ಬೆಂಗಳೂರಿನ ಲಗ್ಗೆರೆಯ ನಿವಾಸ ಒಂದರಲ್ಲಿ ಜನವರಿ 27ರಂದು ಸಂಜೆ ಸುಮಾರಿಗೆ ಮನೆಗೆ ನುಗ್ಗಿ ಕದೀಮರು ಸಿಲೆಂಡರ್ ಕದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸಂಪೂರ್ಣ ಗ್ಯಾಸ್ ತುಂಬಿರುವಂತಹ ಸಿಲಿಂಡರ್ ಅನ್ನು ಸಿಲೆಂಡರ್ ನ ಕೋಣೆಯೊಳಗೆ ಇಟ್ಟು ಬೀಗ ಹಾಕಿದ್ದು ಅದನ್ನು ನೋಡಿಕೊಂಡಿರುವಂತಹ ಕದೀಮರು ಸಂಜೆ ಸುಮಾರಿಗೆ ಯಾರು ಇಲ್ಲದಂತಹ ಸಂದರ್ಭದಲ್ಲಿ ಬೀಗವನ್ನು ಹೊಡೆದು ಸಿಲಿಂಡರ್ ಕದ್ದೊಯ್ದಿದ್ದಾರೆ.
ಸಿಲಿಂಡರ್ ಕದಿಯುವಂತಹ ಸಂದರ್ಭದಲ್ಲಿ ಇಬ್ಬರು ಕದೀಮರು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಒಬ್ಬ ಗೇಟ್ ನ ಬಳಿ ನಿಂತು ಯಾರಾದರೂ ಬರುತ್ತಾರಾ ಎಂದು ಕಾಯುತ್ತಿದ್ದಾರೆ ಇನ್ನೊಬ್ಬ ಬೀಗವನ್ನು ಹೊಡೆದು ಸಿಲಿಂಡರ್ ಹೊತ್ತೊಯ್ಯುತ್ತಾನೆ. ಅನುಮಾನ ಬಾರದಿರಲಿ ಎಂಬ ಕಾರಣಕ್ಕೆ ಹೊಡೆದಿರುವ ಬೀಗವನ್ನು ಸಹ ಕದಿಮರೆ ಕೊಂಡೊಯ್ಯದಿದ್ದಾರೆ. ಆದಕಾರಣ ಮನೆಯವರಿಗೆ ಸಿಲೆಂಡರ್ ಕಳವಾಗಿರುವ ವಿಚಾರ ತಡವಾಗಿ ತಿಳಿದಿದ್ದು ಸಿಸಿಟಿವಿ ಪರಿಶೀಲಿಸಿದ ಬಳಿಕ ಸಂಪೂರ್ಣ ಚಿತ್ರಣದ ಅರಿವಾಗಿರುತ್ತದೆ.
ಈ ವಿಚಾರದ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕದೀಮರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…