Latest

ಕೊಲ್ಕತ್ತಾದ ಗ್ಯಾಂಗ್ ರೇಪ್ ಪ್ರಕರಣ: ಬಾಗಲಕೋಟೆ ಮೂಲದ ವಿದ್ಯಾರ್ಥಿ ಬಂಧನ

ಬಾಗಲಕೋಟೆ: ಪಶ್ಚಿಮ ಬಂಗಾಳದ ರಾಜಧಾನಿ ಕೊಲ್ಕತ್ತಾದಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಬಾಗಲಕೋಟೆ ಮೂಲದ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.

ಮೂಳದಿಂದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ಗ್ರಾಮದ ನಿವಾಸಿ ಪರಮಾನಂದ ಜೈನ್ ಎನ್ನುವ ಈ ಯುವಕ, ಕೊಲ್ಕತ್ತಾದ ಐಐಎಂ ಕಾನೂನು ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿದ್ದು, ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದನು.

ಆರೋಪಗಳ ಪ್ರಕಾರ, ಯುವತಿಯೊಬ್ಬಳನ್ನು ಹಾಸ್ಟೆಲ್‌ಗೆ ಕರೆಯಿಸಿಕೊಂಡು, ಮದ್ಯಪಾನ ಸೇವಿಸಲು ಬಲವಂತ ಮಾಡಿದ ನಂತರ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತಂತೆ ದೂರಿನ ಆಧಾರದ ಮೇಲೆ, ಪೊಲೀಸರು ಪರಮಾನಂದನನ್ನು ಜುಲೈ 12ರಂದು ಬಂಧಿಸಿ ವಿಚಾರಣೆಗಾಗಿ ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.

ಆದರೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಆರೋಪಿತ ಯುವಕನ ವಿರುದ್ಧ ಯುವತಿಯ ಕುಟುಂಬದವರು ಲೈಂಗಿಕ ದೌರ್ಜನ್ಯದ ಆರೋಪವನ್ನು ತಳ್ಳಿಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆ ಇನ್ನೂ ಮುಂದುವರೆದಿದ್ದು, ಸಾಕ್ಷ್ಯಾಧಾರಗಳ ಪುರಾವೆಗಳ ಆಧಾರದಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಕಾಲೇಜು ಮತ್ತು ಪೊಲೀಸ್ ಇಲಾಖೆ ಈ ಪ್ರಕರಣದ ಕುರಿತು ಅಧಿಕೃತ ಹೇಳಿಕೆಯನ್ನು ಇನ್ನೂ ನೀಡಿಲ್ಲ. ಘಟನೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ನಡುವೆಯೂ ಆತಂಕದ ವಾತಾವರಣ ಮೂಡಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

11 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

11 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

11 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

11 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago