Latest

ಗಂಜಾ ಪೆಡ್ಲರ್ ಮೇಲೆ ಕೋಲಾರ ಪೊಲೀಸರ ದಾಳಿ, ಆರೋಪಿ ಪೊಲೀಸರ ಅತಿಥಿ.

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯ ಪಿ.ಐ ಶ್ಕಾಂತರಾಜ್.ಕೆ ರವರು ಇದೇ ತಿಂಗಳ ಜೂನ್ 26 ರಂದು ಸಂಜೆ ಸಮಯ ಠಾಣೆಯಲ್ಲಿದ್ದಾಗ ಕೋಲಾರ-ವೇಮಗಲ್ ರಸ್ತೆಯ ಸಂಗೊಂಡಹಳ್ಳಿ ಗ್ರಾಮದ ಸಮೀಪ ಇರುವ ಖಂಡಿ ಗಣಪತಿ ದೇವಸ್ಥಾನದ ರಸ್ತೆಯಲ್ಲಿ ಒಬ್ಬ ವ್ಯಕ್ತಿ ಆಟೋದಲ್ಲಿ ಗಾಂಜ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಗಳಾದ ಶೇಕ್ ಸಾಧಿಕ್ ಪಾಷ. ರವಿಕುಮಾರ್, ಮುರಳಿ ಮೋಹನ್, ಆಂಜಿನಪ್ಪ, ಸತೀಶ್, ನವೀನ್‌ಕುಮಾ‌ರ್, ಆರತಿ, ರವರು ದಾಳಿ ಮಾಡಿ ಆರೋಪಿಯಾದ ಕೋಲಾರ ನಗರ ವಾಸಿ ಮುಭಾರಕ್ ಪಾಷ 40 ವರ್ಷ, ಇವರನ್ನು ವಶಕ್ಕೆ ಪಡೆದುಕೊಂಡು ಸುಮಾರು ಎರಡು ಲಕ್ಷ ಬೆಲೆ ಬಾಳುವ ನಾಲ್ಕು ಕೆ.ಜಿ ಮಾಧಕ ವಸ್ತುವಾದ ಒಣ ಗಾಂಜಾ ಮತ್ತು ಕೃತ್ಯಕ್ಕೆ ಉಪಯೋಗಿಸಿದ ಆಟೋ ಸಂಖ್ಯೆ ಕೆ.ಎ-19-ಡಿ-8010 ಹಾಗೂ ಒಂದು ಡಿಜಿಟಲ್ ತೋಕದ ಯಂತ್ರ ವಶಪಡಿಸಿಕೊಂಡು ಮೊ. ಸಂಖೆ 262/2025, 20(b)(ii)(B) NDPS Act-1985 ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಈ ಕಾರ್ಯವೈಖರಿಯದ ಬಗ್ಗೆ ಕೋಲಾರ ಜಿಲ್ಲೆ ಪೊಲೀಸ್ ಅಧೀಕ್ಷಕರಾದ ನಿಖಿಲ್ ಬಿ. ಐಪಿಎಸ್. ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ರವಿಶಂಕರ್ ಮತ್ತು ಶ್ ಜಗದೀಶ್ ಹಾಗು ಎಂ.ಎಚ್. ನಾಗ್ತೆ ಪೊಲೀಸ್ ಉಪಾಧೀಕ್ಷಕರು ಕೋಲಾರ ಉಪ ವಿಭಾಗ ರವರು ಮೆಚ್ಚಿ ಪ್ರಸಂಶೆ ವ್ಯಕ್ತ ಪಡಿಸಿದ್ದಾರೆ. ವರದಿ ರೋಷನ್ ಜಮೀರ್

nazeer ahamad

Recent Posts

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

34 seconds ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

20 minutes ago

ರೀಲ್ಸ್ ಹುಚ್ಚಾಟದ ದುರಂತ: ಹುಬ್ಬಳ್ಳಿಯಲ್ಲಿ ಬಾಲಕ ಸಾವು – ಇಬ್ಬರ ಬಂಧನ

ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…

4 hours ago

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

18 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

19 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

1 day ago