ಕೋಲಾರ ಮತ್ತು ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ರಾತ್ರಿ ಸಮಯ ಮಂಕಿ ಕ್ಯಾಪ್ ಧರಿಸಿ ಮನೆ ಕಳ್ಳತನದ ಹಲವು ಪ್ರಕರಣಗಳಲ್ಲಿ ಅಂತರ್ ರಾಜ್ಯ ಖತರ್ನಾಕ್ ಮಂಕಿ ಕ್ಯಾಪ್ ಗ್ಯಾಂಗ್ ಭಾಗಿಯಾಗಿದ್ದು ಕೋಲಾರ ಮತ್ತು ಕೆಜಿಎಫ್ ಜಿಲ್ಲಾ ಪೊಲಿಸ್ ಹಲವು ಠಾಣೆಗಳಲ್ಲಿ ಬಿ.ಎನ್.ಎಸ್ (ಭಾರತೀಯ ನ್ಯಾಯ ಸಂಹಿತಾ,2023) ರೀತ್ಯಾ ಪ್ರಕರಣ ದಾಖಲಾಗಿದ್ದು, ನಂತರ ಕೆ.ಜಿ.ಎಪ್ ಪೊಲೀಸ್ ಅಧೀಕ್ಷಕರಾದ ಕೆ.ಎಂ. ಶಾಂತರಾಜು ಐ.ಪಿ.ಎಸ್, ರವರು ಸದರಿ ಮಂಕಿ ಕ್ಯಾಪ್ ಗ್ಯಾಂಗ್ ಪತ್ತೆಗೆ ವಿಶೇಷ ಅಫರಾದ ಪತ್ತೆ ದಳ ರಚನೆ ರಚಿಸಿ ಆ ತಂಡದಲ್ಲಿ ಕಿರಣ್ ಕುಮಾರ್ ಬಿ.ವಿ. ಪಿ.ಎಸ್.ಐ ಕಾಮಸಮುದ್ರಂ ಪೊಲೀಸ್ ಠಾಣೆ ಹಾಗೂ ಹೆಡ್ ಕಾನ್ಸ್ಟೇಬಲ್ ಮಂಜುನಾಥ್ ರೆಡ್ಡಿ, ಅನಿಲ್ ಕುಮಾರ್, ಮಿನವ್ವರ್ ಪಾಷ, ರಾಮಕೃಷ್ಣಾರೆಡ್ಡಿ, ರಾಮರಾವ್, ಮತ್ತು ಕಾನ್ಸ್ಟೇಬಲ್ ಮಂಜುನಾಥ್, ಲಕ್ಷ್ಮಣ್ ತೇಲಿ, ಮುನೇಂದ್ರ, ಚಾಲಕ ಗುರುಮೂರ್ತಿ, ತಾಂತ್ರಿಕ ಸಹಾಯಕ ಚಂದ್ರಶೇಖರ್ ಒಳಗೊಂಡ ತಂಡ, ಪೊಲೀಸ್ ಉಪಾಧೀಕ್ಷಕರಾದ ಪಾಂಡುರಂಗ ರವರ ಮಾರ್ಗದರ್ಶನದಲ್ಲಿ. ಊರಿಗಾಂ ವೃತ್ತ ನೀರಿಕ್ಷಕ ಮಾರ್ಕೊಂಡಯ್ಯ ನೇತೃತ್ವದಲ್ಲಿ ಮಂಕಿ ಕ್ಯಾಪ್ ಗ್ಯಾಂಗ್ ಆರೋಪಿಗಳಾದ ಖಾದರ್ ಬಾಷ ಅಲಿಯಾಸ್ ತೋಟ ಕನಮ ಬಾಬು ಅಲಿಯಾಸ್ ಬಾಬು ಕರ್ನಾಟಕ ರಾಜ್ಯ, ಆರೀಫ್ ಹರಿಯಾಣ ರಾಜ್ಯ, ಮುಷ್ಠಾಖ್ ಖಾನ್ ಹರಿಯಾಣ ರಾಜ್ಯ, ರವರನ್ನು ವಿಶೇಷ ಅಫರಾದ ಪತ್ತೆ ದಳ ಪತ್ತೆ ಮಾಡಿ ವಿಚಾರಣೆ ಮಾಡಿದಾಗ ಹರಿಯಾಣ ಮೂಲದ ಮೇವತ್ ಜಿಲ್ಲೆ (ನುಹ್ ಜಿಲ್ಲೆ) ಯವರಾಗಿದ್ದಾರೆ.
ಈ ಮಂಕಿ ಕ್ಯಾಪ್ ಗ್ಯಾಂಗ್ ಕರ್ನಾಟಕ ರಾಜ್ಯದ ಕೋಲಾರ ಜಿಲ್ಲೆಯ, ಕೆಜಿಎಫ್, ರಾಬರ್ಟಸನ್ ಪೇಟೆ, ಬಂಗಾರಪೇಟೆ , ಕಾಮಸಮುದ್ರಂ, ಬೇತಮಂಗಲ ಠಾಣೆಗಳಲ್ಲಿ ಮತ್ತು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಒಟ್ಟು 10 ಪ್ರಕರಣಗಳು ಹಾಗು ಆಂದ್ರಪ್ರದೇಶ ರಾಜ್ಯದ ಚಿತ್ತೂರು ಜಿಲ್ಲೆಯಲ್ಲಿ 02 ಪ್ರಕರಣ ಅತ್ತೆಯಾಗಿದೆ. ಆರೋಪಿಗಳ ಕಡೆಯಿಂದ 67 ಗ್ರಾಂ ಚಿನ್ನಾಭರಣಗಳು, 03 ಜೊತೆ ಬೆಳ್ಳಿ ಕಾಲು ಚೈನುಗಳು, 01 ಪಲ್ಸರ್ ಬೈಕ್ ಮತ್ತು 01 ಹೀರೋ ಪ್ಯಾಷನ್ ಪ್ಲಸ್ ಬೈಕ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದರ ಒಟ್ಟು ಮೌಲ್ಯ 7,60,000/- ರೂಗಳು, ಮತ್ತು ಆರೋಪಿಗಳಾದ 03 ಜನರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ವರದಿ: ರೋಶನ್ ಜಮೀರ್
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…