Latest

ರಿಯಲ್ ಎಸ್ಟೇಟ್ ಉದ್ಯಮಿಯ ಅಪಹರಣ: 5 ಕೋಟಿ ಬೇಡಿಕೆ ಇಟ್ಟ ಕಿಡ್ನಾಪರ್ಸ್

ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ದಂಡಾಪುರ ಕ್ರಾಸ್ ಬಳಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಅಪಹರಣ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ರಾಜಾಪುರ ಗ್ರಾಮದ ನಿವಾಸಿ ಬಸವರಾಜ್ ತಳವಾರ (48) ಅವರನ್ನು ಅಪಹರಣಕಾರರು ಫೆಬ್ರವರಿ 14ರ ರಾತ್ರಿ ಕಿಡ್ನಾಪ್ ಮಾಡಿದ್ದಾರೆ.

ಅಪಹರಣದ ಬಳಿಕ ಅಪಹರಣಕಾರರು ಅವರ ಕುಟುಂಬಸ್ಥರೊಂದಿಗೆ ಸಂಪರ್ಕಕ್ಕೆ ಬಂದು, ಬಸವರಾಜ್ ಅವರನ್ನು ಬಿಡುಗಡೆ ಮಾಡಲು 5 ಕೋಟಿ ರೂಪಾಯಿ ಹಣ ನೀಡುವಂತೆ ಪೀಡಿಸಿದ್ದಾರೆ. ನಿರ್ದಿಷ್ಟ ಸ್ಥಳಕ್ಕೆ ಹಣ ತರಲು ಸೂಚಿಸಿದರೂ, ಹಣವನ್ನು ಪಡೆಯದೇ, ತಾವು ಬೇರೆ ಸ್ಥಳಕ್ಕೆ ಹೋಗುತ್ತಿರುವುದಾಗಿ ಅಪಹರಣಕಾರರು ತಿಳಿಸಿ ಮತ್ತೊಂದು ಬೆದರಿಕೆ ಹಾಕಿದ್ದಾರೆ.

ಘಟನೆ ಕುರಿತು ಬಸವರಾಜ್ ಕುಟುಂಬಸ್ಥರು ತಡರಾತ್ರಿ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ತಕ್ಷಣ ಕ್ರಮ ಕೈಗೊಂಡು, ಫೋನ್ ಲೊಕೇಷನ್ ಆಧರಿಸಿ ಅಪಹರಣಕಾರರ ಜಾಡು ಹಿಡಿಯಲು ತೀವ್ರ ಕಾರ್ಯಾಚರಣೆ ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಅಪಹರಣಕಾರರ ತಂಡ ನಿಪ್ಪಾಣಿ ಪ್ರದೇಶದಲ್ಲಿ ಅಡಗಿರುವ ಸಾಧ್ಯತೆಗಳು ವ್ಯಕ್ತವಾಗಿದ್ದು, ಅವರನ್ನು ಪತ್ತೆ ಹಚ್ಚಲು ಪೊಲೀಸರು ಜಾಲ ಬೀಸಿದ್ದಾರೆ.

ಈ ಘಟನೆ ಗಂಭೀರ ತಿರುವು ಪಡೆದುಕೊಂಡಿದ್ದು, ಅಪಹರಣ ಮತ್ತು ಹಣ ವಶಕ್ಕೆ ಸಂಬಂಧಿಸಿದಂತೆ ಅಪಹರಣಕಾರರ ಉದ್ದೇಶ ಹಾಗೂ ಹಿನ್ನೆಲೆ ಪತ್ತೆಹಚ್ಚಲು ತನಿಖೆ ಚುರುಕುಗೊಂಡಿದೆ.

nazeer ahamad

Recent Posts

ನಾಲ್ಕನೇ ಬಾರಿಯೂ ಹೆಣ್ಣು ಮಗು: ಬಾಣಂತಿ ಮಮತಾಳ ದಾರುಣ ಅಂತ್ಯ, ಅತ್ತೆ ಮನೆಯ ಕಿರುಕುಳ ಆರೋಪ!

ನಲಗೊಂಡ: ಹೆಣ್ಣು ಮಗು ಹುಟ್ಟಿದ ಕಾರಣಕ್ಕೆ ಮಹಿಳೆಯೊಬ್ಬರು ಕೌಟುಂಬಿಕ ಒತ್ತಡ ಹಾಗೂ ಕಿರುಕುಳಕ್ಕೆ ಒಳಗಾಗಿದ್ದರೆಂಬ ಆರೋಪ ಕೇಳಿಬಂದಿದ್ದು, ಕೊನೆಗೆ ಬಾಣಂತಿಯೊಬ್ಬರು…

8 hours ago

ಆಸ್ತಿ ಆಸೆಗೆ ತಂದೆಯನ್ನೇ ಮುಗಿಸಲು ಸಂಚು; ನಿದ್ರೆ ಮಾತ್ರೆ ಕೊಟ್ಟು ಮಗನಿಂದ ಕತ್ತು ಹಿಸುಕಿ ಕೊಲೆ!

ಕೋಲಾರ: ಹಣ-ಆಸ್ತಿಗಾಗಿ ಹೆತ್ತ ತಂದೆಯನ್ನೇ ಕೊಲೆ ಮಾಡಿರುವ ಆರೋಪದ ಪ್ರಕರಣ ಕೋಲಾರ ಜಿಲ್ಲೆಯ ವೇಮಗಲ್ ಹೋಬಳಿಯ ಚನ್ನಸಂದ್ರ ಗ್ರಾಮದಲ್ಲಿ ಬೆಳಕಿಗೆ…

8 hours ago

ಜೈಲಿನಲ್ಲೂ ಪ್ರಜ್ವಲ್ ರೇವಣ್ಣಗೆ ಮೊಬೈಲ್‌ ಸೌಲಭ್ಯ? ಫೋನ್‌ನಲ್ಲಿ ಅಶ್ಲೀಲ ವಿಡಿಯೋ ಪತ್ತೆ, ಅಧಿಕಾರಿಗಳ ವಿರುದ್ಧ ಗಂಭೀರ ಪ್ರಶ್ನೆ!

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರೂ ಮೊಬೈಲ್ ಫೋನ್…

8 hours ago

ವಸತಿ ನಿಲಯದಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು: ಪೋಷಕರ ಆಕ್ರೋಶ, ಉನ್ನತ ಮಟ್ಟದ ತನಿಖೆಗೆ ಆಗ್ರಹ!

ಪಾವಗಡ: ತಾಲೂಕಿನ ರಂಗಸಮುದ್ರದಲ್ಲಿರುವ ಕಸ್ತೂರಬಾ ಗಾಂಧಿ ವಸತಿ ನಿಲಯದಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪ್ರಿಯಾಂಕ ಎಂಬ ಬಾಲಕಿ ಅನುಮಾನಾಸ್ಪದವಾಗಿ…

9 hours ago

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

1 day ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

1 day ago