ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನು ಎಪಿಎಂಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪೆನ್ನೇಕರ್ ಮಾಹಿತಿ ನೀಡಿದ್ದಾರೆ.
ಬಂಧಿತ ಆರೋಪಿಯನ್ನು ಸಂತೋಷ್ ಕುಮಾರ್ (33) ಎಂದು ಗುರುತಿಸಲಾಗಿದೆ. 2022ರಿಂದ 2026ರ ಮಾರ್ಚ್ ವರೆಗೆ, ಅಂದರೆ ಮೂವರು ಕಾರ್ಯಪಾಲಕ ಅಭಿಯಂತರರ ಅವಧಿಯಲ್ಲಿ ಈ ವಂಚನೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಕೆಐಎಡಿಬಿ ಬಳ್ಳಾರಿ ವಲಯ ಕಚೇರಿಯ ಗುತ್ತಿಗೆ ಹಾಗೂ ಖಾಯಂ ನೌಕರರು, ಜೊತೆಗೆ ಬ್ಯಾಂಕ್ ಸಿಬ್ಬಂದಿ ಸೇರಿಕೊಂಡು ನಕಲಿ ಸಹಿಗಳನ್ನು ಬಳಸಿ ಮಂಡಳಿಯ ಖಾತೆಯಿಂದ ಸುಮಾರು 16.17 ಕೋಟಿ ರೂಪಾಯಿಯನ್ನು ಸಂಬಂಧವಿಲ್ಲದ ಖಾತೆಗಳಿಗೆ ವರ್ಗಾವಣೆ ಮಾಡಿರುವುದಾಗಿ ಆರೋಪಿಸಲಾಗಿದೆ.
ಈ ಸಂಬಂಧ ಬಳ್ಳಾರಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಮಾರ್ಚ್ 19ರಂದು ಅಪರಾಧ ಸಂಖ್ಯೆ 65/2026 ಅಡಿಯಲ್ಲಿ ಬಿಎನ್ಎಸ್ ಕಾಯ್ದೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ತನಿಖೆಯನ್ನು ಎಪಿಎಂಸಿ ಠಾಣೆ ಪೊಲೀಸರು ಮುಂದುವರೆಸುತ್ತಿದ್ದಾರೆ.
ತಲೆಮರೆಸಿಕೊಂಡಿದ್ದ ಆರೋಪಿ ಸಂತೋಷ್ ಕುಮಾರ್ನನ್ನು ಪೊಲೀಸರು ಇದೀಗ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಎಪಿಎಂಸಿ ಪೊಲೀಸ್ ಇನ್ಸ್ಪೆಕ್ಟರ್ ಮಹಮ್ಮದ್ ರಫಿ ಅವರ ನೇತೃತ್ವದಲ್ಲಿ ಎಎಸ್ಐಗಳಾದ ಕೃಷ್ಣ, ಆನಂದ್ ರೆಡ್ಡಿ ಹಾಗೂ ಸಿಬ್ಬಂದಿ ವರ್ಗದವರಾದ ಅದ್ದಿಗೇರಿ ಗೋರಂಟಿ, ಬಸವರಾಜ, ಕುರುಬರ ಕೋನಪ್ಪ, ದೀಪೇಂದ್ರ ಪಾಟಿಲ್ ಮತ್ತು ಮಹೇಶ್ವರಗೌಡ ಅವರ ತಂಡ ಕಾರ್ಯಾಚರಣೆ ನಡೆಸಿದೆ.
ಪ್ರಕರಣದ ಕುರಿತು ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…