Latest

ಖತರ್ನಾಕ್ ಮಂಕಿ ಕ್ಯಾಪ್ ಗ್ಯಾಂಗ್ ಈಗ ಕಾಮಸಮುದ್ರಂ ಪೊಲೀಸರ ಅತಿಥಿ.

ಕೋಲಾರ ಮತ್ತು ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ರಾತ್ರಿ ಸಮಯ ಮಂಕಿ ಕ್ಯಾಪ್‌ ಧರಿಸಿ ಮನೆ ಕಳ್ಳತನದ ಹಲವು ಪ್ರಕರಣಗಳಲ್ಲಿ ಅಂತರ್ ರಾಜ್ಯ ಖತರ್ನಾಕ್ ಮಂಕಿ ಕ್ಯಾಪ್ ಗ್ಯಾಂಗ್ ಭಾಗಿಯಾಗಿದ್ದು ಕೋಲಾರ ಮತ್ತು ಕೆಜಿಎಫ್ ಜಿಲ್ಲಾ ಪೊಲಿಸ್ ಹಲವು ಠಾಣೆಗಳಲ್ಲಿ ಬಿ.ಎನ್.ಎಸ್ (ಭಾರತೀಯ ನ್ಯಾಯ ಸಂಹಿತಾ,2023) ರೀತ್ಯಾ ಪ್ರಕರಣ ದಾಖಲಾಗಿದ್ದು, ನಂತರ ಕೆ.ಜಿ.ಎಪ್ ಪೊಲೀಸ್ ಅಧೀಕ್ಷಕರಾದ ಕೆ.ಎಂ. ಶಾಂತರಾಜು ಐ.ಪಿ.ಎಸ್, ರವರು ಸದರಿ ಮಂಕಿ ಕ್ಯಾಪ್ ಗ್ಯಾಂಗ್ ಪತ್ತೆಗೆ ವಿಶೇಷ ಅಫರಾದ ಪತ್ತೆ ದಳ ರಚನೆ ರಚಿಸಿ ಆ ತಂಡದಲ್ಲಿ ಕಿರಣ್ ಕುಮಾರ್ ಬಿ.ವಿ. ಪಿ.ಎಸ್.ಐ ಕಾಮಸಮುದ್ರಂ ಪೊಲೀಸ್ ಠಾಣೆ ಹಾಗೂ ಹೆಡ್ ಕಾನ್ಸ್‌ಟೇಬಲ್‌ ಮಂಜುನಾಥ್ ರೆಡ್ಡಿ, ಅನಿಲ್ ಕುಮಾರ್, ಮಿನವ್ವರ್ ಪಾಷ, ರಾಮಕೃಷ್ಣಾರೆಡ್ಡಿ, ರಾಮರಾವ್, ಮತ್ತು ಕಾನ್ಸ್‌ಟೇಬಲ್ ಮಂಜುನಾಥ್, ಲಕ್ಷ್ಮಣ್ ತೇಲಿ, ಮುನೇಂದ್ರ, ಚಾಲಕ ಗುರುಮೂರ್ತಿ, ತಾಂತ್ರಿಕ ಸಹಾಯಕ ಚಂದ್ರಶೇಖರ್ ಒಳಗೊಂಡ ತಂಡ, ಪೊಲೀಸ್ ಉಪಾಧೀಕ್ಷಕರಾದ ಪಾಂಡುರಂಗ ರವರ ಮಾರ್ಗದರ್ಶನದಲ್ಲಿ. ಊರಿಗಾಂ ವೃತ್ತ ನೀರಿಕ್ಷಕ ಮಾರ್ಕೊಂಡಯ್ಯ ನೇತೃತ್ವದಲ್ಲಿ ಮಂಕಿ ಕ್ಯಾಪ್ ಗ್ಯಾಂಗ್ ಆರೋಪಿಗಳಾದ ಖಾದರ್ ಬಾಷ ಅಲಿಯಾಸ್ ತೋಟ ಕನಮ ಬಾಬು ಅಲಿಯಾಸ್ ಬಾಬು ಕರ್ನಾಟಕ ರಾಜ್ಯ, ಆರೀಫ್ ಹರಿಯಾಣ ರಾಜ್ಯ, ಮುಷ್ಠಾಖ್ ಖಾನ್ ಹರಿಯಾಣ ರಾಜ್ಯ, ರವರನ್ನು ವಿಶೇಷ ಅಫರಾದ ಪತ್ತೆ ದಳ ಪತ್ತೆ ಮಾಡಿ ವಿಚಾರಣೆ ಮಾಡಿದಾಗ ಹರಿಯಾಣ ಮೂಲದ ಮೇವತ್ ಜಿಲ್ಲೆ (ನುಹ್ ಜಿಲ್ಲೆ) ಯವರಾಗಿದ್ದಾರೆ.

ಈ ಮಂಕಿ ಕ್ಯಾಪ್ ಗ್ಯಾಂಗ್ ಕರ್ನಾಟಕ ರಾಜ್ಯದ ಕೋಲಾರ ಜಿಲ್ಲೆಯ, ಕೆಜಿಎಫ್, ರಾಬರ್ಟಸನ್ ಪೇಟೆ, ಬಂಗಾರಪೇಟೆ , ಕಾಮಸಮುದ್ರಂ, ಬೇತಮಂಗಲ ಠಾಣೆಗಳಲ್ಲಿ ಮತ್ತು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಒಟ್ಟು 10 ಪ್ರಕರಣಗಳು ಹಾಗು ಆಂದ್ರಪ್ರದೇಶ ರಾಜ್ಯದ ಚಿತ್ತೂರು ಜಿಲ್ಲೆಯಲ್ಲಿ 02 ಪ್ರಕರಣ ಅತ್ತೆಯಾಗಿದೆ. ಆರೋಪಿಗಳ ಕಡೆಯಿಂದ 67 ಗ್ರಾಂ ಚಿನ್ನಾಭರಣಗಳು, 03 ಜೊತೆ ಬೆಳ್ಳಿ ಕಾಲು ಚೈನುಗಳು, 01 ಪಲ್ಸರ್ ಬೈಕ್ ಮತ್ತು 01 ಹೀರೋ ಪ್ಯಾಷನ್ ಪ್ಲಸ್ ಬೈಕ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದರ ಒಟ್ಟು ಮೌಲ್ಯ 7,60,000/- ರೂಗಳು, ಮತ್ತು ಆರೋಪಿಗಳಾದ 03 ಜನರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.  ವರದಿ: ರೋಶನ್ ಜಮೀರ್

nazeer ahamad

Recent Posts

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

17 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

21 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

21 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

21 hours ago

ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ಗೋಕುಲ ಗೌಡ ಸಾವು ಪ್ರಕರಣ: ಇಬ್ಬರು ಸಿಬ್ಬಂದಿ ಅಮಾನತು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…

21 hours ago

ಮನೆಯಲ್ಲೇ ಸಂಗ್ರಹಿಸಿದ್ದ ನಾಡಬಾಂಬ್ ಸ್ಫೋಟ; ಹಳಿಯಾಳದ ಕಾಳಗಿನಕೊಪ್ಪ ಗ್ರಾಮದಲ್ಲಿ ಆತಂಕ

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…

21 hours ago