Latest

ಕೋಲಾರ ಸರಣಿ ಕಳ್ಳತನ ; ಇಬ್ಬರ ಬಂಧನ

ಕೋಲಾರ ನಗರ ಪೊಲೀಸರಿಂದ ರಾಜ್ಯದ ಹಲವಾರು ಕಡೆ ಅಂಗಡಿಗಳ ರೋಲಿಂಗ್ ಷಟರ್ ಹೊಡೆದು ಹಣ ಕಳ್ಳತನ ಮಾಡಿದ್ದ ಮತ್ತು ಹೆದ್ದಾರಿಗಳಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪಿಗಳ ಬಂಧನ.

ಕೋಲಾರ ನಗರದಲ್ಲಿ ಇತ್ತೀಚಿಗೆ ರೋಲಿಂಗ್ ಷಟರ್ ಹೊಡೆದು ಹಣ ಕಳ್ಳತನ ಮಾಡುತ್ತಾ ಸಾರ್ವಜನಿಕರ ಮತ್ತು ಪೊಲೀಸರ ನಿದ್ದೆಗೆಡಿಸಿದ್ದ ಆರೋಪಿಗಳನ್ನು ಬಂಧಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ನಿಖಿಲ್ ಬಿ. ಐ.ಪಿ.ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ರವಿಶಂಕರ್, ಹೆಚ್.ಸಿ. ಜಗದೀಶ್ ಮತ್ತು ಪೊಲೀಸ್ ಉಪಾಧೀಕ್ಷಕರು ಕೋಲಾರ ಉಪವಿಭಾಗ ಎಂ. ಹೆಚ್. ನಾಗ್ಲೆ ರವರ ಮಾರ್ಗದರ್ಶನದಲ್ಲಿ ಎರಡು ವಿಶೇಷ ತಂಡಗಳನ್ನು ರಚಿಸಲಾಗಿತ್ತು.

ಕೋಲಾರ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಸದಾನಂದ, ಎಂ. ಹಾಗೂ ಪಿ.ಎಸ್.ಐ ಸೈಯದ್ ಖಾಸಿಂ, ಸಿಬ್ಬಂದಿಯವರಾದ ಮೋಹನ್, ನಾರಾಯಣಸ್ವಾಮಿ, ಮೆಹಬೂಬ್ ಪಾಷಾ, ಶ್ರೀನಾಥ, ಕಿಶೋರ, ಶಾ ಮೂರ್ತಿ, ಬಾಲಾಜಿ. ಹೆಚ್.ವಿ. ಗಂಗಾಧರ, ಜೀಪ್ ಚಾಲಕರಾದ ಮುರುಳಿ ಮತ್ತು ತಾಂತ್ರಿಕ ವಿಭಾಗದ ಸಿಬ್ಬಂದಿಯಾದ ಪಿ.ಸಿ ಮುರುಳಿ ರವರ ತಂಡವು ಹಲವಾರು ಸಿಸಿ ಕ್ಯಾಮರಗಳು ಹಾಗೂ ಆಧುನಿಕ ತಂತ್ರಜ್ಞಾನದ ಸಹಾಯದಿಂದ ಆರೋಪಿಗಳನ್ನು ರಾಯಚೂರು ಜಿಲ್ಲೆಯ ಸಿಂದನೂರು ಬಸ್ ನಿಲ್ದಾಣದ ಬಳಿ ವಶಕ್ಕೆ ಪಡೆದು ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಆಯುಧಗಳು, ಜರ್ಕಿನ್, ಮಂಕೀಕ್ಯಾಪ್ ಮತ್ತು ಕೃತ್ಯಕ್ಕೆ ಬಳಸಿದ್ದ 03 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಈ ಪ್ರಕರಣಗಳಿಗೆ ಸಂಬಂದಿಸಿದಂತೆ ಪ್ರಮುಖ ಆರೋಪಿಗಳಾದ
ರೋಹಿತ್ ಗಿರಿ ಮತ್ತು ದಾದಾಪೀರ್ ಈ ಆರೋಪಿಗಳು ಕೋಲಾರ ನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಟೌನ್, ಪೆರೇಸಂದ್ರ, ಚಿಂತಾಮಣಿ ಟೌನ್, ತುಮಕೂರು ನಗರ, ನೆಲಮಂಗಲ, ದೇವನಹಳ್ಳಿ, ರಾಮನಗರ ಹಾಗೂ ರಾಜ್ಯದ ಇನ್ನೂ ಹಲವಾರು ಕಡೆ ರಾತ್ರಿ ವೇಳೆ ಅಂಗಡಿಗಳ ರೋಲಿಂಗ್ ಷಟರ್ ಹೊಡೆದು ಹಣ ಕಳವು ಮಾಡಿರುವುದು ತನಿಖೆಯಿಂದ ತಿಳಿದು ಬಂದಿದೆ.

ಈ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘಿಸಿ ಮೆಚ್ಚುಗೆಯನ್ನು ವ್ಯಕ್ತಪಡಿಸಿ ತಂಡಕ್ಕೆ ಬಹುಮಾನವನ್ನು ಘೋಷಿಸಿದ್ದಾರೆ.

ವರದಿ: ರೋಶನ್ ಜಮೀರ್

nazeer ahamad

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

11 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

11 hours ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

11 hours ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

11 hours ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

12 hours ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

12 hours ago