ಖಾನಾಪೂರ : ತಾಲೂಕಿನ ನಂದಗಡ ಪೋಲಿಸರು ಮಿಂಚಿನ ಕಾರ್ಯಾಚರಣೆ ನಡೆಸಿ ಅಕ್ರಮ ವಾಗಿ ಶ್ರೀಗಂಧದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಖಾನಾಪೂರ ತಾಲೂಕಿನ ನಂದಗಡ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿನ ಸಂಗೋಳ್ಳಿ ರಾಯಣ್ಣನನ್ನು ಗಲ್ಲಿಗೆ ಏರಿಸಿದ ಸ್ಥಳದ ಪಕ್ಕದಲ್ಲಿಯೆ ಆತ ಶ್ರೀಗಂಧದ ಗಿಡವನ್ನು ಕಳ್ಳತನದಿಂದ ಕಡಿದು ಅದರ ತುಂಡುಗಳನ್ನು ಸರ್ಕಾರದಿಂದ ಯಾವುದೇ ಪರವಾನಿಗೆ ಇಲ್ಲದೆ, ನಿರ್ಬಯವಾಗಿ ತನ್ನ ಕಬ್ಜಾದಲ್ಲಿ ಇಟ್ಟುಕೊಂಡು ಕಾನೂನು ಬಾಹಿರವಾಗಿ ತನ್ನ ಸ್ವಂತ ಪಾಯ್ದೆಗೊಸ್ಕರ ಅಕ್ರಮವಾಗಿ ಸಾಗಿಸುವ ಖಚಿತ ಮಾಹಿತಿ ಮೇರೆಗೆ ನಂದಗಡ ಪೋಲಿಸ್ ಠಾಣೆಯ ಎ.ಎಸ್.ಐ .ಎಚ್.ಶ್ರೀನಿವಾಸ ಅವರ ಮಾರ್ಗದರ್ಶನದಲ್ಲಿ ಎಸ್.ಬಿ.ಬೇಳವಡಿ,ಎಮ್.ಎಮ್.ಮುಲ್ಲಾ ,ಯು.ಬಿ.ಶಿಂತ್ರಿ , ಬಸವರಾಜ ಲಮಾಣಿ ಅವರು ದಾಳಿ ನಡೆಸಿ ಆರೋಪಿಯಾದ ಬಿದರಬಾವಿ ಗ್ರಾಮದ ಆನಂದ ಮಾರುತಿ ರಾಮಣ್ಣನವರ ಈತನನ್ನು ಬಂಧಿಸಿ ಇತನಿಂದ ಶ್ರೀಗಂಧದ ಕಟ್ಟಿಗೆಯ ತುಂಡುಗಳನ್ನು ಜಪ್ತಿ ಮಾಡಿಕೊಂಡು ಅಪರಾಧ ಸಂಖ್ಯೆ 35/2023 ಕಲಂ 379 ಐಪಿಸಿ ಮತ್ತು ಕಲಂ 86,87 ಕರ್ನಾಟಕ ಅರಣ್ಯ ಅಧಿನಿಯಮ 1963 ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
ವರದಿ : ಚರಂತಯ್ಯ ಹಿರೇಮಠ.
ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…
ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…