ಕೋಲಾರ ಜಿಲ್ಲೆಯ ಮುಳಬಾಗಿಲು ಮಾರುತಿ ನಗರದ ನಿವಾಸಿ, ಕಾರು ಚಾಲಕ ಗಂಗಾಧರ್ ಅಲಿಯಾಸ್ ತೇಜು (ತಂದೆ: ಸಾದಪ್ಪ) ಎಂಬಾತನಿಗೆ ಅಪ್ರಾಪ್ತ ಬಾಲಕಿಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಜೈಲು ಶಿಕ್ಷೆ ಮತ್ತು ₹45,000 ದಂಡ ವಿಧಿಸಲಾಗಿದೆ. ಈ ತೀರ್ಪನ್ನು ಕೋಲಾರದ ಪೋಕ್ಸೊ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಬಿ. ಪ್ರಸಾದ್ ಅವರು ಪ್ರಕಟಿಸಿದರು.
ಪ್ರಕರಣದ ಹಿನ್ನೆಲೆ
2023ರ ಮೇ 17ರಂದು, ಮುಳಬಾಗಿಲು ತಾಲೂಕಿನ ಬೇತಮಂಗಲ ಪೊಲೀಸ್ ಠಾಣೆಗೆ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಅತ್ಯಾಚಾರವೆಸಗಿದ ಕುರಿತು ದೂರು ದಾಖಲಾಗಿತ್ತು. ತನಿಖೆ ನಡೆಸಿದ ವೃತ್ತ ನಿರೀಕ್ಷಕರು ಆರೋಪಿಯ ವಿರುದ್ಧ ಪೀಡಿತೆಯ ಪೋಷಕರ ದೂರು ಆಧಾರದ ಮೇಲೆ ಪೋಕ್ಸೊ ಕಾಯ್ದೆಯ ಸೆಕ್ಷನ್ 6 ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಸೆಕ್ಷನ್ 9 ಅಡಿಯಲ್ಲಿ ಪ್ರಕರಣ ದಾಖಲಿಸಿ, ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದರು.
ನ್ಯಾಯಾಲಯದ ತೀರ್ಪು
ವಿಚಾರಣೆ ಮುಗಿಸಿದ ನಂತರ, ನ್ಯಾಯಾಧೀಶರು ಆರೋಪಿಯ ಅಪರಾಧ ದೃಢಪಟ್ಟಿದ್ದು, ಕಠಿಣ ಶಿಕ್ಷೆ ವಿಧಿಸಿದರು:
ಪೋಕ್ಸೊ ಕಾಯ್ದೆಯ ಸೆಕ್ಷನ್ 6 ಅಡಿಯಲ್ಲಿ 20 ವರ್ಷಗಳ ಜೈಲು ಶಿಕ್ಷೆ
ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಸೆಕ್ಷನ್ 9 ಅಡಿಯಲ್ಲಿ ₹45,000 ದಂಡ
ಪೀಡಿತೆಯಿಗೆ ₹4 ಲಕ್ಷ ಪರಿಹಾರ:
ಆಗತಾನಕ್ಕೊಳಗಾದ ಬಾಲಕಿಗೆ ಸರ್ಕಾರದ ವತಿಯಿಂದ ₹4 ಲಕ್ಷ ಪರಿಹಾರ ನೀಡಲು ನ್ಯಾಯಾಲಯ ಆದೇಶಿಸಿದೆ.
ಈ ಪ್ರಕರಣದಲ್ಲಿ ಸರ್ಕಾರದ ಪರ ವಿಶೇಷ ಸರ್ಕಾರಿ ಅಭಿಯೋಜಕಿ ಶ್ರೀಮತಿ ಡಿ. ಲಲಿತಕುಮಾರಿ ವಾದ ಮಂಡಿಸಿದರು.
ನ್ಯಾಯಾಲಯದ ಈ ತೀರ್ಪು ಬಾಲಕಿಯರ ಸುರಕ್ಷತೆ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕಡೆಗೆ ಒಂದು ಮಹತ್ವದ ಹೆಜ್ಜೆಯಾಗಿದೆ.
ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…
ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…
ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…
ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್ನಲ್ಲಿ ಶ್ರೀಕೃಷ್ಣನ…
ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…
ಛತ್ತೀಸ್ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…