ಮಾದಕ ವ್ಯಸನಿಯಾಗಿದ್ದ ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಚಕ್ಕಿವಾಲದಲ್ಲಿ ನಡೆದಿದೆ.
ಪತಿ ಪರಮಜಿತ್ ಸಿಂಗ್ ಮಾದಕ ವ್ಯಸನಿಯಾಗಿದ್ದು, ಡ್ರಗ್ಸ್ ಸೇವಿಸಲು ತನ್ನ ಹೆಂಡತಿ ಬಳಿ ಹಣ ಕೇಳಿರುತ್ತಾನೆ. ಡ್ರಗ್ಸ್ಗಾಗಿ ಹಣ ಕೊಡಲು ಹೆಂಡತಿ ನೀಲಂ ರಾಣಿ ನಿರಾಕರಿಸಿದಾಗ ಆಕೆ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಪತ್ನಿಯ ತಲೆಗೆ ಬಾಣಲೆಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಹಂತಕ ಪತಿ ತನ್ನ ಪತ್ನಿಯ ಮೇಲೆ ಮೊದಲು ಕುಡುಗೋಲಿನಿಂದ ಹಲ್ಲೆ ನಡೆಸಿದ್ದಾನೆ. ಕುಡುಗೋಲು ಮುರಿದಾಗ ಬಾಣಲೆಯಿಂದ ಪತ್ನಿಯ ತಲೆಗೆ 10 ಬಾರಿ ಹೊಡೆದಿದ್ದಾನೆ. ಈ ಪರಿಣಾಮ ತೀವ್ರ ರಕ್ತಸ್ರಾವದಿಂದ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎಂದು ಪೊಲೀಸ್ ಮುಖ್ಯಸ್ಥ ದಲ್ಜಿತ್ ಸಿಂಗ್ ತಿಳಿಸಿದ್ದಾರೆ .
ಈ ಸಂದರ್ಭದಲ್ಲಿ ಮೃತಳ ಅತ್ತೆ ಮಾತನಾಡಿ, ನನ್ನ ಮಗ ಮಾದಕ ವ್ಯಸನಿಯಾಗಿದ್ದು, ಈ ಕಾರಣದಿಂದ ಈ ಕೃತ್ಯ ಎಸಗಿದ್ದಾನೆ. ಈ ಘಟನೆ ನಡೆಯುವ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ಹೇಳಿದ್ದಾರೆ.
ಆರೋಪಿ ಪರಮಜಿತ್ ಸಿಂಗ್ ಈ ಹತ್ಯೆ ನಡೆಸಿದ ನಂತರ ಮೊಗ ಪೊಲೀಸ್ ಠಾಣೆಗೆ ತೆರಳಿ ಅಪರಾಧವನ್ನು ಒಪ್ಪಿಕೊಂಡು ಶರಣಾಗಿದ್ದಾನೆ. ವಿಷಯ ತಿಳಿದ ಕೂಡಲೇ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…