ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯ ಪಿ.ಐ ಶ್ಕಾಂತರಾಜ್.ಕೆ ರವರು ಇದೇ ತಿಂಗಳ ಜೂನ್ 26 ರಂದು ಸಂಜೆ ಸಮಯ ಠಾಣೆಯಲ್ಲಿದ್ದಾಗ ಕೋಲಾರ-ವೇಮಗಲ್ ರಸ್ತೆಯ ಸಂಗೊಂಡಹಳ್ಳಿ ಗ್ರಾಮದ ಸಮೀಪ ಇರುವ ಖಂಡಿ ಗಣಪತಿ ದೇವಸ್ಥಾನದ ರಸ್ತೆಯಲ್ಲಿ ಒಬ್ಬ ವ್ಯಕ್ತಿ ಆಟೋದಲ್ಲಿ ಗಾಂಜ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಗಳಾದ ಶೇಕ್ ಸಾಧಿಕ್ ಪಾಷ. ರವಿಕುಮಾರ್, ಮುರಳಿ ಮೋಹನ್, ಆಂಜಿನಪ್ಪ, ಸತೀಶ್, ನವೀನ್ಕುಮಾರ್, ಆರತಿ, ರವರು ದಾಳಿ ಮಾಡಿ ಆರೋಪಿಯಾದ ಕೋಲಾರ ನಗರ ವಾಸಿ ಮುಭಾರಕ್ ಪಾಷ 40 ವರ್ಷ, ಇವರನ್ನು ವಶಕ್ಕೆ ಪಡೆದುಕೊಂಡು ಸುಮಾರು ಎರಡು ಲಕ್ಷ ಬೆಲೆ ಬಾಳುವ ನಾಲ್ಕು ಕೆ.ಜಿ ಮಾಧಕ ವಸ್ತುವಾದ ಒಣ ಗಾಂಜಾ ಮತ್ತು ಕೃತ್ಯಕ್ಕೆ ಉಪಯೋಗಿಸಿದ ಆಟೋ ಸಂಖ್ಯೆ ಕೆ.ಎ-19-ಡಿ-8010 ಹಾಗೂ ಒಂದು ಡಿಜಿಟಲ್ ತೋಕದ ಯಂತ್ರ ವಶಪಡಿಸಿಕೊಂಡು ಮೊ. ಸಂಖೆ 262/2025, 20(b)(ii)(B) NDPS Act-1985 ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈ ಕಾರ್ಯವೈಖರಿಯದ ಬಗ್ಗೆ ಕೋಲಾರ ಜಿಲ್ಲೆ ಪೊಲೀಸ್ ಅಧೀಕ್ಷಕರಾದ ನಿಖಿಲ್ ಬಿ. ಐಪಿಎಸ್. ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ರವಿಶಂಕರ್ ಮತ್ತು ಶ್ ಜಗದೀಶ್ ಹಾಗು ಎಂ.ಎಚ್. ನಾಗ್ತೆ ಪೊಲೀಸ್ ಉಪಾಧೀಕ್ಷಕರು ಕೋಲಾರ ಉಪ ವಿಭಾಗ ರವರು ಮೆಚ್ಚಿ ಪ್ರಸಂಶೆ ವ್ಯಕ್ತ ಪಡಿಸಿದ್ದಾರೆ. ವರದಿ ರೋಷನ್ ಜಮೀರ್
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…