Latest

ವಿಷ್ಣುವರ್ಧನ್ ಸ್ಮಾರಕ ತೆರವುಗೆ ಕಿಚ್ಚ ಸುದೀಪ್ ಆಕ್ರೋಶ:ನಾನೇ ಮುಂದೆ ನಿಂತು ವಿಷ್ಣುವರ್ಧನ್ ಸ್ಮಾರಕ ಮರುಸ್ಥಾಪನೆ ಮಾಡುತ್ತೇನೆ”

ಬೆಂಗಳೂರು: ಸಾಹಸ ಸಿಂಹ ವಿಷ್ಣುವರ್ಧನ್ ಅವರ ಅಭಿಮಾನಿಗಳಿಗೆ ನಿನ್ನೆ ದೊಡ್ಡ ಆಘಾತವಾಯಿತು. ಅಭಿಮಾನ್ ಸ್ಟುಡಿಯೋ ಆವರಣದಲ್ಲಿ ನಿರ್ಮಿಸಲಾಗಿದ್ದ ಅವರ ಸ್ಮಾರಕವನ್ನು ತೆರವುಗೊಳಿಸಲಾಗಿತ್ತು. ಈ ಬೆಳವಣಿಗೆ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದ್ದು, ನಟ ಕಿಚ್ಚ ಸುದೀಪ್ ಭಾವೋದ್ರಿಕ್ತವಾಗಿ ಪ್ರತಿಕ್ರಿಯಿಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಭಾವನೆ ಹಂಚಿಕೊಂಡ ಸುದೀಪ್, “ವಿಷ್ಣುವರ್ಧನ್ ಎಂದರೆ ಅದು ಎಂದಿಗೂ ಮುಗಿಯದ ಅಭಿಮಾನ ಮತ್ತು ಗೌರವ. ಅವರ ಸ್ಮಾರಕವನ್ನು ಒಡೆದು ಹಾಕಿರುವುದು, ನಮ್ಮ ನಂಬಿಕೆಯ ದೇವಾಲಯವನ್ನು ಧ್ವಂಸ ಮಾಡಿದಂತೆ ನೋವುಂಟುಮಾಡಿದೆ. ಇದು ಹೈಕೋರ್ಟ್ ಆದೇಶ ಅಂತಾರೆ, ಆದರೆ ಸರ್ಕಾರದ ಮೂಲಕ ಸ್ಮಾರಕ ಉಳಿಸಲು ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಮಂತ್ರಿಗಳಿಗೆ ಮನವಿ ಮಾಡಿದ್ದೆ, ಹಣಕಾಸು ಬೇಕಾದರೂ ಕೊಡಲು ಸಿದ್ಧ ಅಂತ ನಾನೇ ಹೇಳಿದ್ದೆ. ಆದರೆ ಸರ್ಕಾರ ಇದನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ ಅನ್ನಿಸುವಂತೆ ಇದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸುದೀಪ್ ಮುಂದುವರಿದು, “ಮೈಸೂರಿನಲ್ಲಿ ಈಗಾಗಲೇ ಅಧಿಕೃತ ಸ್ಮಾರಕವಿದೆ ಎಂದು ಕೋರ್ಟ್ ಹೇಳಿದೆ. ಕೋರ್ಟ್ ವಿರುದ್ಧವಾಗಿ ಮಾತನಾಡಲು ಆಗುವುದಿಲ್ಲ. ಆದರೆ, ಭೂಮಿ ಖರೀದಿಸಿದವರ ಮನ ಒಲಿಸಿ, ಕನಿಷ್ಠ ಆ ಜಾಗದ ಒಂದು ಭಾಗವನ್ನು ಉಳಿಸಲು ನಾನು ಸಿದ್ಧನಿದ್ದೇನೆ. ಸರ್ಕಾರ ಮಧ್ಯಪ್ರವೇಶಿಸಿದರೆ ಸಮಸ್ಯೆ ಬಗೆಹರಿಯುತ್ತದೆ” ಎಂದರು.

ವಿಷ್ಣುವರ್ಧನ್ ಅವರ ಆಧ್ಯಾತ್ಮ ಪ್ರೀತಿಯನ್ನು ನೆನೆದು ಸುದೀಪ್ ಹೇಳಿದರು, “ಅವರು ರೂಪಕವಾಗಬೇಕು, ಪಂಚಭೂತಗಳಲ್ಲಿ ಇರಬೇಕು ಅಂತ ಹೇಳುತ್ತಿದ್ದರು. ಆದರೆ ಅಭಿಮಾನಿಗಳಿಗೆ ಪೂಜೆ ಮಾಡಲು, ಜನ್ಮದಿನ ಆಚರಿಸಲು, ಗೌರವ ಸಲ್ಲಿಸಲು ಒಂದು ಸ್ಥಳ ಅಗತ್ಯ. ಬೆಂಗಳೂರಿನಂತಹ ನಗರದಲ್ಲಿ ಅರ್ಧ ಎಕರೆ ಜಾಗ ಕೊಡಲಿಲ್ಲ ಅಂದರೆ, ಇದು ಖಂಡನೀಯ. ಬಾಲಕೃಷ್ಣ ಅವರ ಸಮಾಧಿಯನ್ನೂ ತೆರವುಗೊಳಿಸಲಾಗಿದೆ ಎಂದು ಕೇಳಿದ್ದೇನೆ. ಇವೆಲ್ಲ ಭಾವನೆಗಿಂತ ಭೂಮಿ ವ್ಯವಹಾರ ದೊಡ್ಡದಾಗಿದೆ ಎನ್ನಿಸುವಂತಿದೆ” ಎಂದು ವ್ಯಥೆ ವ್ಯಕ್ತಪಡಿಸಿದರು.

“ನ್ಯಾಯಾಲಯಕ್ಕೆ ಹೋಗಬೇಕಾದರೆ, ನಾನೂ ಸಿದ್ಧ. ಭೂಮಿ ಮಾಲೀಕರು, ಸರ್ಕಾರ, ನ್ಯಾಯಾಲಯ – ಎಲ್ಲರಿಗೂ ನನ್ನ ಮನವಿ, ಬೇಕಾದ ಹಣವನ್ನು ನಾವು ಲಕ್ಷಾಂತರ ಅಭಿಮಾನಿಗಳು ಸೇರಿ ಕೊಡಲು ಸಿದ್ಧರಿದ್ದೇವೆ. ನಾನೇ ಮುಂದೆ ನಿಂತು ಸ್ಮಾರಕ ಮರುಸ್ಥಾಪನೆ ಮಾಡುತ್ತೇನೆ. ವಿಷ್ಣು ಸರ್ ಸದಾ ನಮ್ಮ ಹೃದಯಗಳಲ್ಲಿ ಇರುತ್ತಾರೆ. ಆದರೆ ಪ್ರಾರ್ಥನೆ, ಗೌರವಕ್ಕೆ ಒಂದು ಸಂಕೇತ ಸ್ಥಳ ಬೇಕು. ಆ ಪ್ರೀತಿಗೆ, ಅಭಿಮಾನಕ್ಕೆ ದ್ರೋಹ ಮಾಡಬೇಡಿ” ಎಂದು ಸುದೀಪ್ ತಮ್ಮ ಪೋಸ್ಟ್‌ನಲ್ಲಿ ವಿನಂತಿಸಿದರು.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

3 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

9 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

9 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago