ಬೆಂಗಳೂರಿನ ಲಗ್ಗೆರೆಯ ನಿವಾಸ ಒಂದರಲ್ಲಿ ಜನವರಿ 27ರಂದು ಸಂಜೆ ಸುಮಾರಿಗೆ ಮನೆಗೆ ನುಗ್ಗಿ ಕದೀಮರು ಸಿಲೆಂಡರ್ ಕದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸಂಪೂರ್ಣ ಗ್ಯಾಸ್ ತುಂಬಿರುವಂತಹ ಸಿಲಿಂಡರ್ ಅನ್ನು ಸಿಲೆಂಡರ್ ನ ಕೋಣೆಯೊಳಗೆ ಇಟ್ಟು ಬೀಗ ಹಾಕಿದ್ದು ಅದನ್ನು ನೋಡಿಕೊಂಡಿರುವಂತಹ ಕದೀಮರು ಸಂಜೆ ಸುಮಾರಿಗೆ ಯಾರು ಇಲ್ಲದಂತಹ ಸಂದರ್ಭದಲ್ಲಿ ಬೀಗವನ್ನು ಹೊಡೆದು ಸಿಲಿಂಡರ್ ಕದ್ದೊಯ್ದಿದ್ದಾರೆ.
ಸಿಲಿಂಡರ್ ಕದಿಯುವಂತಹ ಸಂದರ್ಭದಲ್ಲಿ ಇಬ್ಬರು ಕದೀಮರು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಒಬ್ಬ ಗೇಟ್ ನ ಬಳಿ ನಿಂತು ಯಾರಾದರೂ ಬರುತ್ತಾರಾ ಎಂದು ಕಾಯುತ್ತಿದ್ದಾರೆ ಇನ್ನೊಬ್ಬ ಬೀಗವನ್ನು ಹೊಡೆದು ಸಿಲಿಂಡರ್ ಹೊತ್ತೊಯ್ಯುತ್ತಾನೆ. ಅನುಮಾನ ಬಾರದಿರಲಿ ಎಂಬ ಕಾರಣಕ್ಕೆ ಹೊಡೆದಿರುವ ಬೀಗವನ್ನು ಸಹ ಕದಿಮರೆ ಕೊಂಡೊಯ್ಯದಿದ್ದಾರೆ. ಆದಕಾರಣ ಮನೆಯವರಿಗೆ ಸಿಲೆಂಡರ್ ಕಳವಾಗಿರುವ ವಿಚಾರ ತಡವಾಗಿ ತಿಳಿದಿದ್ದು ಸಿಸಿಟಿವಿ ಪರಿಶೀಲಿಸಿದ ಬಳಿಕ ಸಂಪೂರ್ಣ ಚಿತ್ರಣದ ಅರಿವಾಗಿರುತ್ತದೆ.
ಈ ವಿಚಾರದ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕದೀಮರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…