Categories: CrimeLatest

ಕಿತ್ತೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಇಬ್ಬರು ಮನೆಗಳ್ಳರ ಬಂಧನ, ₹9 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ವಾಹನಗಳ ಜಪ್ತಿ

ಕಿತ್ತೂರು: ಕಿತ್ತೂರು ಹಾಗೂ ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಮನೆಗಳ್ಳತನ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿರುವ ಕಿತ್ತೂರು ಪೊಲೀಸರು, ಇಬ್ಬರು ಅಂತರ-ತಾಲ್ಲೂಕು ಮನೆಗಳ್ಳರನ್ನು ಬಂಧಿಸಿ ಸುಮಾರು ₹9 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿಯ ಆಭರಣಗಳು, ಒಂದು ಎರ್ಟಿಗಾ ಕಾರು ಹಾಗೂ ಒಂದು ದ್ವಿಚಕ್ರ ವಾಹನವನ್ನು ಜಪ್ತಿ ಮಾಡಿದ್ದಾರೆ.

ಕಿತ್ತೂರು ಸಮೀಪದ ಅವರಾದಿ ಹಾಗೂ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮಗಳಲ್ಲಿ ನಡೆದ ಮನೆಗಳ್ಳತನ ಪ್ರಕರಣಗಳ ತನಿಖೆ ಕೈಗೊಂಡಿದ್ದ ಪೊಲೀಸರು, ಚಿಕ್ಕ ನಂದಿಹಳ್ಳಿ ಕ್ರಾಸ್ ಸಮೀಪ ಪತ್ರಯ್ಯ ನಿಂಗಯ್ಯ ಹಿರೇಮಠ (ಹೊಳಿ ನಾಗಲಾಪುರ) ಹಾಗೂ ಅನಿಲಕುಮಾರ ಪ್ರಭುಸ್ವಾಮಿ ಹಿರೇಮಠ (ಗುಂಡ್ಲೂರ ಚಾಳ್, ಬೈಲಹೊಂಗಲ) ಅವರನ್ನು ಮೋಟಾರ್ ಸೈಕಲ್ ಹಾಗೂ ಕಳವು ಮಾಡಿದ್ದ ಕೆಲವು ಬೆಳ್ಳಿ ಆಭರಣಗಳೊಂದಿಗೆ ಬಂಧಿಸಿದ್ದರು.

ಅವರಾದಿ ಗ್ರಾಮದ ನಿವಾಸಿ ರೇಣುಕಾ ಆನಂದ ಪುರದ ಅವರ ಮನೆಯ ಮೇಲ್ಛಾವಣಿಯ ಹಂಚುಗಳನ್ನು ತೆಗೆದು ಒಳನುಗ್ಗಿದ ಆರೋಪಿಗಳು, ಮನೆಯ ಟ್ರೆಜರಿಯಲ್ಲಿದ್ದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ಕಳವು ಮಾಡಿದ್ದರು. ಈ ಸಂಬಂಧ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಡಿ ಪ್ರಕರಣ ದಾಖಲಾಗಿತ್ತು.

ನ್ಯಾಯಾಲಯದ ಆದೇಶದಂತೆ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ ವೇಳೆ, ಅವರು ನೀಡಿದ ಸ್ವಇಚ್ಛಾ ಹೇಳಿಕೆಯ ಆಧಾರದ ಮೇಲೆ ಕಿತ್ತೂರು ಹಾಗೂ ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಗಳ್ಳತನ ಪ್ರಕರಣಗಳಲ್ಲಿ ಕಳುವಾಗಿದ್ದ ಆಭರಣಗಳನ್ನು ವಿವಿಧ ಹಣಕಾಸು ಸಂಸ್ಥೆಗಳಿಂದ ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ಕಳವು ಮಾಡಿದ ಚಿನ್ನಾಭರಣಗಳನ್ನು ಬೈಲಹೊಂಗಲದ ಮಣಪುರಂ ಗೋಲ್ಡ್ ಫೈನಾನ್ಸ್, ಮುತ್ತೂಟ್ ಫೈನಾನ್ಸ್, ಕಿತ್ತೂರಿನ ಮುತ್ತೂಟ್ ಮಣಿ ಫೈನಾನ್ಸ್, ಹುಕ್ಕೇರಿಯ ಮುತ್ತೂಟ್ ಫಿನ್‌ಕಾರ್ಪ್ ಹಾಗೂ ಬೆಳಗಾವಿಯ ಖಡೇಬಜಾರ್‌ನ ಮುತ್ತೂಟ್ ಎಕ್ಸಿಮ್ ಫೈನಾನ್ಸ್‌ನಲ್ಲಿ ಅಡ ಇಟ್ಟಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಪೊಲೀಸರು ಒಟ್ಟು 60 ಗ್ರಾಂ ತೂಕದ ಚಿನ್ನಾಭರಣ, ₹15 ಸಾವಿರ ಮೌಲ್ಯದ ಬೆಳ್ಳಿಯ ಆಭರಣ ಸೇರಿದಂತೆ ಸುಮಾರು ₹9 ಲಕ್ಷ ಮೌಲ್ಯದ ಕಳುವಾದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಕಳುವಿನಿಂದ ಬಂದ ಹಣವನ್ನು ಕಾರಿನ ಸಾಲ ತೀರಿಸಲು ಬಳಸಿದ್ದ ಆರೋಪಿಗಳು ಕಳ್ಳತನಕ್ಕೆ ಬಳಸಿದ್ದ ಮಾರುತಿ ಸುಜುಕಿ ಎರ್ಟಿಗಾ ಕಾರು ಹಾಗೂ ದ್ವಿಚಕ್ರ ವಾಹನವನ್ನು ಸಹ ಪೊಲೀಸರು ಜಪ್ತಿ ಮಾಡಿದ್ದಾರೆ.

ಈ ಕಾರ್ಯಾಚರಣೆ ಡಿವೈಎಸ್‌ಪಿ ಡಾ. ವೀರಯ್ಯ ಹಿರೇಮಠ ಹಾಗೂ ಸಿಪಿಐ ಶಿವಾನಂದ ಬಿ. ಗುಡಗನಟ್ಟಿ ಅವರ ಮಾರ್ಗದರ್ಶನದಲ್ಲಿ, ಪಿಎಸ್‌ಐ ಭರತ್ ಎಸ್., ಪಿಎಸ್‌ಐ ಗಂಗಾಧರ ಜಿ. ಹಂಪಣ್ಣವರ ಹಾಗೂ ಕಿತ್ತೂರು ಪೊಲೀಸ್ ಠಾಣೆಯ ಸಿಬ್ಬಂದಿ ಮತ್ತು ಬೆಳಗಾವಿ ಜಿಲ್ಲಾ ತಾಂತ್ರಿಕ ವಿಭಾಗದ ಸಿಬ್ಬಂದಿಯ ತಂಡದಿಂದ ಯಶಸ್ವಿಯಾಗಿ ನಡೆಸಲಾಯಿತು.

ತಂಡದ ಅತ್ಯುತ್ತಮ ಕಾರ್ಯಾಚರಣೆಯನ್ನು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಐಪಿಎಸ್ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಬಿ. ಬಸರಗಿ ಶ್ಲಾಘಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

21 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

21 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

21 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

21 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago