ಖಾನಾಪೂರ : ತಾಲೂಕಿನ ನಂದಗಡ ಪೋಲಿಸರು ಮಿಂಚಿನ ಕಾರ್ಯಾಚರಣೆ ನಡೆಸಿ ಅಕ್ರಮ ವಾಗಿ ಶ್ರೀಗಂಧದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಖಾನಾಪೂರ ತಾಲೂಕಿನ ನಂದಗಡ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿನ ಸಂಗೋಳ್ಳಿ ರಾಯಣ್ಣನನ್ನು ಗಲ್ಲಿಗೆ ಏರಿಸಿದ ಸ್ಥಳದ ಪಕ್ಕದಲ್ಲಿಯೆ ಆತ ಶ್ರೀಗಂಧದ ಗಿಡವನ್ನು ಕಳ್ಳತನದಿಂದ ಕಡಿದು ಅದರ ತುಂಡುಗಳನ್ನು ಸರ್ಕಾರದಿಂದ ಯಾವುದೇ ಪರವಾನಿಗೆ ಇಲ್ಲದೆ, ನಿರ್ಬಯವಾಗಿ ತನ್ನ ಕಬ್ಜಾದಲ್ಲಿ ಇಟ್ಟುಕೊಂಡು ಕಾನೂನು ಬಾಹಿರವಾಗಿ ತನ್ನ ಸ್ವಂತ ಪಾಯ್ದೆಗೊಸ್ಕರ ಅಕ್ರಮವಾಗಿ ಸಾಗಿಸುವ ಖಚಿತ ಮಾಹಿತಿ ಮೇರೆಗೆ ನಂದಗಡ ಪೋಲಿಸ್ ಠಾಣೆಯ ಎ.ಎಸ್.ಐ .ಎಚ್.ಶ್ರೀನಿವಾಸ ಅವರ ಮಾರ್ಗದರ್ಶನದಲ್ಲಿ ಎಸ್.ಬಿ.ಬೇಳವಡಿ,ಎಮ್.ಎಮ್.ಮುಲ್ಲಾ ,ಯು.ಬಿ.ಶಿಂತ್ರಿ , ಬಸವರಾಜ ಲಮಾಣಿ ಅವರು ದಾಳಿ ನಡೆಸಿ ಆರೋಪಿಯಾದ ಬಿದರಬಾವಿ ಗ್ರಾಮದ ಆನಂದ ಮಾರುತಿ ರಾಮಣ್ಣನವರ ಈತನನ್ನು ಬಂಧಿಸಿ ಇತನಿಂದ ಶ್ರೀಗಂಧದ ಕಟ್ಟಿಗೆಯ ತುಂಡುಗಳನ್ನು ಜಪ್ತಿ ಮಾಡಿಕೊಂಡು ಅಪರಾಧ ಸಂಖ್ಯೆ 35/2023 ಕಲಂ 379 ಐಪಿಸಿ ಮತ್ತು ಕಲಂ 86,87 ಕರ್ನಾಟಕ ಅರಣ್ಯ ಅಧಿನಿಯಮ 1963 ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
ವರದಿ : ಚರಂತಯ್ಯ ಹಿರೇಮಠ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…