Crime

ಹೋಳೆನರಸೀಪುರದಲ್ಲಿ ಹಾವುಗಳ ಹತ್ಯೆ: ಚರ್ಮ ಸುಲಿದು ಚರಂಡಿಗೆ ಬಿಸಾಡಿದ ದುಷ್ಕರ್ಮಿಗಳು!

ಹಾಸನ (ಜ.23): ಹೊಳೆನರಸೀಪುರದ ದರ್ಜಿ ಬೀದಿಯಲ್ಲಿ ಬೆಳಿಗ್ಗೆ ವೇಳೆ ಕಂಡು ಬಂದ ಒಂದು ಆಘಾತಕಾರಿ ಘಟನೆ, ಸ್ಥಳೀಯರಲ್ಲಿ ಆತಂಕ ಹುಟ್ಟಿಸಿತು. ಚರಂಡಿಯಲ್ಲಿ ಪತ್ತೆಯಾದ ಹಾವುಗಳ ಚರ್ಮ ಮತ್ತು ಅವಶೇಷಗಳು ಕಿಡಿಗೇಡಿಗಳ ಕ್ರೂರ ಕೃತ್ಯವನ್ನು ಬಹಿರಂಗಪಡಿಸಿವೆ. ವರದಿಗಳ ಪ್ರಕಾರ, ಹಾವುಗಳ ಚರ್ಮವನ್ನು ಸುಲಿದು ಅವುಗಳ ಮಾಂಸವನ್ನು ಬೇರ್ಪಡಿಸಿ ಬಿಸಾಡಲಾಗಿದೆ.

ಸ್ಥಳೀಯರು ಈ ಘಟನೆಯನ್ನು ಗಮನಿಸಿದ ನಂತರ, ಇದು ಹಾವುಗಳ ಮಾಂಸಕ್ಕಾಗಿ ಕೃತ್ಯ ನಡೆದಿರಬಹುದು ಎಂದು ಆಲೋಚಿಸುತ್ತಿದ್ದಾರೆ. ಹಾಸನ-ಮೈಸೂರು ರಸ್ತೆಯ ದರ್ಜಿ ಬೀದಿಯಲ್ಲಿ ನಡೆದಿದೆ ಈ ಘಟನೆ, ನಂತರ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೇವತಾ ಸ್ವರೂಪದಲ್ಲಿ ಪೂಜಿಸಲ್ಪಡುವ ಹಾವುಗಳನ್ನು ಕ್ರೂರವಾಗಿ ಸಾಯಿಸಿ, ಅವುಗಳ ಚರ್ಮವನ್ನು ಸುಲಿದು ಬಿಸಾಡಿದುದರಿಂದ ಜನರಲ್ಲಿ ಭೀತಿ ಮೂಡಿದೆ.

ಈ ಘಟನೆಯಲ್ಲಿ ಹೊಳೆನರಸೀಪುರದಲ್ಲಿ ಭಯಭೀತಿಯ ವಾತಾವರಣವು ಹಾವಿಯಾಗಿದೆ. ಪ್ರಸ್ತುತ, ಸ್ಥಳೀಯ ಪೊಲೀಸ್ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಕೃತ್ಯ ಹಿಂದಿನ ಕಾರಣಗಳ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸುವ ಪ್ರಯತ್ನದಲ್ಲಿದ್ದಾರೆ. ಪರಿಶೀಲನೆ ವೇಳೆ, ಹಾವುಗಳ ಮಾಂಸಕ್ಕಾಗಿ ಅಥವಾ ಮಾಂಸಾಹಾರ ಸೇವನೆಗಾಗಿ ಹಾವುಗಳನ್ನು ಹತ್ಯೆ ಮಾಡಿ, ಅವುಗಳ ಚರ್ಮ ಹಾಗೂ ಇತರ ಭಾಗಗಳನ್ನು ಚರಂಡಿಗೆ ಎಸೆದಿರುವುದಕ್ಕೆ ಕಿಡಿಗೇಡಿಗಳು ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

10 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

14 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

14 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

14 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

14 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

19 hours ago