Latest

ಗಂಡ, ಅತ್ತೆಯನ್ನು ಕೊಂದು ಬ್ರಿಡ್ಜ್ ನಲ್ಲಿ ಶವವಿಟ್ಟ ಕಿಲಾಡಿ ಲೇಡಿ.

ದೆಹಲಿಯಲ್ಲಿ ಶ್ರದ್ಧಾ ವಾಕರ್‌ ಹತ್ಯೆಗೈದು ದೇಹವನ್ನು ಕತ್ತರಿಸಿ ರೆಫ್ರಿಜರೇಟರ್‌ನಲ್ಲಿಟ್ಟ ಘಟನೆ ಬೆಳಕಿಗೆ ಬಂದ ಬಳಿಕ ಶವವನ್ನು ಫ್ರೀಡ್ಜರ್‌ನಲ್ಲಿಟ್ಟ ಹಲವು ಹತ್ಯೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇದೀಗ ಗುವಾಹಟಿಯಿಂದ ಇಂತಹದ್ದೇ ಒಂದು ಘಟನೆ ವರದಿಯಾಗಿದ್ದು, ಮಹಿಳೆಯೊಬ್ಬಳು ತನ್ನ ಗಂಡ ಮತ್ತು ಅತ್ತೆಯನ್ನು ಹತ್ಯೆಗೈದು ಹೆಣ ಅಡಗಿಸಿಡುವ ಉದ್ದೇಶದಿಂದ ಇಬ್ಬರ ಶವವನ್ನು ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟು ಬಳಿಕ ನದಿಗೆ ಎಸೆದಿದ್ದಾಳೆ. ಅಸ್ಸಾಂ ಪೊಲೀಸರು ಈಕೆಯನ್ನು ವಿಚಾರಣೆ ನಡೆಸಿದ್ದು, ಅತ್ತೆ ಮತ್ತು ಗಂಡನನ್ನು ಕೊಲೆ ಮಾಡಿ ದೇಹವನ್ನು ಕತ್ತರಿಸಿ ದೇಹದ ಭಾಗಗಳನ್ನು ಫ್ರೀಜರ್‌ನಲ್ಲಿಟ್ಟಿರುವುದಾಗಿ ತಿಳಿಸಿದ್ದಾಳೆ. ಬಳಿಕ ಆ ದೇಹದ ತುಂಡುಗಳನ್ನು ಪಾಲಿಥಾನ್‌ ಬ್ಯಾಗ್‌ಗಳಲ್ಲಿ ಪ್ಯಾಕ್‌ ಮಾಡಿ ಬಳಿಕ ಮೇಘಾಲಯಕ್ಕೆ ಸಾಗಿಸಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಕೆಲಸಕ್ಕೆ ಈಕೆಗೆ ಪ್ರಿಯಕರ ಹಾಗೂ ಆತನ ಸ್ನೇಹಿತ ಕೂಡ ಸಹಾಯ ಮಾಡಿದ್ದಾರೆ. ಮೃತರನ್ನು ಅಮರೇಂದ್ರ ಡೇ ಮತ್ತು ಶಂಕರಿ ಡೇ ಎಂದು ಗುರುತಿಸಲಾಗಿದೆ. ಈ ಕೊಲೆ ಕಳೆದ ವರ್ಷ ಆಗಸ್ಟ್‌-ಸೆಪ್ಟೆಂಬರ್‌ನಲ್ಲಿ ನಡೆದಿದೆ. ಹತ್ಯೆಗೀಡಾದ ತಾಯಿಯ ದೇಹದ ಕೆಲವು ಭಾಗಗಳನ್ನು ಮೇಘಾಲಯದಿಂದ ವಶಪಡಿಸಿಕೊಳ್ಳಲಾಗಿದ್ದು, ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

3 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

3 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

3 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

3 hours ago

ಲಿವ್-ಇನ್ ಸಂಬಂಧಕ್ಕೆ ವಿರೋಧಿಸಿದ್ದ ತಂದೆ-ತಾಯಿ, ತಂಗಿಯನ್ನೇ ಕೊಂದ ಯುವತಿ! ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಹತ್ಯೆ

ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…

3 hours ago

ಸಿನಿಮಾ ಸ್ಟೈಲ್ ಲಾರಿ ದರೋಡೆ: 24 ಗಂಟೆಯಲ್ಲಿ ಆರೋಪಿಗಳ ಬಂಧನ

ಆನೇಕಲ್‌ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…

3 hours ago