ಕೋಲಾರ ಜಿಲ್ಲೆಯ ಮುಳಬಾಗಿಲು ಮಾರುತಿ ನಗರದ ನಿವಾಸಿ, ಕಾರು ಚಾಲಕ ಗಂಗಾಧರ್ ಅಲಿಯಾಸ್ ತೇಜು (ತಂದೆ: ಸಾದಪ್ಪ) ಎಂಬಾತನಿಗೆ ಅಪ್ರಾಪ್ತ ಬಾಲಕಿಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಜೈಲು ಶಿಕ್ಷೆ ಮತ್ತು ₹45,000 ದಂಡ ವಿಧಿಸಲಾಗಿದೆ. ಈ ತೀರ್ಪನ್ನು ಕೋಲಾರದ ಪೋಕ್ಸೊ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಬಿ. ಪ್ರಸಾದ್ ಅವರು ಪ್ರಕಟಿಸಿದರು.
ಪ್ರಕರಣದ ಹಿನ್ನೆಲೆ
2023ರ ಮೇ 17ರಂದು, ಮುಳಬಾಗಿಲು ತಾಲೂಕಿನ ಬೇತಮಂಗಲ ಪೊಲೀಸ್ ಠಾಣೆಗೆ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಅತ್ಯಾಚಾರವೆಸಗಿದ ಕುರಿತು ದೂರು ದಾಖಲಾಗಿತ್ತು. ತನಿಖೆ ನಡೆಸಿದ ವೃತ್ತ ನಿರೀಕ್ಷಕರು ಆರೋಪಿಯ ವಿರುದ್ಧ ಪೀಡಿತೆಯ ಪೋಷಕರ ದೂರು ಆಧಾರದ ಮೇಲೆ ಪೋಕ್ಸೊ ಕಾಯ್ದೆಯ ಸೆಕ್ಷನ್ 6 ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಸೆಕ್ಷನ್ 9 ಅಡಿಯಲ್ಲಿ ಪ್ರಕರಣ ದಾಖಲಿಸಿ, ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದರು.
ನ್ಯಾಯಾಲಯದ ತೀರ್ಪು
ವಿಚಾರಣೆ ಮುಗಿಸಿದ ನಂತರ, ನ್ಯಾಯಾಧೀಶರು ಆರೋಪಿಯ ಅಪರಾಧ ದೃಢಪಟ್ಟಿದ್ದು, ಕಠಿಣ ಶಿಕ್ಷೆ ವಿಧಿಸಿದರು:
ಪೋಕ್ಸೊ ಕಾಯ್ದೆಯ ಸೆಕ್ಷನ್ 6 ಅಡಿಯಲ್ಲಿ 20 ವರ್ಷಗಳ ಜೈಲು ಶಿಕ್ಷೆ
ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಸೆಕ್ಷನ್ 9 ಅಡಿಯಲ್ಲಿ ₹45,000 ದಂಡ
ಪೀಡಿತೆಯಿಗೆ ₹4 ಲಕ್ಷ ಪರಿಹಾರ:
ಆಗತಾನಕ್ಕೊಳಗಾದ ಬಾಲಕಿಗೆ ಸರ್ಕಾರದ ವತಿಯಿಂದ ₹4 ಲಕ್ಷ ಪರಿಹಾರ ನೀಡಲು ನ್ಯಾಯಾಲಯ ಆದೇಶಿಸಿದೆ.
ಈ ಪ್ರಕರಣದಲ್ಲಿ ಸರ್ಕಾರದ ಪರ ವಿಶೇಷ ಸರ್ಕಾರಿ ಅಭಿಯೋಜಕಿ ಶ್ರೀಮತಿ ಡಿ. ಲಲಿತಕುಮಾರಿ ವಾದ ಮಂಡಿಸಿದರು.
ನ್ಯಾಯಾಲಯದ ಈ ತೀರ್ಪು ಬಾಲಕಿಯರ ಸುರಕ್ಷತೆ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕಡೆಗೆ ಒಂದು ಮಹತ್ವದ ಹೆಜ್ಜೆಯಾಗಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…