Latest

ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಕಿಡ್ನಿ ಕಸಿ ಮಾಡಿದ ಸಾಧನೆಗೆ ಪಾತ್ರವಾದ ಉತ್ತರ ಕರ್ನಾಟಕದ ಸಂಜೀವಿನಿ ಕಿಮ್ಸ್.

ಮನುಷ್ಯನಿಗೆ ಹುಟ್ಟು ಸಾವು ಯಾವ ಸಮಯಕ್ಕೆ ಆಗಬೇಕೋ ಅದೂ ಯಾರ ಕೈಯಲ್ಲೂ ಇರುವುದಿಲ್ಲ ಮನುಷ್ಯ ಭೂಮಿ ಮೇಲೆ ಜನನವಾದ ನಂತರ ಅವನು ಒಂದು ಒಳ್ಳೆಯ ಹೆಸರು ಸಂಪಾದಿಸಬೇಕು ಎಲ್ಲರಿಗೂ ಒಳ್ಳೆಯದನ್ನು ಮಾಡಿ ಒಳ್ಳೆಯದನ್ನು ಬಯಸಿ ಸಾಯುವ ವರೆಗೂ ಒಳ್ಳೆಯ ಸುಖಕರ ಜೀವನ ಮಾಡಬೇಕು ಆದರೇ ಅದೂ ಇತ್ತೀಚಿನ ದಿನಗಳಲ್ಲಿ ಒಂದು ರೋಗಿಗೋಸ್ಕರ ರಕ್ತ ದಾನ ಮಾಡಿ ಎಂದರೇ ಯಾರೂ ಮುಂದೆ ಬರಲ್ಲ ಕೇವಲ ಬೆರಳೆಣಿಕೆ ಅಷ್ಟು ಮಾತ್ರ. ರಕ್ತದಾನ ಮಾಡಲು ಮುಂದೆ ಬರುತ್ತಾರೆ ಮನುಷ್ಯ ಮನುಷ್ಯನಿಗೆ ಆಗಬೇಕು ಪ್ರಾಣಿ ಮರಗಳಿಗೆ ಅಲ್ಲ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರು ಹಾಗೂ ವೈದ್ಯೆರ ತಂಡ ಹಗಲಿರುಳು ರೋಗಿಗಳ ಆರೈಕೆಗೆ ಮುಂದಾಗಿ ರೋಗಿಗಳು ಉತ್ತಮ ಚಿಕಿತ್ಸೆ ಪಡೆದು ಗುಣಮುಖರಾಗಿ ಆರೋಗ್ಯವಾಗಿರಲಿ ಎಂಬುದು ಕಿಮ್ಸ್ ಆಸ್ಪತ್ರೆಯ ವೈದ್ಯರ ಅಧೀಕ್ಷಕರ ನಿರ್ದೇಶಕರ ಆಸೆ.

ಇತ್ತೀಚೆಗೆ ಕೆಲವು ದಿನಗಳ ಹಿಂದೆ ರಸ್ತೆ ಅಪಘಾತದಲ್ಲಿ ಪ್ರಕಾಶ್ ಲಂಬಾಣಿ ಎಂಬ ವ್ಯೆಕ್ತಿಗೆ ತಲೆಯ ಭಾಗದಲ್ಲಿ ತುಂಬಾ ಪೆಟ್ಟಾಗಿ ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು ಆದರೇ ವಿಧಿ ಆಟವೇ ಬೇರೆಯಾಗಿತ್ತು ಚಿಕಿತ್ಸೆ ಫಲಿಸದೇ ಪ್ರಕಾಶ್ ಅವರ ಮೆದುಳು ನಿಷ್ಕ್ರಿಯಗೊಂಡಿತ್ತು ಹಾಗೂ ಅವರ ಯಕೃತ್ ಕಿಡ್ನಿ ಇನ್ನೂ ಕಾರ್ಯ ನಿರ್ವಹಿಸುತ್ತಿತ್ತು ಅಂಗಾಂಗ ದಾನದ ತಂಡ ಮತ್ತು ಕಿಮ್ಸ್ ಆಸ್ಪತ್ರೆಯ ಅಧೀಕ್ಷಕರು ಚರ್ಚಿಸಿ ಪ್ರಕಾಶ್ ಅವರ ಕುಟುಂಬದವರೊಂದಿಗೆ ಆಪ್ತ ಸಮಾಲೋಚನೆ ನಡೆಸಿ ಕುಟುಂಬದವರ ಒಪ್ಪಿಗೆ ಮೇರೆಗೆ ಬೆಂಗಳೂರಿನ ಜೆ ಪಿ ನಗರದಲ್ಲಿರುವ ಸುಪ್ರಸಿದ್ದ ಆರ್ ವಿ ಆಸ್ಪತ್ರೆಯಲ್ಲಿನ ರೋಗಿಯೊಬ್ಬರಿಗೆ ಯಕೃತ್ ಕಸಿ ಅಗತ್ಯೆವಿದ್ದ ಕಾರಣ ಅಲ್ಲಿಯ ವೈದ್ಯರ ತಂಡ ಬಂದು ಯಕೃತ್ ತೆಗೆದು ತಮ್ಮಲ್ಲಿಯೇ ದಾಖಲಾದ 39 ವರ್ಷದ ವ್ಯಕ್ತಿಗೆ ಪ್ರಕಾಶ್ ಅವರ ಕಿಡ್ನಿ ಕಸಿ ಮಾಡಲಾಗಿದೆ ಎಂದು ಕಿಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ರವರು ತಿಳಿಸಿದ್ದಾರೆ.

ವೈದ್ಯರ ಕೋರಿಕೆಯ ಮೇಲೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಿಂದ ಹುಬ್ಬಳ್ಳಿ ವಿಮಾನ ನಿಲ್ದಾಣದ ವರೆಗೆ ಸುಮಾರು 6 ರಿಂದ 7 ಕಿ ಮೀ ರಸ್ತೆಯನ್ನು 0 ಟ್ರಾಫಿಕ್ ಆಗಿ ಮಾಡಿಸಲಾಗಿತ್ತು ಪ್ರಕಾಶ್ ಅವರ ಕಿಡ್ನಿ ತೆಗೆದುಕೊಂಡ ವೈದ್ಯರ ತಂಡ ಕೇವಲ 2 ರಿಂದ 3 ನಿಮಿಷಗಳ ಅಂತರದಲ್ಲಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಿಂದ ಹುಬ್ಬಳ್ಳಿ ವಿಮಾನ ನಿಲ್ದಾಣ ತಲುಪಿ ನಂತರ ಅಲ್ಲಿಂದ ಸ್ಟಾರ್ ಏರ್ ವಿಮಾನದ ಮೂಲಕ ಹುಬ್ಬಳ್ಳಿಯಿಂದ ಬೆಂಗಳೂರಿಗೆ ತೆಗೆದುಕೊಂಡು ಹೋಗಿದ್ದಾರೆ. ಮೆದುಳು ನಿಷ್ಕ್ರಿಯಗೊಂಡ ವ್ಯೇಕ್ತಿಯ ಅಂಗಾಂಗ ತೆಗೆದಿರುವ ಕಾರ್ಯ ಈ ಹಿಂದೆ ಉತ್ತರ ಕರ್ನಾಟಕದ ಭಾಗದಲ್ಲಿ ಇದೇ ಮೊದಲು ಎಂದು ಹೇಳಬಹುದು ಉತ್ತರ ಕರ್ನಾಟಕದ ಕಿಮ್ಸ್ ( ಸಂಜೀವಿನಿ ) ಎಂದೇ ಖ್ಯಾತಿ ಪಡೆದ ಕಿಮ್ಸ್ ಆಸ್ಪತ್ರೆಯ ಮತ್ತು ಕಾಲೇಜಿನಲ್ಲಿ ಇದು ಹೆಮ್ಮೆ ಪಡುವ ಒಂದು ಸಾಧನೆ. ಈ ಮೂಲಕ ಹುಬ್ಬಳ್ಳಿಯ ಕಿಮ್ಸ್ ಹೊಸ ಇತಿಹಾಸ ನಿರ್ಮಿಸಿದೆ ಕೆಲವು ತಿಂಗಳ ಹಿಂದೆ ಇಲ್ಲಿನ ವೈದ್ಯರು ಜೀವಂತ ವ್ಯೆಕ್ತಿಗಳು ದಾನ ಮಾಡಿರುವ ಕಿಡ್ನಿ ತೆಗೆದು ಕಸಿ ಮಾಡಿರುವ ಸಾಧನೆ ಮಾಡಿದ್ದರು ಇನ್ನೂ ಕಿಮ್ಸ್ ಆಸ್ಪತ್ರೆಯ ವೈದ್ಯರು ಹಾಗೂ ಅಧೀಕ್ಷಕರು ಮತ್ತು ನಿರ್ದೇಶಕರು ಇಂತಹ ಹಲವಾರು ಸಾಧನೆಗಳನ್ನು ಯಶಸ್ವಿಯಾಗಿ ಮಾಡಿ ರೋಗಿಗಳಿಗೆ ಒಳ್ಳೆಯ ಚಿಕಿತ್ಸೆ ನೀಡಿ ಎಲ್ಲ ರೋಗಿಗಳನ್ನು ಆರೋಗ್ಯವಂತರನ್ನಾಗಿ ಮಾಡಲಿ ಎಂಬುದು ನಮ್ಮ ನಿಮ್ಮೆಲ್ಲರ ಆಶಯ.

ಈ ಸಾಧನೆಗೆ ಪಾತ್ರರಾದ ಕಿಮ್ಸ್ ಆಸ್ಪತ್ರೆಯ ವೈದ್ಯರು ಹಾಗೂ ಆಸ್ಪತ್ರೆಯ ಅಧೀಕ್ಷಕರಾದ ಡಾ. ಅರುಣಕುಮಾರ್ ಚವ್ಹಾಣ್ ಮತ್ತು ನಿರ್ದೇಶಕರಾದ ಡಾ. ರಾಮಲಿಂಗಪ್ಪ ಅಂಟರತಾನಿ ರವರಿಗೆ ಹೃತ್ಪೂರ್ವಕ ಅಭಿನಂದನೆಗಳು
ವರದಿ : ಶಿವ ಹುಬ್ಬಳ್ಳಿ .

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago