ಕೋಲಾರ ನಗರ ಪೊಲೀಸರಿಂದ ರಾಜ್ಯದ ಹಲವಾರು ಕಡೆ ಅಂಗಡಿಗಳ ರೋಲಿಂಗ್ ಷಟರ್ ಹೊಡೆದು ಹಣ ಕಳ್ಳತನ ಮಾಡಿದ್ದ ಮತ್ತು ಹೆದ್ದಾರಿಗಳಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪಿಗಳ ಬಂಧನ.
ಕೋಲಾರ ನಗರದಲ್ಲಿ ಇತ್ತೀಚಿಗೆ ರೋಲಿಂಗ್ ಷಟರ್ ಹೊಡೆದು ಹಣ ಕಳ್ಳತನ ಮಾಡುತ್ತಾ ಸಾರ್ವಜನಿಕರ ಮತ್ತು ಪೊಲೀಸರ ನಿದ್ದೆಗೆಡಿಸಿದ್ದ ಆರೋಪಿಗಳನ್ನು ಬಂಧಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ನಿಖಿಲ್ ಬಿ. ಐ.ಪಿ.ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ರವಿಶಂಕರ್, ಹೆಚ್.ಸಿ. ಜಗದೀಶ್ ಮತ್ತು ಪೊಲೀಸ್ ಉಪಾಧೀಕ್ಷಕರು ಕೋಲಾರ ಉಪವಿಭಾಗ ಎಂ. ಹೆಚ್. ನಾಗ್ಲೆ ರವರ ಮಾರ್ಗದರ್ಶನದಲ್ಲಿ ಎರಡು ವಿಶೇಷ ತಂಡಗಳನ್ನು ರಚಿಸಲಾಗಿತ್ತು.
ಕೋಲಾರ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಸದಾನಂದ, ಎಂ. ಹಾಗೂ ಪಿ.ಎಸ್.ಐ ಸೈಯದ್ ಖಾಸಿಂ, ಸಿಬ್ಬಂದಿಯವರಾದ ಮೋಹನ್, ನಾರಾಯಣಸ್ವಾಮಿ, ಮೆಹಬೂಬ್ ಪಾಷಾ, ಶ್ರೀನಾಥ, ಕಿಶೋರ, ಶಾ ಮೂರ್ತಿ, ಬಾಲಾಜಿ. ಹೆಚ್.ವಿ. ಗಂಗಾಧರ, ಜೀಪ್ ಚಾಲಕರಾದ ಮುರುಳಿ ಮತ್ತು ತಾಂತ್ರಿಕ ವಿಭಾಗದ ಸಿಬ್ಬಂದಿಯಾದ ಪಿ.ಸಿ ಮುರುಳಿ ರವರ ತಂಡವು ಹಲವಾರು ಸಿಸಿ ಕ್ಯಾಮರಗಳು ಹಾಗೂ ಆಧುನಿಕ ತಂತ್ರಜ್ಞಾನದ ಸಹಾಯದಿಂದ ಆರೋಪಿಗಳನ್ನು ರಾಯಚೂರು ಜಿಲ್ಲೆಯ ಸಿಂದನೂರು ಬಸ್ ನಿಲ್ದಾಣದ ಬಳಿ ವಶಕ್ಕೆ ಪಡೆದು ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಆಯುಧಗಳು, ಜರ್ಕಿನ್, ಮಂಕೀಕ್ಯಾಪ್ ಮತ್ತು ಕೃತ್ಯಕ್ಕೆ ಬಳಸಿದ್ದ 03 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಈ ಪ್ರಕರಣಗಳಿಗೆ ಸಂಬಂದಿಸಿದಂತೆ ಪ್ರಮುಖ ಆರೋಪಿಗಳಾದ
ರೋಹಿತ್ ಗಿರಿ ಮತ್ತು ದಾದಾಪೀರ್ ಈ ಆರೋಪಿಗಳು ಕೋಲಾರ ನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಟೌನ್, ಪೆರೇಸಂದ್ರ, ಚಿಂತಾಮಣಿ ಟೌನ್, ತುಮಕೂರು ನಗರ, ನೆಲಮಂಗಲ, ದೇವನಹಳ್ಳಿ, ರಾಮನಗರ ಹಾಗೂ ರಾಜ್ಯದ ಇನ್ನೂ ಹಲವಾರು ಕಡೆ ರಾತ್ರಿ ವೇಳೆ ಅಂಗಡಿಗಳ ರೋಲಿಂಗ್ ಷಟರ್ ಹೊಡೆದು ಹಣ ಕಳವು ಮಾಡಿರುವುದು ತನಿಖೆಯಿಂದ ತಿಳಿದು ಬಂದಿದೆ.
ಈ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘಿಸಿ ಮೆಚ್ಚುಗೆಯನ್ನು ವ್ಯಕ್ತಪಡಿಸಿ ತಂಡಕ್ಕೆ ಬಹುಮಾನವನ್ನು ಘೋಷಿಸಿದ್ದಾರೆ.
ವರದಿ: ರೋಶನ್ ಜಮೀರ್
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…