Latest

ಕೋಲಾರ ಸರಣಿ ಕಳ್ಳತನ ; ಇಬ್ಬರ ಬಂಧನ

ಕೋಲಾರ ನಗರ ಪೊಲೀಸರಿಂದ ರಾಜ್ಯದ ಹಲವಾರು ಕಡೆ ಅಂಗಡಿಗಳ ರೋಲಿಂಗ್ ಷಟರ್ ಹೊಡೆದು ಹಣ ಕಳ್ಳತನ ಮಾಡಿದ್ದ ಮತ್ತು ಹೆದ್ದಾರಿಗಳಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪಿಗಳ ಬಂಧನ.

ಕೋಲಾರ ನಗರದಲ್ಲಿ ಇತ್ತೀಚಿಗೆ ರೋಲಿಂಗ್ ಷಟರ್ ಹೊಡೆದು ಹಣ ಕಳ್ಳತನ ಮಾಡುತ್ತಾ ಸಾರ್ವಜನಿಕರ ಮತ್ತು ಪೊಲೀಸರ ನಿದ್ದೆಗೆಡಿಸಿದ್ದ ಆರೋಪಿಗಳನ್ನು ಬಂಧಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ನಿಖಿಲ್ ಬಿ. ಐ.ಪಿ.ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ರವಿಶಂಕರ್, ಹೆಚ್.ಸಿ. ಜಗದೀಶ್ ಮತ್ತು ಪೊಲೀಸ್ ಉಪಾಧೀಕ್ಷಕರು ಕೋಲಾರ ಉಪವಿಭಾಗ ಎಂ. ಹೆಚ್. ನಾಗ್ಲೆ ರವರ ಮಾರ್ಗದರ್ಶನದಲ್ಲಿ ಎರಡು ವಿಶೇಷ ತಂಡಗಳನ್ನು ರಚಿಸಲಾಗಿತ್ತು.

ಕೋಲಾರ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಸದಾನಂದ, ಎಂ. ಹಾಗೂ ಪಿ.ಎಸ್.ಐ ಸೈಯದ್ ಖಾಸಿಂ, ಸಿಬ್ಬಂದಿಯವರಾದ ಮೋಹನ್, ನಾರಾಯಣಸ್ವಾಮಿ, ಮೆಹಬೂಬ್ ಪಾಷಾ, ಶ್ರೀನಾಥ, ಕಿಶೋರ, ಶಾ ಮೂರ್ತಿ, ಬಾಲಾಜಿ. ಹೆಚ್.ವಿ. ಗಂಗಾಧರ, ಜೀಪ್ ಚಾಲಕರಾದ ಮುರುಳಿ ಮತ್ತು ತಾಂತ್ರಿಕ ವಿಭಾಗದ ಸಿಬ್ಬಂದಿಯಾದ ಪಿ.ಸಿ ಮುರುಳಿ ರವರ ತಂಡವು ಹಲವಾರು ಸಿಸಿ ಕ್ಯಾಮರಗಳು ಹಾಗೂ ಆಧುನಿಕ ತಂತ್ರಜ್ಞಾನದ ಸಹಾಯದಿಂದ ಆರೋಪಿಗಳನ್ನು ರಾಯಚೂರು ಜಿಲ್ಲೆಯ ಸಿಂದನೂರು ಬಸ್ ನಿಲ್ದಾಣದ ಬಳಿ ವಶಕ್ಕೆ ಪಡೆದು ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಆಯುಧಗಳು, ಜರ್ಕಿನ್, ಮಂಕೀಕ್ಯಾಪ್ ಮತ್ತು ಕೃತ್ಯಕ್ಕೆ ಬಳಸಿದ್ದ 03 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಈ ಪ್ರಕರಣಗಳಿಗೆ ಸಂಬಂದಿಸಿದಂತೆ ಪ್ರಮುಖ ಆರೋಪಿಗಳಾದ
ರೋಹಿತ್ ಗಿರಿ ಮತ್ತು ದಾದಾಪೀರ್ ಈ ಆರೋಪಿಗಳು ಕೋಲಾರ ನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಟೌನ್, ಪೆರೇಸಂದ್ರ, ಚಿಂತಾಮಣಿ ಟೌನ್, ತುಮಕೂರು ನಗರ, ನೆಲಮಂಗಲ, ದೇವನಹಳ್ಳಿ, ರಾಮನಗರ ಹಾಗೂ ರಾಜ್ಯದ ಇನ್ನೂ ಹಲವಾರು ಕಡೆ ರಾತ್ರಿ ವೇಳೆ ಅಂಗಡಿಗಳ ರೋಲಿಂಗ್ ಷಟರ್ ಹೊಡೆದು ಹಣ ಕಳವು ಮಾಡಿರುವುದು ತನಿಖೆಯಿಂದ ತಿಳಿದು ಬಂದಿದೆ.

ಈ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘಿಸಿ ಮೆಚ್ಚುಗೆಯನ್ನು ವ್ಯಕ್ತಪಡಿಸಿ ತಂಡಕ್ಕೆ ಬಹುಮಾನವನ್ನು ಘೋಷಿಸಿದ್ದಾರೆ.

ವರದಿ: ರೋಶನ್ ಜಮೀರ್

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago