Latest

ಅನಧಿಕೃತ ಕ್ಲಿನಿಕ್ ಗಳಿಗೆ ಬೀಗ ಜಡಿದ ಕೆ.ಪಿ.ಎಮ್.ಇ ಮುಂಡಗೋಡ ಪ್ರಾಧಿಕಾರ

ಮುಂಡಗೋಡ :- ತಾಲೂಕಿನಲ್ಲಿ ಕೆ.ಪಿ.ಎಮ್.ಇ ಖಾಯಿದೆ ಅಡಿಯಲ್ಲಿ ಕೆ.ಪಿ.ಎಮ್.ಇ ಮುಂಡಗೋಡ ಪ್ರಾಧಿಕಾರದ ತಂಡವು ದಾಳಿ ನಡೆಸಿ ಅನಧೀಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದ ಕ್ಲಿನಿಕ್ ಗಳನ್ನು ಬಂದು ಮಾಡಿಸಿ ನೋಟಿಸ್ ನೀಡಿದ್ದಾರೆ.. ಮುಂಡಗೋಡ ಪಟ್ಟಣದ ಪ್ರದೇಶದಲ್ಲಿ 3 ಕ್ಲಿನಿಕ್ ಮತ್ತು ಗ್ರಾಮೀಣ ಪ್ರದೇಶದಲ್ಲಿ 1 ಕ್ಲಿನಿಕ್ ಮೇಲೆ ದಾಳಿ ಮಾಡಿ ಕ್ಲಿನಿಕ್ ಗೆ ಬೀಗ ಜಡಿದಿದ್ದಾರೆ. ಗ್ರಾಮೀಣ ಭಾಗದಲ್ಲಿ ಸಾಲಗಾಂವ ಗ್ರಾಮದಲ್ಲಿ ವಿನೋದ್ ಕಾಮಗಾರಿ ಎಂಬ ನಕಲಿ ವೈದ್ಯ ಯಾವುದೇ ವೈದ್ಯಕೀಯ ಪ್ರಮಾಣ ಪತ್ರ ಹೊಂದದೇ ಮನೆಯೊಂದರಲ್ಲಿ ಕ್ಲಿನಿಕ್ ನಡೆಸುತ್ತಿದ್ದನು ಈ ಕ್ಲಿನಿಕ್ ಗೆ ಭೇಟಿ ನೀಡಿ ನೋಟಿಸ್ ಜಾರಿ ಮಾಡಿ ಬಂದ್ ಮಾಡಲಾಗಿದೆ.

ಡಾ| ಕಿರಣ ಮಕ್ಕಳ ಆಸ್ಪತ್ರೆ, ಹುಬ್ಬಳ್ಳಿ – ಸಿರ್ಸಿ ರೋಡ ಮುಂಡಗೋಡ ಕ್ಲಿನಿಕ್, ಶ್ರೀ ಪಾಂಡುರಂಗ ಕ್ಲಿನಿಕ್ ಹುಬ್ಬಳ್ಳಿ – ಸಿರ್ಸಿ ರೋಡ ಮುಂಡಗೋಡ ಕ್ಲಿನಿಕ್ , ಡಾ॥ ಭಾಸ್ಕರ್ ರಾವ್ (ರೋಣ ಮೆಡಿಕಲ್ಸ್,) ಟಿ.ಡಿ.ಬಿ ರೋಡ್ ಮುಂಡಗೋಡ ಕ್ಲಿನಿಕ್ ಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ ಕ್ಲಿನಿಕ್ ಅನ್ನು ಬಂದ ಮಾಡಿಸಲಾಯಿತು. ಹಾಗೂ PCPNDT ACT ಅಡಿಯಲ್ಲಿ ಮುಂಡಗೋಡ ತಾಲೂಕಿನ ಸ್ಕ್ಯಾನಿಂಗ್ ಕೇಂದ್ರಗಳಾದ ತಾಲೂಕಾ ಆಸ್ಪತ್ರೆ, ಮುಂಡಗೋಡ, ಖುಷಿ ಆಸ್ಪತ್ರೆ ಮುಂಡಗೋಡ, ಹೆಗಡೆ ಆಸ್ಪತ್ರೆ ಮುಂಡಗೋಡ ಹಾಗೂ ಜ್ಯೋತಿ ಆಸ್ಪತ್ರೆ, ಮುಂಡಗೋಡ ಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಸದರಿ ಕಾರ್ಯಾಚರಣೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಯಾದ ಡಾ॥ ಅಶ್ವಿನಿ ಬೋರಕರ್ ಹಾಗೂ ತಾಲೂಕಾ ಆರೋಗ್ಯಾಧಿಕಾರಿಗಳಾದ ಡಾ| ನರೇಂದ್ರ ಪವಾರ, ಡಾ॥ ಸಂಜೀವ ಗಲಗಲಿ ಆಯುಷ್ ವೈದ್ಯಾಧಿಕಾರಿಗಳು, ಹಾಗೂ ಡಾ॥ ಭರತ ಡಿ.ಟಿ, ಡಾ॥ ಸ್ವರೂಪರಾಣಿ ಪಾಟೀಲ್ ಆಡಳಿತ ವೈದ್ಯಾಧಿಕಾರಿಗಳು, ತಾಲೂಕಾ ಆಸ್ಪತ್ರೆ, ಮುಂಡಗೊಡ ಶ್ರೀ ಜಿ.ವಾಯ್ ಹೊಂಗಲ್ ಎ.ಎಸ್.ಆಯ್. ಪೋಲಿಸ್ ಠಾಣೆ ಮುಂಡಗೋಡ ಶ್ರೀ ಸಿ.ಬಿ ರಾಠೋಡ್ ಹೆಡ್ ಕಾನ್ಸೆಬಲ್ ಪೋಲಿಸ್ ಠಾಣೆ ಮುಂಡಗೋಡ ಮುಂತಾದವರು ದಾಳಿಯಲ್ಲಿ ಭಾಗವಹಿಸಿದ್ದರು.

ಹಾಗೂ ಈ ಮೂಲಕ ಮುಂಡಗೋಡ ತಾಲೂಕಿನಲ್ಲಿ ಕೆ.ಪಿ.ಎಮ್.ಇ ಖಾಯಿದೆ ಅಡಿಯಲ್ಲಿ ನೊಂದಣಿ ಮಾಡಿಸದೇ ಕ್ಲಿನಿಕ್ ನಡೆಸುತ್ತಿರುವ ನಕಲಿ ವೈದ್ಯರಿಗೆ ತಕ್ಷಣ ಕ್ಲಿನಿಕ್ ಅನ್ನು ಬಂದು ಮಾಡಲು ಹಾಗೂ ಕೆ.ಪಿ.ಎಮ್.ಇ ಖಾಯಿದೆ ಅಡಿಯಲ್ಲಿ ಪರವಾನಿಗೆ ಪಡೆದು ಕ್ಲಿನಿಕ್ ನಡೆಸಲು ಈ ಮೂಲಕ ತಾಲೂಕಾ ಆರೋಗ್ಯಾಧಿಕಾರಿಗಳು ಎಚ್ಚರಿಕೆ ನೀಡಿರುತ್ತಾರೆ.

ಭ್ರಷ್ಟರ ಬೇಟೆ

Recent Posts

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

3 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

3 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

3 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

4 hours ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

4 hours ago