ಕೊಟ್ಟೂರು:- ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಬೀಗ ಹಾಕಿದ ಮನೆಗಳನ್ನು ಹೊಂಚು ಹಾಕಿ ಕಳ್ಳತನ ನಡೆಸುತ್ತಿದ್ದ ತಂಡವನ್ನು ಹೆಡೆಮುರಿ ಕಟ್ಟುವಲ್ಲಿ ಕೊಟ್ಟೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಆಂಧ್ರ ಮೂಲದ ನಾಲ್ವರು ಕಳ್ಳರನ್ನು ಬಂಧಿಸಿ 60 ಲಕ್ಷ ಮೌಲ್ಯದ ಚಿನ್ನ ಹಾಗೂ 20000 ರೂಪಾಯಿ ನಗದನ್ನು ಜಪ್ತಿ ಮಾಡಿದ್ದಾರೆ.
ಪಟ್ಟಣದ ರೇಣುಕಾ ಬಡಾವಣೆ ಮನೆಯ ಮುಂದೆ 15 ದಿನಗಳ ಹಿಂದೆ 20 ರಿಂದ 30 ವರ್ಷದ ನಾಲ್ವರು ಕಳ್ಳತನಕ್ಕೆ ಯತ್ನ ನಡೆಸುತ್ತಿರುವುದು ಸಿಸಿಟಿವಿ ಯಲ್ಲಿ ಸೆರೆಯಾಗಿತ್ತು.
ಕಳ್ಳರ ಪತ್ತೆಗೆ ತಂಡ ರಚನೆ:- ಪ್ರಕರಣ ದಾಖಲಿಸಿಕೊಂಡು ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ಮಾರ್ಗದರ್ಶನದಲ್ಲಿ ಸಿಪಿಐ ದುರುಗಪ್ಪ ಡಿ ಹಾಗೂ ಪಿಎಸ್ಸೈ ಗೀತಾಂಜಲಿ ಸಿಂಧೆ ಠಾಣೆ ಸಿಬ್ಬಂದಿಗಳಾದ ಶಂಕ್ರಪ್ಪ,ದೊಡ್ಡಬಸವನಗೌಡ, ಸಿದ್ದೇಶ್, ಬಸವರಾಜ್,ಶಶಿಧರ, ರಮೇಶ ಚಿದಾನಂದ,ಇವರುಗಳ ನೇತೃತ್ವದಲ್ಲಿ ತಂಡ ರಚಿಸಿ ಕಳ್ಳರ ಪತ್ತೆಗೆ ಬಲೆ ಬೀಸಿದ್ದರು.ಕೂಡಲೇ ತನಿಖೆಯನ್ನು ಕೈಗೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಕೊಟ್ಟೂರು ಪೊಲೀಸರು ಯಶಸ್ವಿಯಾಗಿದ್ದಾರೆ.ಕೊಟ್ಟೂರು ಪೊಲೀಸರ ಕಾರ್ಯಾಚರಣೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ ಎಸ್ ಪ್ರಶಂಸಿದ್ದಾರೆ.
ವರದಿ:- ಮಣಿಕಂಠ. ಬಿ
ಲಖನೌ: ಉತ್ತರ ಪ್ರದೇಶದಲ್ಲಿ ಸುಮಾರು ₹4,200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಲಖನೌ–ಕಾನ್ಪುರ ಗ್ರೀನ್ಫೀಲ್ಡ್ ಎಲಿವೇಟೆಡ್ ಎಕ್ಸ್ಪ್ರೆಸ್ವೇ ಉದ್ಘಾಟನೆಯಾದ ಕೇವಲ 12…
ಗೌರಿಬಿದನೂರು: ದೇಶದ ಗಡಿಯಲ್ಲಿ 21 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ, ಬಳಿಕ ಸಮಾಜದ ಸುರಕ್ಷತೆಗಾಗಿ ಪೊಲೀಸ್ ಇಲಾಖೆಗೆ…
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಮಿನಿ ವಿಧಾನಸೌಧದಲ್ಲಿರುವ ನಾಡಕಚೇರಿಯಲ್ಲಿ ಕಳೆದ ಎರಡು ವಾರಗಳಿಂದ ಸರ್ವರ್ ಸಮಸ್ಯೆ ಮುಂದುವರಿದಿದ್ದು, ಸಾರ್ವಜನಿಕರು ತೀವ್ರ…
ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ಕನ್ಯಾಕೊಳೂರು ಗ್ರಾಮದಲ್ಲಿ 2014ರಲ್ಲಿ ನಡೆದಿದ್ದ ದಲಿತ ಮುಖಂಡ ದೇವೇಂದ್ರಪ್ಪ ಭೀಮಪ್ಪ ದಳಪತಿ ಹತ್ಯೆ ಪ್ರಕರಣಕ್ಕೆ…
ಗದಗ: ಹೊರಗುತ್ತಿಗೆ ಆಧಾರದ ಉದ್ಯೋಗ ನೀಡುವ ನೆಪದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.…
ಹಾಸನ: ಹಾಡುಹಗಲೇ ನಡೆದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳ್ಳತನ ಪ್ರಕರಣವನ್ನು ಹಾಸನ ಗ್ರಾಮಾಂತರ ಪೊಲೀಸರು ಕೇವಲ…