Crime

ಬಳ್ಳಾರಿಯಲ್ಲಿ ವೈದ್ಯರ ಅಪಹರಣ: 6 ಕೋಟಿ ರೂ. ಹಣ ಬೇಡಿಕೆ ಇಟ್ಟ ದುಷ್ಕರ್ಮಿಗಳು

ಬಳ್ಳಾರಿ ಜಿಲ್ಲಾಸ್ಪತ್ರೆಯ ಪ್ರಮುಖ ಮಕ್ಕಳ ವೈದ್ಯರಾದ ಡಾ. ಸುನೀಲ್ ಇಂದು ಬೆಳಗ್ಗೆ ವಾಕಿಂಗ್ ವೇಳೆ ದುಷ್ಕರ್ಮಿಗಳಿಂದ ಅಪಹರಣಗೊಳ್ಳುವ ಘಟನೆ ನಡೆದಿದೆ. ಡಾ. ಸುನೀಲ್ ತಮ್ಮ ದಿನಚರಿಯಂತೆ ಬೆಳಗಿನ ವಾಕಿಂಗ್ ಹೋಗಿ ಮರಳುತ್ತಿದ್ದ ಸಂದರ್ಭ, ಸೂರ್ಯನಾರಾಯಣಪೇಟೆಯ ಶನೇಶ್ವರಗುಡಿ ಬಳಿ ಈ ಘಟನೆ ನಡೆದಿದೆ.

ಟಾಟಾ ಇಂಡಿಗೋ ಕಾರಿನಲ್ಲಿ ಬಂದ ದುಷ್ಕರ್ಮಿಗಳು, ಡಾ. ಸುನೀಲ್ ಅವರನ್ನು ಬಲವಂತವಾಗಿ ಕಾರಿನಲ್ಲಿ ಎಳೆದೊಯ್ದು, ಅವರ ಮೊಬೈಲ್ ಬಳಸಿ ಅವರ ಸಹೋದರ ವೇಣು ಅವರನ್ನು ಸಂಪರ್ಕಿಸಿದರು. ತಮ್ಮ ಸಹೋದರರ ಸುರಕ್ಷತೆಗಾಗಿ 6 ಕೋಟಿ ರೂ. ಹಣವನ್ನು ನೀಡುವಂತೆ ಅಪಹರಣಕಾರರು ಬೇಡಿಕೆ ಇಟ್ಟಿದ್ದಾರೆ.

ವೇಣು, ಬಳ್ಳಾರಿ ಜಿಲ್ಲೆಯ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷರಾಗಿದ್ದಾರೆ. ಅಪಹರಣ ಕುರಿತು ಅವರಿಂದ ತಕ್ಷಣವೇ ಬಳ್ಳಾರಿ ನಗರ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಶೋಧ ಕಾರ್ಯವನ್ನು ತಕ್ಷಣ ಆರಂಭಿಸಿದ್ದಾರೆ.

ಘಟನೆಯು ಬಳ್ಳಾರಿಯಲ್ಲಿ ದೊಡ್ಡ ಸಂಚಲನ ಉಂಟುಮಾಡಿದ್ದು, ಪೊಲೀಸರು ಅಪಹರಣಕ್ಕಿದ್ದ ಕಾರಣಗಳನ್ನು ಮತ್ತು ಆರೋಪಿಗಳ ಗುರುತು ಪತ್ತೆಹಚ್ಚಲು ವಿವಿಧ ತಂಡಗಳನ್ನು ರಚಿಸಿದ್ದಾರೆ. ಅಪಹರಣಕ್ಕಿರುವ ಹಿನ್ನೆಲೆ ಮತ್ತು ಡಾ. ಸುನೀಲ್ ಅವರ ಸುರಕ್ಷತೆ ಕುರಿತು ಪೊಲೀಸರಿಂದ ಮುಂದಿನ ಮಾಹಿತಿ ನಿರೀಕ್ಷಿಸಲಾಗಿದೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

6 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

6 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

6 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

6 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

6 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

6 hours ago