ್ರಾಪ್ತ ವಯಸ್ಕಾನಾದ ನಂತರವು ತನ್ನ ಕಳ್ಳತನದ ಪ್ರವೃತ್ತಿಯನ್ನು ಮುಂದುವರೆಸಿಕೊಂಡು ಬಂದಿರುವುದು ವಿಚಾರಣೆಯಿಂದ ತಿಳಿದು ಬಂದಿರುತ್ತದೆ. ಉಳಿದ ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ.
ಈ ಪತ್ತೆ ಕಾರ್ಯದಿಂದ ಮೈಸೂರು ನಗರ ವಿಜಯನಗರ ಠಾಣೆಯ-೦೧, ಮೇಟಗಳ್ಳಿ-೦೧, ಇಲವಾಲ -೦೨, ಮೈಸೂರು ದಕ್ಷಿಣ ಠಾಣೆ-೦೩, ಕೆ.ಆರ್.ಎಸ್. ಠಾಣೆ-೦೧, ಬೆಂಗಳೂರು ಜಿಲ್ಲೆಯ ಕುಂಬಳಗೋಡು ಠಾಣೆ-೦೧ ಮನೆ ಕನ್ನ ಕಳುವು ಪ್ರಕರಣಗಳು ಪತ್ತೆಯಾಗಿರುತ್ತವೆ.
ಸಿ.ಸಿ.ಬಿ. ಪೊಲೀಸರು ಲಕ್ಷ್ಮೀಪುರಂ ಪೊಲೀಸ್ ಠಾಣೆಯ ದ್ವಿ ಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಒಬ್ಬ ಆರೋಪಿಯನ್ನು ದಿನಾಂಕ: ೨೯/೦೬/೨೦೨೨ ರಂದು ದಸ್ತಗಿರಿ ಮಾಡಿ ವಿಚಾರಣೆ ಮಾಡಲಾಗಿ, ಈತನು ಮೈಸೂರು ನಗರ, ಬೆಂಗಳೂರು, ರಾಮನಗರ ಜಿಲ್ಲೆಯ ವಿವಿಧ ಕಡೆಗಳಲ್ಲಿ ದ್ವಿ ಚಕ್ರ ವಾಹನಗಳನ್ನು ಕಳ್ಳತನ ಮಾಡಿರುವುದಾಗಿ ತಿಳಿಸಿದರ ಮೇರೆಗೆ ಆರೋಪಿತನಿಂದ ರೂ. ೯,೦೦,೦೦೦/- ಮೌಲ್ಯದ ವಿವಿಧ ಕಂಪನಿಯ ೦೬ ದ್ವಿ ಚಕ್ರ ವಾಹನಗಳನ್ನು ಅಮಾನತ್ತುಪಡಿಸಿಕೊಂಡಿರುತ್ತಾರೆ.
ಈ ಪತ್ತೆ ಕಾರ್ಯದಿಂದ ಮೈಸೂರು ನಗರ ಲಕ್ಷ್ಮೀಪುರಂ ಠಾಣೆಯ-೦೨, ಬೆಂಗಳೂರು ಬ್ಯಾಟರಾಯನಪುರ-೦೧, ರಾಜರಾಜೇಶ್ವರಿ ನಗರ-೦೧, ಚಾಮರಾಜಪೇಟೆ-೦೧, ರಾಮನಗರ ಜಿಲ್ಲೆಯ ಚನ್ನಪಟ್ಟಣ ಠಾಣೆ-೦೧ ದ್ವಿ ಚಕ್ರ ವಾಹನ ಕಳ್ಳತನ ಪ್ರಕರಣಗಳು ಪತ್ತೆಯಾಗಿರುತ್ತವೆ.
ಮೇಲ್ಕಂಡ ೨ ಪ್ರಕರಣಗಳ ಪತ್ತೆ ಕಾರ್ಯವನ್ನು ಮೈಸೂರು ನಗರದ ಡಿ.ಸಿ.ಪಿ. ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ವಿಭಾಗ ರವರಾದ ಶ್ರೀಮತಿ. ಗೀತ ಎಂ.ಎಸ್., ಐ.ಪಿ.ಎಸ್. ರವರ ಮಾರ್ಗದರ್ಶನದಲ್ಲಿ ಸಿ.ಸಿ.ಬಿ ಘಟಕದ ಎ.ಸಿ.ಪಿ.ರವರಾದ ಶ್ರೀ ಸಿ.ಕೆ.ಅಶ್ವತ್ಥನಾರಾಯಣರವರ ನೇತೃತ್ವದಲ್ಲಿ ಸಿ.ಸಿ.ಬಿ. ಹೆಚ್&ಬಿ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್‌ರವರಾದ ಶ್ರೀ. ಶೇಖರ್.ಜಿ ರವರು ಮತ್ತು ಇತರೇ ಅಧಿಕಾರಿ ಮತ್ತು ಸಿಬ್ಬಂದಿಗಳು ಮಾಡಿರುತ್ತಾರೆ.
ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಪೊಲೀಸ್ ಆಯುಕ್ತರವರಾದ ಡಾ: ಚಂದ್ರಗುಪ್ತ, ಐ.ಪಿ.ಎಸ್. ರವರು ಪ್ರಶಂಸಿಸಿರುತ್ತಾರೆ.

ಭ್ರಷ್ಟರ ಬೇಟೆ

Recent Posts

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

17 hours ago

ಮೈಸೂರಿನಲ್ಲಿ ಐಷಾರಾಮಿ ಕಾರುಗಳ ಮೇಲೆ ಆರ್‌ಟಿಒ ದಾಳಿ: ₹3 ಕೋಟಿ ದಂಡ, ₹15 ಕೋಟಿ ಮೌಲ್ಯದ ವಾಹನ ವಶ

ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು…

18 hours ago

ಕೆ.ಆರ್.ಪೇಟೆ: ಜಮೀನಿನಲ್ಲಿ ಗಾಂಜಾ ಬೆಳೆಯುತ್ತಿದ ವ್ಯಕ್ತಿ ಬಂಧನ

ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ…

19 hours ago

ರ್‍ಯಾಶ್ ಡ್ರೈವಿಂಗ್ ಪ್ರಶ್ನಿಸಿದ ಮಹಿಳೆಗೆ ರ‍್ಯಾಪಿಡೋ ಬೈಕ್ ಚಾಲಕನಿಂದ ಹಲ್ಲೆ: ಪ್ರಕರಣ ದಾಖಲು

ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ‍್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ‍್ಯಾಪಿಡೋ ಚಾಲಕನಿಂದ ಮಹಿಳೆಯ…

20 hours ago

ಪುತ್ತೂರಿನಲ್ಲಿ ಆತ್ಮಹತ್ಯೆ ಆಘಾತ: ಏಳು ತಿಂಗಳ ಗರ್ಭಿಣಿ ನೇಣುಬಿಗಿದುಕೊಂಡು ಜೀವವಿಡುವ ದುರ್ಘಟನೆ

ಪುತ್ತೂರು, ಜೂನ್ 16 – ಪುತ್ತೂರು ಹೊರವಲಯದ ಚಿಕ್ಕಪುತ್ತೂರಿನಲ್ಲಿ ಏಳು ತಿಂಗಳ ಗರ್ಭಿಣಿಯಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ…

21 hours ago

ಕೋಲಾರ್ ಎಸ್‌ಬಿಐ ಎಟಿಎಂ ದರೋಡೆ: ಕಳ್ಳರು ₹27 ಲಕ್ಷ ನಗದು ದೋಚಿ ಪರಾರಿ.!

ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ…

1 day ago