ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ದಂಡಾಪುರ ಕ್ರಾಸ್ ಬಳಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಅಪಹರಣ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ರಾಜಾಪುರ ಗ್ರಾಮದ ನಿವಾಸಿ ಬಸವರಾಜ್ ತಳವಾರ (48) ಅವರನ್ನು ಅಪಹರಣಕಾರರು ಫೆಬ್ರವರಿ 14ರ ರಾತ್ರಿ ಕಿಡ್ನಾಪ್ ಮಾಡಿದ್ದಾರೆ.
ಅಪಹರಣದ ಬಳಿಕ ಅಪಹರಣಕಾರರು ಅವರ ಕುಟುಂಬಸ್ಥರೊಂದಿಗೆ ಸಂಪರ್ಕಕ್ಕೆ ಬಂದು, ಬಸವರಾಜ್ ಅವರನ್ನು ಬಿಡುಗಡೆ ಮಾಡಲು 5 ಕೋಟಿ ರೂಪಾಯಿ ಹಣ ನೀಡುವಂತೆ ಪೀಡಿಸಿದ್ದಾರೆ. ನಿರ್ದಿಷ್ಟ ಸ್ಥಳಕ್ಕೆ ಹಣ ತರಲು ಸೂಚಿಸಿದರೂ, ಹಣವನ್ನು ಪಡೆಯದೇ, ತಾವು ಬೇರೆ ಸ್ಥಳಕ್ಕೆ ಹೋಗುತ್ತಿರುವುದಾಗಿ ಅಪಹರಣಕಾರರು ತಿಳಿಸಿ ಮತ್ತೊಂದು ಬೆದರಿಕೆ ಹಾಕಿದ್ದಾರೆ.
ಘಟನೆ ಕುರಿತು ಬಸವರಾಜ್ ಕುಟುಂಬಸ್ಥರು ತಡರಾತ್ರಿ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ತಕ್ಷಣ ಕ್ರಮ ಕೈಗೊಂಡು, ಫೋನ್ ಲೊಕೇಷನ್ ಆಧರಿಸಿ ಅಪಹರಣಕಾರರ ಜಾಡು ಹಿಡಿಯಲು ತೀವ್ರ ಕಾರ್ಯಾಚರಣೆ ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಅಪಹರಣಕಾರರ ತಂಡ ನಿಪ್ಪಾಣಿ ಪ್ರದೇಶದಲ್ಲಿ ಅಡಗಿರುವ ಸಾಧ್ಯತೆಗಳು ವ್ಯಕ್ತವಾಗಿದ್ದು, ಅವರನ್ನು ಪತ್ತೆ ಹಚ್ಚಲು ಪೊಲೀಸರು ಜಾಲ ಬೀಸಿದ್ದಾರೆ.
ಈ ಘಟನೆ ಗಂಭೀರ ತಿರುವು ಪಡೆದುಕೊಂಡಿದ್ದು, ಅಪಹರಣ ಮತ್ತು ಹಣ ವಶಕ್ಕೆ ಸಂಬಂಧಿಸಿದಂತೆ ಅಪಹರಣಕಾರರ ಉದ್ದೇಶ ಹಾಗೂ ಹಿನ್ನೆಲೆ ಪತ್ತೆಹಚ್ಚಲು ತನಿಖೆ ಚುರುಕುಗೊಂಡಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…