Latest

ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಕಿಡ್ನಿ ಕಸಿ ಮಾಡಿದ ಸಾಧನೆಗೆ ಪಾತ್ರವಾದ ಉತ್ತರ ಕರ್ನಾಟಕದ ಸಂಜೀವಿನಿ ಕಿಮ್ಸ್.

ಮನುಷ್ಯನಿಗೆ ಹುಟ್ಟು ಸಾವು ಯಾವ ಸಮಯಕ್ಕೆ ಆಗಬೇಕೋ ಅದೂ ಯಾರ ಕೈಯಲ್ಲೂ ಇರುವುದಿಲ್ಲ ಮನುಷ್ಯ ಭೂಮಿ ಮೇಲೆ ಜನನವಾದ ನಂತರ ಅವನು ಒಂದು ಒಳ್ಳೆಯ ಹೆಸರು ಸಂಪಾದಿಸಬೇಕು ಎಲ್ಲರಿಗೂ ಒಳ್ಳೆಯದನ್ನು ಮಾಡಿ ಒಳ್ಳೆಯದನ್ನು ಬಯಸಿ ಸಾಯುವ ವರೆಗೂ ಒಳ್ಳೆಯ ಸುಖಕರ ಜೀವನ ಮಾಡಬೇಕು ಆದರೇ ಅದೂ ಇತ್ತೀಚಿನ ದಿನಗಳಲ್ಲಿ ಒಂದು ರೋಗಿಗೋಸ್ಕರ ರಕ್ತ ದಾನ ಮಾಡಿ ಎಂದರೇ ಯಾರೂ ಮುಂದೆ ಬರಲ್ಲ ಕೇವಲ ಬೆರಳೆಣಿಕೆ ಅಷ್ಟು ಮಾತ್ರ. ರಕ್ತದಾನ ಮಾಡಲು ಮುಂದೆ ಬರುತ್ತಾರೆ ಮನುಷ್ಯ ಮನುಷ್ಯನಿಗೆ ಆಗಬೇಕು ಪ್ರಾಣಿ ಮರಗಳಿಗೆ ಅಲ್ಲ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರು ಹಾಗೂ ವೈದ್ಯೆರ ತಂಡ ಹಗಲಿರುಳು ರೋಗಿಗಳ ಆರೈಕೆಗೆ ಮುಂದಾಗಿ ರೋಗಿಗಳು ಉತ್ತಮ ಚಿಕಿತ್ಸೆ ಪಡೆದು ಗುಣಮುಖರಾಗಿ ಆರೋಗ್ಯವಾಗಿರಲಿ ಎಂಬುದು ಕಿಮ್ಸ್ ಆಸ್ಪತ್ರೆಯ ವೈದ್ಯರ ಅಧೀಕ್ಷಕರ ನಿರ್ದೇಶಕರ ಆಸೆ.

ಇತ್ತೀಚೆಗೆ ಕೆಲವು ದಿನಗಳ ಹಿಂದೆ ರಸ್ತೆ ಅಪಘಾತದಲ್ಲಿ ಪ್ರಕಾಶ್ ಲಂಬಾಣಿ ಎಂಬ ವ್ಯೆಕ್ತಿಗೆ ತಲೆಯ ಭಾಗದಲ್ಲಿ ತುಂಬಾ ಪೆಟ್ಟಾಗಿ ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು ಆದರೇ ವಿಧಿ ಆಟವೇ ಬೇರೆಯಾಗಿತ್ತು ಚಿಕಿತ್ಸೆ ಫಲಿಸದೇ ಪ್ರಕಾಶ್ ಅವರ ಮೆದುಳು ನಿಷ್ಕ್ರಿಯಗೊಂಡಿತ್ತು ಹಾಗೂ ಅವರ ಯಕೃತ್ ಕಿಡ್ನಿ ಇನ್ನೂ ಕಾರ್ಯ ನಿರ್ವಹಿಸುತ್ತಿತ್ತು ಅಂಗಾಂಗ ದಾನದ ತಂಡ ಮತ್ತು ಕಿಮ್ಸ್ ಆಸ್ಪತ್ರೆಯ ಅಧೀಕ್ಷಕರು ಚರ್ಚಿಸಿ ಪ್ರಕಾಶ್ ಅವರ ಕುಟುಂಬದವರೊಂದಿಗೆ ಆಪ್ತ ಸಮಾಲೋಚನೆ ನಡೆಸಿ ಕುಟುಂಬದವರ ಒಪ್ಪಿಗೆ ಮೇರೆಗೆ ಬೆಂಗಳೂರಿನ ಜೆ ಪಿ ನಗರದಲ್ಲಿರುವ ಸುಪ್ರಸಿದ್ದ ಆರ್ ವಿ ಆಸ್ಪತ್ರೆಯಲ್ಲಿನ ರೋಗಿಯೊಬ್ಬರಿಗೆ ಯಕೃತ್ ಕಸಿ ಅಗತ್ಯೆವಿದ್ದ ಕಾರಣ ಅಲ್ಲಿಯ ವೈದ್ಯರ ತಂಡ ಬಂದು ಯಕೃತ್ ತೆಗೆದು ತಮ್ಮಲ್ಲಿಯೇ ದಾಖಲಾದ 39 ವರ್ಷದ ವ್ಯಕ್ತಿಗೆ ಪ್ರಕಾಶ್ ಅವರ ಕಿಡ್ನಿ ಕಸಿ ಮಾಡಲಾಗಿದೆ ಎಂದು ಕಿಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ರವರು ತಿಳಿಸಿದ್ದಾರೆ.

ವೈದ್ಯರ ಕೋರಿಕೆಯ ಮೇಲೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಿಂದ ಹುಬ್ಬಳ್ಳಿ ವಿಮಾನ ನಿಲ್ದಾಣದ ವರೆಗೆ ಸುಮಾರು 6 ರಿಂದ 7 ಕಿ ಮೀ ರಸ್ತೆಯನ್ನು 0 ಟ್ರಾಫಿಕ್ ಆಗಿ ಮಾಡಿಸಲಾಗಿತ್ತು ಪ್ರಕಾಶ್ ಅವರ ಕಿಡ್ನಿ ತೆಗೆದುಕೊಂಡ ವೈದ್ಯರ ತಂಡ ಕೇವಲ 2 ರಿಂದ 3 ನಿಮಿಷಗಳ ಅಂತರದಲ್ಲಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಿಂದ ಹುಬ್ಬಳ್ಳಿ ವಿಮಾನ ನಿಲ್ದಾಣ ತಲುಪಿ ನಂತರ ಅಲ್ಲಿಂದ ಸ್ಟಾರ್ ಏರ್ ವಿಮಾನದ ಮೂಲಕ ಹುಬ್ಬಳ್ಳಿಯಿಂದ ಬೆಂಗಳೂರಿಗೆ ತೆಗೆದುಕೊಂಡು ಹೋಗಿದ್ದಾರೆ. ಮೆದುಳು ನಿಷ್ಕ್ರಿಯಗೊಂಡ ವ್ಯೇಕ್ತಿಯ ಅಂಗಾಂಗ ತೆಗೆದಿರುವ ಕಾರ್ಯ ಈ ಹಿಂದೆ ಉತ್ತರ ಕರ್ನಾಟಕದ ಭಾಗದಲ್ಲಿ ಇದೇ ಮೊದಲು ಎಂದು ಹೇಳಬಹುದು ಉತ್ತರ ಕರ್ನಾಟಕದ ಕಿಮ್ಸ್ ( ಸಂಜೀವಿನಿ ) ಎಂದೇ ಖ್ಯಾತಿ ಪಡೆದ ಕಿಮ್ಸ್ ಆಸ್ಪತ್ರೆಯ ಮತ್ತು ಕಾಲೇಜಿನಲ್ಲಿ ಇದು ಹೆಮ್ಮೆ ಪಡುವ ಒಂದು ಸಾಧನೆ. ಈ ಮೂಲಕ ಹುಬ್ಬಳ್ಳಿಯ ಕಿಮ್ಸ್ ಹೊಸ ಇತಿಹಾಸ ನಿರ್ಮಿಸಿದೆ ಕೆಲವು ತಿಂಗಳ ಹಿಂದೆ ಇಲ್ಲಿನ ವೈದ್ಯರು ಜೀವಂತ ವ್ಯೆಕ್ತಿಗಳು ದಾನ ಮಾಡಿರುವ ಕಿಡ್ನಿ ತೆಗೆದು ಕಸಿ ಮಾಡಿರುವ ಸಾಧನೆ ಮಾಡಿದ್ದರು ಇನ್ನೂ ಕಿಮ್ಸ್ ಆಸ್ಪತ್ರೆಯ ವೈದ್ಯರು ಹಾಗೂ ಅಧೀಕ್ಷಕರು ಮತ್ತು ನಿರ್ದೇಶಕರು ಇಂತಹ ಹಲವಾರು ಸಾಧನೆಗಳನ್ನು ಯಶಸ್ವಿಯಾಗಿ ಮಾಡಿ ರೋಗಿಗಳಿಗೆ ಒಳ್ಳೆಯ ಚಿಕಿತ್ಸೆ ನೀಡಿ ಎಲ್ಲ ರೋಗಿಗಳನ್ನು ಆರೋಗ್ಯವಂತರನ್ನಾಗಿ ಮಾಡಲಿ ಎಂಬುದು ನಮ್ಮ ನಿಮ್ಮೆಲ್ಲರ ಆಶಯ.

ಈ ಸಾಧನೆಗೆ ಪಾತ್ರರಾದ ಕಿಮ್ಸ್ ಆಸ್ಪತ್ರೆಯ ವೈದ್ಯರು ಹಾಗೂ ಆಸ್ಪತ್ರೆಯ ಅಧೀಕ್ಷಕರಾದ ಡಾ. ಅರುಣಕುಮಾರ್ ಚವ್ಹಾಣ್ ಮತ್ತು ನಿರ್ದೇಶಕರಾದ ಡಾ. ರಾಮಲಿಂಗಪ್ಪ ಅಂಟರತಾನಿ ರವರಿಗೆ ಹೃತ್ಪೂರ್ವಕ ಅಭಿನಂದನೆಗಳು
ವರದಿ : ಶಿವ ಹುಬ್ಬಳ್ಳಿ .

ಭ್ರಷ್ಟರ ಬೇಟೆ

Recent Posts

ಶಿಕ್ಷಕಿಯ ಪ್ರೀತಿ ನಿರಾಕರಣೆ: ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದಾರುಣ ಘಟನೆ

ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…

6 days ago

ರೈಲಿನ ಶೌಚಾಲಯದಲ್ಲಿ ರೋಮ್ಯಾನ್ಸ್! ಯುವಕ ಯುವತಿಯ ವಿಡಿಯೋ ವೈರಲ್

ರೈಲಿನ ಶೌಚಾಲಯದಲ್ಲಿ ಚಿತ್ರೀಕರಿಸಲ್ಪಟ್ಟಿರುವ ಒಂದು ವಿಡಿಯೊ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಡಿಯೊದಲ್ಲಿ ಮೊದಲು ಮಾಸ್ಕ್ ಧರಿಸಿರುವ ವ್ಯಕ್ತಿಯೊಬ್ಬ ಶೌಚಾಲಯದಿಂದ…

6 days ago

ಚಿತ್ರದಲ್ಲಿ ಡ್ರಗ್ ಪೆಡ್ಲರ್ ಪಾತ್ರ, ವಾಸ್ತವದಲ್ಲೂ ಮಾದಕ ದಂಧೆ – ವಿದೇಶಿ ನಟನ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಮಾದಕ ವಸ್ತು ದಂಧೆಯ ಮೇಲೆ ಪೊಲೀಸರು ಬಿಗಿ ನಿಗಾವಹಿಸುತ್ತಿರುವಾಗ, ಅಚ್ಚರಿಯ ಸಂಗತಿ ಬಹಿರಂಗವಾಗಿದೆ. ಡ್ರಗ್ ಪೆಡ್ಲರ್ ಪಾತ್ರ…

6 days ago

ಅಫ್ಘಾನಿಸ್ತಾನದಲ್ಲಿ ಬಸ್ ಅಪಘಾತ: 71 ಸಾವು, 17 ಮಕ್ಕಳು ಬಲಿಯಾದ ದುರಂತ

ಹೆರಾತ್ (ಅಫ್ಘಾನಿಸ್ತಾನ), ಆಗಸ್ಟ್ 20 – ಅಫ್ಘಾನಿಸ್ತಾನದ ಪಶ್ಚಿಮ ಭಾಗದ ಹೆರಾತ್ ಪ್ರಾಂತ್ಯದಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…

6 days ago

ಇನ್‌ಸ್ಟಾಗ್ರಾಂ ಪರಿಚಯ ದುರಂತ: ಬಿಜ್ನೋರ್‌ನಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿದ ಮಹಿಳೆ!

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ, ಮುಖಕ್ಕೆ ದುಪಟ್ಟಾ ಹೊದ್ದ ಮಹಿಳೆಯೊಬ್ಬಳು ಯುವಕನನ್ನು ಕಾಲಿಟ್ಟು, ಕೋಲಿನಿಂದ ನಿರ್ದಯವಾಗಿ ಹೊಡೆಯುತ್ತಿರುವುದು ದೃಶ್ಯಗೊಂಡಿದೆ.…

6 days ago

“ಸುಪ್ರೀಂ ತೀರ್ಪಿಗೆ ಬೇಸರಗೊಂಡ ಪ್ರಾಣಿ ಪ್ರೇಮಿ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ದಾಳಿ”

ಬೆಂಗಳೂರು: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ನಡೆದಿದ್ದ ದಾಳಿಯ ಹಿಂದೆ ಗುಜರಾತ್‌ನ ರಾಜ್‌ಕೋಟ್ ಮೂಲದ ರಾಜೇಶ್ ಸಕ್ರಿಯಾ…

6 days ago