Latest

ಕೋಲಾರ ಸರಣಿ ಕಳ್ಳತನ ; ಇಬ್ಬರ ಬಂಧನ

ಕೋಲಾರ ನಗರ ಪೊಲೀಸರಿಂದ ರಾಜ್ಯದ ಹಲವಾರು ಕಡೆ ಅಂಗಡಿಗಳ ರೋಲಿಂಗ್ ಷಟರ್ ಹೊಡೆದು ಹಣ ಕಳ್ಳತನ ಮಾಡಿದ್ದ ಮತ್ತು ಹೆದ್ದಾರಿಗಳಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪಿಗಳ ಬಂಧನ.

ಕೋಲಾರ ನಗರದಲ್ಲಿ ಇತ್ತೀಚಿಗೆ ರೋಲಿಂಗ್ ಷಟರ್ ಹೊಡೆದು ಹಣ ಕಳ್ಳತನ ಮಾಡುತ್ತಾ ಸಾರ್ವಜನಿಕರ ಮತ್ತು ಪೊಲೀಸರ ನಿದ್ದೆಗೆಡಿಸಿದ್ದ ಆರೋಪಿಗಳನ್ನು ಬಂಧಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ನಿಖಿಲ್ ಬಿ. ಐ.ಪಿ.ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ರವಿಶಂಕರ್, ಹೆಚ್.ಸಿ. ಜಗದೀಶ್ ಮತ್ತು ಪೊಲೀಸ್ ಉಪಾಧೀಕ್ಷಕರು ಕೋಲಾರ ಉಪವಿಭಾಗ ಎಂ. ಹೆಚ್. ನಾಗ್ಲೆ ರವರ ಮಾರ್ಗದರ್ಶನದಲ್ಲಿ ಎರಡು ವಿಶೇಷ ತಂಡಗಳನ್ನು ರಚಿಸಲಾಗಿತ್ತು.

ಕೋಲಾರ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಸದಾನಂದ, ಎಂ. ಹಾಗೂ ಪಿ.ಎಸ್.ಐ ಸೈಯದ್ ಖಾಸಿಂ, ಸಿಬ್ಬಂದಿಯವರಾದ ಮೋಹನ್, ನಾರಾಯಣಸ್ವಾಮಿ, ಮೆಹಬೂಬ್ ಪಾಷಾ, ಶ್ರೀನಾಥ, ಕಿಶೋರ, ಶಾ ಮೂರ್ತಿ, ಬಾಲಾಜಿ. ಹೆಚ್.ವಿ. ಗಂಗಾಧರ, ಜೀಪ್ ಚಾಲಕರಾದ ಮುರುಳಿ ಮತ್ತು ತಾಂತ್ರಿಕ ವಿಭಾಗದ ಸಿಬ್ಬಂದಿಯಾದ ಪಿ.ಸಿ ಮುರುಳಿ ರವರ ತಂಡವು ಹಲವಾರು ಸಿಸಿ ಕ್ಯಾಮರಗಳು ಹಾಗೂ ಆಧುನಿಕ ತಂತ್ರಜ್ಞಾನದ ಸಹಾಯದಿಂದ ಆರೋಪಿಗಳನ್ನು ರಾಯಚೂರು ಜಿಲ್ಲೆಯ ಸಿಂದನೂರು ಬಸ್ ನಿಲ್ದಾಣದ ಬಳಿ ವಶಕ್ಕೆ ಪಡೆದು ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಆಯುಧಗಳು, ಜರ್ಕಿನ್, ಮಂಕೀಕ್ಯಾಪ್ ಮತ್ತು ಕೃತ್ಯಕ್ಕೆ ಬಳಸಿದ್ದ 03 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಈ ಪ್ರಕರಣಗಳಿಗೆ ಸಂಬಂದಿಸಿದಂತೆ ಪ್ರಮುಖ ಆರೋಪಿಗಳಾದ
ರೋಹಿತ್ ಗಿರಿ ಮತ್ತು ದಾದಾಪೀರ್ ಈ ಆರೋಪಿಗಳು ಕೋಲಾರ ನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಟೌನ್, ಪೆರೇಸಂದ್ರ, ಚಿಂತಾಮಣಿ ಟೌನ್, ತುಮಕೂರು ನಗರ, ನೆಲಮಂಗಲ, ದೇವನಹಳ್ಳಿ, ರಾಮನಗರ ಹಾಗೂ ರಾಜ್ಯದ ಇನ್ನೂ ಹಲವಾರು ಕಡೆ ರಾತ್ರಿ ವೇಳೆ ಅಂಗಡಿಗಳ ರೋಲಿಂಗ್ ಷಟರ್ ಹೊಡೆದು ಹಣ ಕಳವು ಮಾಡಿರುವುದು ತನಿಖೆಯಿಂದ ತಿಳಿದು ಬಂದಿದೆ.

ಈ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘಿಸಿ ಮೆಚ್ಚುಗೆಯನ್ನು ವ್ಯಕ್ತಪಡಿಸಿ ತಂಡಕ್ಕೆ ಬಹುಮಾನವನ್ನು ಘೋಷಿಸಿದ್ದಾರೆ.

ವರದಿ: ರೋಶನ್ ಜಮೀರ್

nazeer ahamad

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

48 minutes ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

51 minutes ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

52 minutes ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

53 minutes ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

55 minutes ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

56 minutes ago