Latest

ಖತರ್ನಾಕ್ ಮಂಕಿ ಕ್ಯಾಪ್ ಗ್ಯಾಂಗ್ ಈಗ ಕಾಮಸಮುದ್ರಂ ಪೊಲೀಸರ ಅತಿಥಿ.

ಕೋಲಾರ ಮತ್ತು ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ರಾತ್ರಿ ಸಮಯ ಮಂಕಿ ಕ್ಯಾಪ್‌ ಧರಿಸಿ ಮನೆ ಕಳ್ಳತನದ ಹಲವು ಪ್ರಕರಣಗಳಲ್ಲಿ ಅಂತರ್ ರಾಜ್ಯ ಖತರ್ನಾಕ್ ಮಂಕಿ ಕ್ಯಾಪ್ ಗ್ಯಾಂಗ್ ಭಾಗಿಯಾಗಿದ್ದು ಕೋಲಾರ ಮತ್ತು ಕೆಜಿಎಫ್ ಜಿಲ್ಲಾ ಪೊಲಿಸ್ ಹಲವು ಠಾಣೆಗಳಲ್ಲಿ ಬಿ.ಎನ್.ಎಸ್ (ಭಾರತೀಯ ನ್ಯಾಯ ಸಂಹಿತಾ,2023) ರೀತ್ಯಾ ಪ್ರಕರಣ ದಾಖಲಾಗಿದ್ದು, ನಂತರ ಕೆ.ಜಿ.ಎಪ್ ಪೊಲೀಸ್ ಅಧೀಕ್ಷಕರಾದ ಕೆ.ಎಂ. ಶಾಂತರಾಜು ಐ.ಪಿ.ಎಸ್, ರವರು ಸದರಿ ಮಂಕಿ ಕ್ಯಾಪ್ ಗ್ಯಾಂಗ್ ಪತ್ತೆಗೆ ವಿಶೇಷ ಅಫರಾದ ಪತ್ತೆ ದಳ ರಚನೆ ರಚಿಸಿ ಆ ತಂಡದಲ್ಲಿ ಕಿರಣ್ ಕುಮಾರ್ ಬಿ.ವಿ. ಪಿ.ಎಸ್.ಐ ಕಾಮಸಮುದ್ರಂ ಪೊಲೀಸ್ ಠಾಣೆ ಹಾಗೂ ಹೆಡ್ ಕಾನ್ಸ್‌ಟೇಬಲ್‌ ಮಂಜುನಾಥ್ ರೆಡ್ಡಿ, ಅನಿಲ್ ಕುಮಾರ್, ಮಿನವ್ವರ್ ಪಾಷ, ರಾಮಕೃಷ್ಣಾರೆಡ್ಡಿ, ರಾಮರಾವ್, ಮತ್ತು ಕಾನ್ಸ್‌ಟೇಬಲ್ ಮಂಜುನಾಥ್, ಲಕ್ಷ್ಮಣ್ ತೇಲಿ, ಮುನೇಂದ್ರ, ಚಾಲಕ ಗುರುಮೂರ್ತಿ, ತಾಂತ್ರಿಕ ಸಹಾಯಕ ಚಂದ್ರಶೇಖರ್ ಒಳಗೊಂಡ ತಂಡ, ಪೊಲೀಸ್ ಉಪಾಧೀಕ್ಷಕರಾದ ಪಾಂಡುರಂಗ ರವರ ಮಾರ್ಗದರ್ಶನದಲ್ಲಿ. ಊರಿಗಾಂ ವೃತ್ತ ನೀರಿಕ್ಷಕ ಮಾರ್ಕೊಂಡಯ್ಯ ನೇತೃತ್ವದಲ್ಲಿ ಮಂಕಿ ಕ್ಯಾಪ್ ಗ್ಯಾಂಗ್ ಆರೋಪಿಗಳಾದ ಖಾದರ್ ಬಾಷ ಅಲಿಯಾಸ್ ತೋಟ ಕನಮ ಬಾಬು ಅಲಿಯಾಸ್ ಬಾಬು ಕರ್ನಾಟಕ ರಾಜ್ಯ, ಆರೀಫ್ ಹರಿಯಾಣ ರಾಜ್ಯ, ಮುಷ್ಠಾಖ್ ಖಾನ್ ಹರಿಯಾಣ ರಾಜ್ಯ, ರವರನ್ನು ವಿಶೇಷ ಅಫರಾದ ಪತ್ತೆ ದಳ ಪತ್ತೆ ಮಾಡಿ ವಿಚಾರಣೆ ಮಾಡಿದಾಗ ಹರಿಯಾಣ ಮೂಲದ ಮೇವತ್ ಜಿಲ್ಲೆ (ನುಹ್ ಜಿಲ್ಲೆ) ಯವರಾಗಿದ್ದಾರೆ.

ಈ ಮಂಕಿ ಕ್ಯಾಪ್ ಗ್ಯಾಂಗ್ ಕರ್ನಾಟಕ ರಾಜ್ಯದ ಕೋಲಾರ ಜಿಲ್ಲೆಯ, ಕೆಜಿಎಫ್, ರಾಬರ್ಟಸನ್ ಪೇಟೆ, ಬಂಗಾರಪೇಟೆ , ಕಾಮಸಮುದ್ರಂ, ಬೇತಮಂಗಲ ಠಾಣೆಗಳಲ್ಲಿ ಮತ್ತು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಒಟ್ಟು 10 ಪ್ರಕರಣಗಳು ಹಾಗು ಆಂದ್ರಪ್ರದೇಶ ರಾಜ್ಯದ ಚಿತ್ತೂರು ಜಿಲ್ಲೆಯಲ್ಲಿ 02 ಪ್ರಕರಣ ಅತ್ತೆಯಾಗಿದೆ. ಆರೋಪಿಗಳ ಕಡೆಯಿಂದ 67 ಗ್ರಾಂ ಚಿನ್ನಾಭರಣಗಳು, 03 ಜೊತೆ ಬೆಳ್ಳಿ ಕಾಲು ಚೈನುಗಳು, 01 ಪಲ್ಸರ್ ಬೈಕ್ ಮತ್ತು 01 ಹೀರೋ ಪ್ಯಾಷನ್ ಪ್ಲಸ್ ಬೈಕ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದರ ಒಟ್ಟು ಮೌಲ್ಯ 7,60,000/- ರೂಗಳು, ಮತ್ತು ಆರೋಪಿಗಳಾದ 03 ಜನರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.  ವರದಿ: ರೋಶನ್ ಜಮೀರ್

nazeer ahamad

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

11 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

11 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

11 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

1 day ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

1 day ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

1 day ago