ಮಾದಕ ವ್ಯಸನಿಯಾಗಿದ್ದ ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಚಕ್ಕಿವಾಲದಲ್ಲಿ ನಡೆದಿದೆ.
ಪತಿ ಪರಮಜಿತ್ ಸಿಂಗ್ ಮಾದಕ ವ್ಯಸನಿಯಾಗಿದ್ದು, ಡ್ರಗ್ಸ್ ಸೇವಿಸಲು ತನ್ನ ಹೆಂಡತಿ ಬಳಿ ಹಣ ಕೇಳಿರುತ್ತಾನೆ. ಡ್ರಗ್ಸ್ಗಾಗಿ ಹಣ ಕೊಡಲು ಹೆಂಡತಿ ನೀಲಂ ರಾಣಿ ನಿರಾಕರಿಸಿದಾಗ ಆಕೆ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಪತ್ನಿಯ ತಲೆಗೆ ಬಾಣಲೆಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಹಂತಕ ಪತಿ ತನ್ನ ಪತ್ನಿಯ ಮೇಲೆ ಮೊದಲು ಕುಡುಗೋಲಿನಿಂದ ಹಲ್ಲೆ ನಡೆಸಿದ್ದಾನೆ. ಕುಡುಗೋಲು ಮುರಿದಾಗ ಬಾಣಲೆಯಿಂದ ಪತ್ನಿಯ ತಲೆಗೆ 10 ಬಾರಿ ಹೊಡೆದಿದ್ದಾನೆ. ಈ ಪರಿಣಾಮ ತೀವ್ರ ರಕ್ತಸ್ರಾವದಿಂದ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎಂದು ಪೊಲೀಸ್ ಮುಖ್ಯಸ್ಥ ದಲ್ಜಿತ್ ಸಿಂಗ್ ತಿಳಿಸಿದ್ದಾರೆ .
ಈ ಸಂದರ್ಭದಲ್ಲಿ ಮೃತಳ ಅತ್ತೆ ಮಾತನಾಡಿ, ನನ್ನ ಮಗ ಮಾದಕ ವ್ಯಸನಿಯಾಗಿದ್ದು, ಈ ಕಾರಣದಿಂದ ಈ ಕೃತ್ಯ ಎಸಗಿದ್ದಾನೆ. ಈ ಘಟನೆ ನಡೆಯುವ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ಹೇಳಿದ್ದಾರೆ.
ಆರೋಪಿ ಪರಮಜಿತ್ ಸಿಂಗ್ ಈ ಹತ್ಯೆ ನಡೆಸಿದ ನಂತರ ಮೊಗ ಪೊಲೀಸ್ ಠಾಣೆಗೆ ತೆರಳಿ ಅಪರಾಧವನ್ನು ಒಪ್ಪಿಕೊಂಡು ಶರಣಾಗಿದ್ದಾನೆ. ವಿಷಯ ತಿಳಿದ ಕೂಡಲೇ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ
ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ಹುಟ್ಟುಹಬ್ಬದ ಸಂಭ್ರಮವೇ ಭೀಕರ ದುರಂತಕ್ಕೆ ಕಾರಣವಾದ ಘಟನೆ ಬೆಳಕಿಗೆ ಬಂದಿದೆ. ಸ್ನೇಹಿತರ ನಡುವೆ ನಡೆದ ಸಣ್ಣ…
ಮಧ್ಯಪ್ರದೇಶದಲ್ಲಿ ಜನಪ್ರತಿನಿಧಿಗಳ ವರ್ತನೆ ಕುರಿತ ವಿವಾದಗಳು ತಣಿಯುವ ಮುನ್ನವೇ ಮತ್ತೊಂದು ಅಧಿಕಾರದ ದರ್ಪದ ಘಟನೆ ಬೆಳಕಿಗೆ ಬಂದಿದೆ. ರಾಜ್ಯ ವಿಧಾನಸಭೆಯ…
ಕೆನಡಾದಲ್ಲಿ ಶಿಕ್ಷಣ ಪಡೆಯುವ ಕನಸು ಕಂಡು ಹೋಗುವ ಸಾವಿರಾರು ಭಾರತೀಯ ವಿದ್ಯಾರ್ಥಿಗಳ ಜೀವನ ಅಷ್ಟು ಸುಲಭವಿಲ್ಲ ಎಂಬುದು ಮತ್ತೊಮ್ಮೆ ಬೆಳಕಿಗೆ…
ಜಲ್ಪೈಗುರಿ ಮತ್ತು ರಾಮನಗರ ನಡುವಿನ ರೈಲು ಪ್ರಯಾಣದ ವೇಳೆ ಮನಕಲಕುವ ಘಟನೆ ನಡೆದಿದೆ. ಚಲಿಸುತ್ತಿದ್ದ ರೈಲಿನಿಂದ ಮಗು ಕೆಳಗೆ ಬಿದ್ದಿದ್ದು,…
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಕಚೇರಿಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 2026ನೇ ಸಾಲಿಗೆ…
ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಶಂಕ್ರಿಕೊಪ್ಪ ಗ್ರಾಮದಲ್ಲಿ ನಿಶ್ಚಿತಾರ್ಥ ನಡೆಯಬೇಕಿದ್ದ ದಿನವೇ ಯುವತಿ ನಾಪತ್ತೆಯಾಗಿರುವ ಘಟನೆ ಆತಂಕ ಹುಟ್ಟಿಸಿದೆ. 24…