ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ದಂಡಾಪುರ ಕ್ರಾಸ್ ಬಳಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಅಪಹರಣ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ರಾಜಾಪುರ ಗ್ರಾಮದ ನಿವಾಸಿ ಬಸವರಾಜ್ ತಳವಾರ (48) ಅವರನ್ನು ಅಪಹರಣಕಾರರು ಫೆಬ್ರವರಿ 14ರ ರಾತ್ರಿ ಕಿಡ್ನಾಪ್ ಮಾಡಿದ್ದಾರೆ.
ಅಪಹರಣದ ಬಳಿಕ ಅಪಹರಣಕಾರರು ಅವರ ಕುಟುಂಬಸ್ಥರೊಂದಿಗೆ ಸಂಪರ್ಕಕ್ಕೆ ಬಂದು, ಬಸವರಾಜ್ ಅವರನ್ನು ಬಿಡುಗಡೆ ಮಾಡಲು 5 ಕೋಟಿ ರೂಪಾಯಿ ಹಣ ನೀಡುವಂತೆ ಪೀಡಿಸಿದ್ದಾರೆ. ನಿರ್ದಿಷ್ಟ ಸ್ಥಳಕ್ಕೆ ಹಣ ತರಲು ಸೂಚಿಸಿದರೂ, ಹಣವನ್ನು ಪಡೆಯದೇ, ತಾವು ಬೇರೆ ಸ್ಥಳಕ್ಕೆ ಹೋಗುತ್ತಿರುವುದಾಗಿ ಅಪಹರಣಕಾರರು ತಿಳಿಸಿ ಮತ್ತೊಂದು ಬೆದರಿಕೆ ಹಾಕಿದ್ದಾರೆ.
ಘಟನೆ ಕುರಿತು ಬಸವರಾಜ್ ಕುಟುಂಬಸ್ಥರು ತಡರಾತ್ರಿ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ತಕ್ಷಣ ಕ್ರಮ ಕೈಗೊಂಡು, ಫೋನ್ ಲೊಕೇಷನ್ ಆಧರಿಸಿ ಅಪಹರಣಕಾರರ ಜಾಡು ಹಿಡಿಯಲು ತೀವ್ರ ಕಾರ್ಯಾಚರಣೆ ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಅಪಹರಣಕಾರರ ತಂಡ ನಿಪ್ಪಾಣಿ ಪ್ರದೇಶದಲ್ಲಿ ಅಡಗಿರುವ ಸಾಧ್ಯತೆಗಳು ವ್ಯಕ್ತವಾಗಿದ್ದು, ಅವರನ್ನು ಪತ್ತೆ ಹಚ್ಚಲು ಪೊಲೀಸರು ಜಾಲ ಬೀಸಿದ್ದಾರೆ.
ಈ ಘಟನೆ ಗಂಭೀರ ತಿರುವು ಪಡೆದುಕೊಂಡಿದ್ದು, ಅಪಹರಣ ಮತ್ತು ಹಣ ವಶಕ್ಕೆ ಸಂಬಂಧಿಸಿದಂತೆ ಅಪಹರಣಕಾರರ ಉದ್ದೇಶ ಹಾಗೂ ಹಿನ್ನೆಲೆ ಪತ್ತೆಹಚ್ಚಲು ತನಿಖೆ ಚುರುಕುಗೊಂಡಿದೆ.
ನಾಸಿಕ್ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…
ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…
ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ವ್ಯತ್ಯಯಗೊಳ್ಳುವ ಭೀತಿ…
ಆಂಧ್ರ ಪ್ರದೇಶದ ಪ್ರೊದ್ದಟೂರು ತಾಲ್ಲೂಕಿನ ಲಿಂಗಾಪುರಂ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ತನ್ನ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಭಾವಿಸಿದ…