Latest

ಮನೆಗೆ ಕನ್ನ ಹಾಕುತ್ತಿದ್ದ ಮತ್ತು ದ್ವಿಚಕ್ರ ವಾಹನಗಳನ್ನು ಕದಿಯುತ್ತಿದ್ದ ಖದೀಮರು ಪೊಲೀಸರ ಬಲೆಗೆ!

ಮೈಸೂರು ನಗರ ಸಿ.ಸಿ.ಬಿ. ಪೊಲೀಸರು ವಿಜಯನಗರ ಪೊಲೀಸ್ ಠಾಣಾ ಕನ್ನಾ ಕಳುವು ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಾಂಕ: ೧೮/೦೭/೨೦೨೨ ರಂದು ಮೈಸೂರು ನಗರ ಸಿಟಿ ಬಸ್ ನಿಲ್ದಾಣದಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿ, ವಿಚಾರಣೆಗೊಳಪಡಿಸಲಾಗಿ, ಈತನು ತನ್ನ ಇನ್ನಿಬ್ಬರು ಸಹಚರರೊಂದಿಗೆ ಸೇರಿಕೊಂಡು ಮೈಸೂರು ನಗರ, ಮೈಸೂರು ಜಿಲ್ಲೆ, ಮಂಡ್ಯ ಜಿಲ್ಲೆ, ಬೆಂಗಳೂರು ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಮನೆ ಕನ್ನ ಕಳುವು ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಈತನು ನೀಡಿದ ಮಾಹಿತಿ ಮೇರೆಗೆ ಈ ಕಳುವು ಪ್ರಕರಣಗಳಲ್ಲಿ ಮಾಲುಗಳನ್ನು ಸ್ವೀಕರಿಸಿ ವಿಲೇವಾರಿ ಮಾಡುತ್ತಿದ್ದ ಮತ್ತೊಬ್ಬ ಆರೋಪಿಯನ್ನು ದಿನಾಂಕ: ೧೮/೦೭/೨೦೨೨ ರಂದು ದಸ್ತಗಿರಿ ಮಾಡಲಾಗಿದ್ದು, ಸದರಿ ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಒಟ್ಟು ೦೯ ಮನೆ ಕನ್ನ ಕಳುವು ಪ್ರಕರಣಗಳಿಗೆ ಸಂಬಂಧಪಟ್ಟಂತೆ, ರೂ. ೧೦,೧೫,೦೦೦/- ಮೌಲ್ಯದ ೧೯೧ ಗ್ರಾಂ ತೂಕದ ಚಿನ್ನಾಭರಣಗಳು, ೧ಕೆ.ಜಿ.೩೩೦ ಗ್ರಾಂ ತೂಕದ ಬೆಳ್ಳಿಯ ಪದಾರ್ಥಗಳು ಒಂದು ಏರ್‌ಗನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ೧ನೇ ಆರೋಪಿಯು ತನ್ನ ಬಾಲ್ಯಾವಸ್ಥೆಯಿಂದಲೂ ಮನೆಗಳ್ಳತನ ಮಾಡಿ, ಬಾಲ ಮಂದಿರದಲ್ಲಿದ್ದು, ಅಲ್ಲಿಂದ ತಪ್ಪಿಸಿಕೊಂಡು ಹೋಗಿ, ನಂತರ ಪ್ರಾಪ್ತ ವಯಸ್ಕಾನಾದ ನಂತರವು ತನ್ನ ಕಳ್ಳತನದ ಪ್ರವೃತ್ತಿಯನ್ನು ಮುಂದುವರೆಸಿಕೊಂಡು ಬಂದಿರುವುದು ವಿಚಾರಣೆಯಿಂದ ತಿಳಿದು ಬಂದಿರುತ್ತದೆ. ಉಳಿದ ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ.
ಈ ಪತ್ತೆ ಕಾರ್ಯದಿಂದ ಮೈಸೂರು ನಗರ ವಿಜಯನಗರ ಠಾಣೆಯ-೦೧, ಮೇಟಗಳ್ಳಿ-೦೧, ಇಲವಾಲ -೦೨, ಮೈಸೂರು ದಕ್ಷಿಣ ಠಾಣೆ-೦೩, ಕೆ.ಆರ್.ಎಸ್. ಠಾಣೆ-೦೧, ಬೆಂಗಳೂರು ಜಿಲ್ಲೆಯ ಕುಂಬಳಗೋಡು ಠಾಣೆ-೦೧ ಮನೆ ಕನ್ನ ಕಳುವು ಪ್ರಕರಣಗಳು ಪತ್ತೆಯಾಗಿರುತ್ತವೆ.
ಸಿ.ಸಿ.ಬಿ. ಪೊಲೀಸರು ಲಕ್ಷ್ಮೀಪುರಂ ಪೊಲೀಸ್ ಠಾಣೆಯ ದ್ವಿ ಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಒಬ್ಬ ಆರೋಪಿಯನ್ನು ದಿನಾಂಕ: ೨೯/೦೬/೨೦೨೨ ರಂದು ದಸ್ತಗಿರಿ ಮಾಡಿ ವಿಚಾರಣೆ ಮಾಡಲಾಗಿ, ಈತನು ಮೈಸೂರು ನಗರ, ಬೆಂಗಳೂರು, ರಾಮನಗರ ಜಿಲ್ಲೆಯ ವಿವಿಧ ಕಡೆಗಳಲ್ಲಿ ದ್ವಿ ಚಕ್ರ ವಾಹನಗಳನ್ನು ಕಳ್ಳತನ ಮಾಡಿರುವುದಾಗಿ ತಿಳಿಸಿದರ ಮೇರೆಗೆ ಆರೋಪಿತನಿಂದ ರೂ. ೯,೦೦,೦೦೦/- ಮೌಲ್ಯದ ವಿವಿಧ ಕಂಪನಿಯ ೦೬ ದ್ವಿ ಚಕ್ರ ವಾಹನಗಳನ್ನು ಅಮಾನತ್ತುಪಡಿಸಿಕೊಂಡಿರುತ್ತಾರೆ.
ಈ ಪತ್ತೆ ಕಾರ್ಯದಿಂದ ಮೈಸೂರು ನಗರ ಲಕ್ಷ್ಮೀಪುರಂ ಠಾಣೆಯ-೦೨, ಬೆಂಗಳೂರು ಬ್ಯಾಟರಾಯನಪುರ-೦೧, ರಾಜರಾಜೇಶ್ವರಿ ನಗರ-೦೧, ಚಾಮರಾಜಪೇಟೆ-೦೧, ರಾಮನಗರ ಜಿಲ್ಲೆಯ ಚನ್ನಪಟ್ಟಣ ಠಾಣೆ-೦೧ ದ್ವಿ ಚಕ್ರ ವಾಹನ ಕಳ್ಳತನ ಪ್ರಕರಣಗಳು ಪತ್ತೆಯಾಗಿರುತ್ತವೆ.
ಮೇಲ್ಕಂಡ ೨ ಪ್ರಕರಣಗಳ ಪತ್ತೆ ಕಾರ್ಯವನ್ನು ಮೈಸೂರು ನಗರದ ಡಿ.ಸಿ.ಪಿ. ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ವಿಭಾಗ ರವರಾದ ಶ್ರೀಮತಿ. ಗೀತ ಎಂ.ಎಸ್., ಐ.ಪಿ.ಎಸ್. ರವರ ಮಾರ್ಗದರ್ಶನದಲ್ಲಿ ಸಿ.ಸಿ.ಬಿ ಘಟಕದ ಎ.ಸಿ.ಪಿ.ರವರಾದ ಶ್ರೀ ಸಿ.ಕೆ.ಅಶ್ವತ್ಥನಾರಾಯಣರವರ ನೇತೃತ್ವದಲ್ಲಿ ಸಿ.ಸಿ.ಬಿ. ಹೆಚ್&ಬಿ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್‌ರವರಾದ ಶ್ರೀ. ಶೇಖರ್.ಜಿ ರವರು ಮತ್ತು ಇತರೇ ಅಧಿಕಾರಿ ಮತ್ತು ಸಿಬ್ಬಂದಿಗಳು ಮಾಡಿರುತ್ತಾರೆ.
ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಪೊಲೀಸ್ ಆಯುಕ್ತರವರಾದ ಡಾ: ಚಂದ್ರಗುಪ್ತ, ಐ.ಪಿ.ಎಸ್. ರವರು ಪ್ರಶಂಸಿಸಿರುತ್ತಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago