ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ ದರೋಡೆ ಪ್ರಕರಣದಿಂದ ಶಾಕ್ ಆಗಿರುವಂತಾಗಿದೆ. ಗಲ್ ಪೇಟೆ ಪೊಲೀಸ್ ಠಾಣೆಗೆ ಹತ್ತಿರವಿರುವ ಈ ಎಟಿಎಂ ಯಂತ್ರದಿಂದ ಅಪರಿಚಿತ ಕಳ್ಳರು ಸುಮಾರು ₹27 ಲಕ್ಷ ಮೌಲ್ಯದ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ.
ಬೆಳಗ್ಗೆ ಬ್ಯಾಂಕ್ ಸಿಬ್ಬಂದಿ ಎಟಿಎಂ ಪರಿಶೀಲನೆ ವೇಳೆ ದರೋಡೆ ನಡೆದಿರುವುದು ಬೆಳಕಿಗೆ ಬಂದಿದೆ. ಕೂಡಲೇ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಹಾಗೂ ಬೆರಳಚ್ಚು ತಜ್ಞರೊಂದಿಗೆ ಶ್ವಾನದಳವನ್ನು ರವಾನಿಸಿ ಪರಿಶೀಲನೆ ಕೈಗೊಂಡಿದ್ದಾರೆ.
ಘಟನೆಯು ಹೆಚ್ಚುವರಿ ಭದ್ರತೆ ಇಲ್ಲದಿರುವ ಎಟಿಎಂ ಕೇಂದ್ರಗಳ ಮೇಲಿನ ಭದ್ರತಾ ಪ್ರಮಾಣವನ್ನೇ ಪ್ರಶ್ನೆಗೊಳಿಸಿದೆ. ಕಳ್ಳರು ಎಟಿಎಂ ಯಂತ್ರವನ್ನು ತಾಂತ್ರಿಕವಾಗಿ ತೆರೆದು ನಗದು ದೋಚಿರುವ ಶಂಕೆ ವ್ಯಕ್ತವಾಗಿದ್ದು, ಸಿಸಿಟಿವಿ ದೃಶ್ಯಾವಳಿ ಆಧಾರದ ಮೇಲೆ ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯಕ್ಕೆ ಪೊಲೀಸರು ಮುಂದಾಗಿದ್ದಾರೆ.
ಈ ಕುರಿತು ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಪತ್ತೆ ಹಚ್ಚಲು ಕ್ರಮ ಜರುಗಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…