ಮುಂಡಗೋಡ :- ತಾಲೂಕಿನಲ್ಲಿ ಕೆ.ಪಿ.ಎಮ್.ಇ ಖಾಯಿದೆ ಅಡಿಯಲ್ಲಿ ಕೆ.ಪಿ.ಎಮ್.ಇ ಮುಂಡಗೋಡ ಪ್ರಾಧಿಕಾರದ ತಂಡವು ದಾಳಿ ನಡೆಸಿ ಅನಧೀಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದ ಕ್ಲಿನಿಕ್ ಗಳನ್ನು ಬಂದು ಮಾಡಿಸಿ ನೋಟಿಸ್ ನೀಡಿದ್ದಾರೆ.. ಮುಂಡಗೋಡ ಪಟ್ಟಣದ ಪ್ರದೇಶದಲ್ಲಿ 3 ಕ್ಲಿನಿಕ್ ಮತ್ತು ಗ್ರಾಮೀಣ ಪ್ರದೇಶದಲ್ಲಿ 1 ಕ್ಲಿನಿಕ್ ಮೇಲೆ ದಾಳಿ ಮಾಡಿ ಕ್ಲಿನಿಕ್ ಗೆ ಬೀಗ ಜಡಿದಿದ್ದಾರೆ. ಗ್ರಾಮೀಣ ಭಾಗದಲ್ಲಿ ಸಾಲಗಾಂವ ಗ್ರಾಮದಲ್ಲಿ ವಿನೋದ್ ಕಾಮಗಾರಿ ಎಂಬ ನಕಲಿ ವೈದ್ಯ ಯಾವುದೇ ವೈದ್ಯಕೀಯ ಪ್ರಮಾಣ ಪತ್ರ ಹೊಂದದೇ ಮನೆಯೊಂದರಲ್ಲಿ ಕ್ಲಿನಿಕ್ ನಡೆಸುತ್ತಿದ್ದನು ಈ ಕ್ಲಿನಿಕ್ ಗೆ ಭೇಟಿ ನೀಡಿ ನೋಟಿಸ್ ಜಾರಿ ಮಾಡಿ ಬಂದ್ ಮಾಡಲಾಗಿದೆ.
ಡಾ| ಕಿರಣ ಮಕ್ಕಳ ಆಸ್ಪತ್ರೆ, ಹುಬ್ಬಳ್ಳಿ – ಸಿರ್ಸಿ ರೋಡ ಮುಂಡಗೋಡ ಕ್ಲಿನಿಕ್, ಶ್ರೀ ಪಾಂಡುರಂಗ ಕ್ಲಿನಿಕ್ ಹುಬ್ಬಳ್ಳಿ – ಸಿರ್ಸಿ ರೋಡ ಮುಂಡಗೋಡ ಕ್ಲಿನಿಕ್ , ಡಾ॥ ಭಾಸ್ಕರ್ ರಾವ್ (ರೋಣ ಮೆಡಿಕಲ್ಸ್,) ಟಿ.ಡಿ.ಬಿ ರೋಡ್ ಮುಂಡಗೋಡ ಕ್ಲಿನಿಕ್ ಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ ಕ್ಲಿನಿಕ್ ಅನ್ನು ಬಂದ ಮಾಡಿಸಲಾಯಿತು. ಹಾಗೂ PCPNDT ACT ಅಡಿಯಲ್ಲಿ ಮುಂಡಗೋಡ ತಾಲೂಕಿನ ಸ್ಕ್ಯಾನಿಂಗ್ ಕೇಂದ್ರಗಳಾದ ತಾಲೂಕಾ ಆಸ್ಪತ್ರೆ, ಮುಂಡಗೋಡ, ಖುಷಿ ಆಸ್ಪತ್ರೆ ಮುಂಡಗೋಡ, ಹೆಗಡೆ ಆಸ್ಪತ್ರೆ ಮುಂಡಗೋಡ ಹಾಗೂ ಜ್ಯೋತಿ ಆಸ್ಪತ್ರೆ, ಮುಂಡಗೋಡ ಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಸದರಿ ಕಾರ್ಯಾಚರಣೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಯಾದ ಡಾ॥ ಅಶ್ವಿನಿ ಬೋರಕರ್ ಹಾಗೂ ತಾಲೂಕಾ ಆರೋಗ್ಯಾಧಿಕಾರಿಗಳಾದ ಡಾ| ನರೇಂದ್ರ ಪವಾರ, ಡಾ॥ ಸಂಜೀವ ಗಲಗಲಿ ಆಯುಷ್ ವೈದ್ಯಾಧಿಕಾರಿಗಳು, ಹಾಗೂ ಡಾ॥ ಭರತ ಡಿ.ಟಿ, ಡಾ॥ ಸ್ವರೂಪರಾಣಿ ಪಾಟೀಲ್ ಆಡಳಿತ ವೈದ್ಯಾಧಿಕಾರಿಗಳು, ತಾಲೂಕಾ ಆಸ್ಪತ್ರೆ, ಮುಂಡಗೊಡ ಶ್ರೀ ಜಿ.ವಾಯ್ ಹೊಂಗಲ್ ಎ.ಎಸ್.ಆಯ್. ಪೋಲಿಸ್ ಠಾಣೆ ಮುಂಡಗೋಡ ಶ್ರೀ ಸಿ.ಬಿ ರಾಠೋಡ್ ಹೆಡ್ ಕಾನ್ಸೆಬಲ್ ಪೋಲಿಸ್ ಠಾಣೆ ಮುಂಡಗೋಡ ಮುಂತಾದವರು ದಾಳಿಯಲ್ಲಿ ಭಾಗವಹಿಸಿದ್ದರು.
ಹಾಗೂ ಈ ಮೂಲಕ ಮುಂಡಗೋಡ ತಾಲೂಕಿನಲ್ಲಿ ಕೆ.ಪಿ.ಎಮ್.ಇ ಖಾಯಿದೆ ಅಡಿಯಲ್ಲಿ ನೊಂದಣಿ ಮಾಡಿಸದೇ ಕ್ಲಿನಿಕ್ ನಡೆಸುತ್ತಿರುವ ನಕಲಿ ವೈದ್ಯರಿಗೆ ತಕ್ಷಣ ಕ್ಲಿನಿಕ್ ಅನ್ನು ಬಂದು ಮಾಡಲು ಹಾಗೂ ಕೆ.ಪಿ.ಎಮ್.ಇ ಖಾಯಿದೆ ಅಡಿಯಲ್ಲಿ ಪರವಾನಿಗೆ ಪಡೆದು ಕ್ಲಿನಿಕ್ ನಡೆಸಲು ಈ ಮೂಲಕ ತಾಲೂಕಾ ಆರೋಗ್ಯಾಧಿಕಾರಿಗಳು ಎಚ್ಚರಿಕೆ ನೀಡಿರುತ್ತಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…