ಮುಂಡಗೋಡ :- ತಾಲೂಕಿನಲ್ಲಿ ಕೆ.ಪಿ.ಎಮ್.ಇ ಖಾಯಿದೆ ಅಡಿಯಲ್ಲಿ ಕೆ.ಪಿ.ಎಮ್.ಇ ಮುಂಡಗೋಡ ಪ್ರಾಧಿಕಾರದ ತಂಡವು ದಾಳಿ ನಡೆಸಿ ಅನಧೀಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದ ಕ್ಲಿನಿಕ್ ಗಳನ್ನು ಬಂದು ಮಾಡಿಸಿ ನೋಟಿಸ್ ನೀಡಿದ್ದಾರೆ.. ಮುಂಡಗೋಡ ಪಟ್ಟಣದ ಪ್ರದೇಶದಲ್ಲಿ 3 ಕ್ಲಿನಿಕ್ ಮತ್ತು ಗ್ರಾಮೀಣ ಪ್ರದೇಶದಲ್ಲಿ 1 ಕ್ಲಿನಿಕ್ ಮೇಲೆ ದಾಳಿ ಮಾಡಿ ಕ್ಲಿನಿಕ್ ಗೆ ಬೀಗ ಜಡಿದಿದ್ದಾರೆ. ಗ್ರಾಮೀಣ ಭಾಗದಲ್ಲಿ ಸಾಲಗಾಂವ ಗ್ರಾಮದಲ್ಲಿ ವಿನೋದ್ ಕಾಮಗಾರಿ ಎಂಬ ನಕಲಿ ವೈದ್ಯ ಯಾವುದೇ ವೈದ್ಯಕೀಯ ಪ್ರಮಾಣ ಪತ್ರ ಹೊಂದದೇ ಮನೆಯೊಂದರಲ್ಲಿ ಕ್ಲಿನಿಕ್ ನಡೆಸುತ್ತಿದ್ದನು ಈ ಕ್ಲಿನಿಕ್ ಗೆ ಭೇಟಿ ನೀಡಿ ನೋಟಿಸ್ ಜಾರಿ ಮಾಡಿ ಬಂದ್ ಮಾಡಲಾಗಿದೆ.
ಡಾ| ಕಿರಣ ಮಕ್ಕಳ ಆಸ್ಪತ್ರೆ, ಹುಬ್ಬಳ್ಳಿ – ಸಿರ್ಸಿ ರೋಡ ಮುಂಡಗೋಡ ಕ್ಲಿನಿಕ್, ಶ್ರೀ ಪಾಂಡುರಂಗ ಕ್ಲಿನಿಕ್ ಹುಬ್ಬಳ್ಳಿ – ಸಿರ್ಸಿ ರೋಡ ಮುಂಡಗೋಡ ಕ್ಲಿನಿಕ್ , ಡಾ॥ ಭಾಸ್ಕರ್ ರಾವ್ (ರೋಣ ಮೆಡಿಕಲ್ಸ್,) ಟಿ.ಡಿ.ಬಿ ರೋಡ್ ಮುಂಡಗೋಡ ಕ್ಲಿನಿಕ್ ಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ ಕ್ಲಿನಿಕ್ ಅನ್ನು ಬಂದ ಮಾಡಿಸಲಾಯಿತು. ಹಾಗೂ PCPNDT ACT ಅಡಿಯಲ್ಲಿ ಮುಂಡಗೋಡ ತಾಲೂಕಿನ ಸ್ಕ್ಯಾನಿಂಗ್ ಕೇಂದ್ರಗಳಾದ ತಾಲೂಕಾ ಆಸ್ಪತ್ರೆ, ಮುಂಡಗೋಡ, ಖುಷಿ ಆಸ್ಪತ್ರೆ ಮುಂಡಗೋಡ, ಹೆಗಡೆ ಆಸ್ಪತ್ರೆ ಮುಂಡಗೋಡ ಹಾಗೂ ಜ್ಯೋತಿ ಆಸ್ಪತ್ರೆ, ಮುಂಡಗೋಡ ಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಸದರಿ ಕಾರ್ಯಾಚರಣೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಯಾದ ಡಾ॥ ಅಶ್ವಿನಿ ಬೋರಕರ್ ಹಾಗೂ ತಾಲೂಕಾ ಆರೋಗ್ಯಾಧಿಕಾರಿಗಳಾದ ಡಾ| ನರೇಂದ್ರ ಪವಾರ, ಡಾ॥ ಸಂಜೀವ ಗಲಗಲಿ ಆಯುಷ್ ವೈದ್ಯಾಧಿಕಾರಿಗಳು, ಹಾಗೂ ಡಾ॥ ಭರತ ಡಿ.ಟಿ, ಡಾ॥ ಸ್ವರೂಪರಾಣಿ ಪಾಟೀಲ್ ಆಡಳಿತ ವೈದ್ಯಾಧಿಕಾರಿಗಳು, ತಾಲೂಕಾ ಆಸ್ಪತ್ರೆ, ಮುಂಡಗೊಡ ಶ್ರೀ ಜಿ.ವಾಯ್ ಹೊಂಗಲ್ ಎ.ಎಸ್.ಆಯ್. ಪೋಲಿಸ್ ಠಾಣೆ ಮುಂಡಗೋಡ ಶ್ರೀ ಸಿ.ಬಿ ರಾಠೋಡ್ ಹೆಡ್ ಕಾನ್ಸೆಬಲ್ ಪೋಲಿಸ್ ಠಾಣೆ ಮುಂಡಗೋಡ ಮುಂತಾದವರು ದಾಳಿಯಲ್ಲಿ ಭಾಗವಹಿಸಿದ್ದರು.
ಹಾಗೂ ಈ ಮೂಲಕ ಮುಂಡಗೋಡ ತಾಲೂಕಿನಲ್ಲಿ ಕೆ.ಪಿ.ಎಮ್.ಇ ಖಾಯಿದೆ ಅಡಿಯಲ್ಲಿ ನೊಂದಣಿ ಮಾಡಿಸದೇ ಕ್ಲಿನಿಕ್ ನಡೆಸುತ್ತಿರುವ ನಕಲಿ ವೈದ್ಯರಿಗೆ ತಕ್ಷಣ ಕ್ಲಿನಿಕ್ ಅನ್ನು ಬಂದು ಮಾಡಲು ಹಾಗೂ ಕೆ.ಪಿ.ಎಮ್.ಇ ಖಾಯಿದೆ ಅಡಿಯಲ್ಲಿ ಪರವಾನಿಗೆ ಪಡೆದು ಕ್ಲಿನಿಕ್ ನಡೆಸಲು ಈ ಮೂಲಕ ತಾಲೂಕಾ ಆರೋಗ್ಯಾಧಿಕಾರಿಗಳು ಎಚ್ಚರಿಕೆ ನೀಡಿರುತ್ತಾರೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…