Latest

ಉತ್ತರಕನ್ನಡ ಜಿಲ್ಲೆಯಲ್ಲಿನ ಅರಣ್ಯದಲ್ಲಿ ಅಧಿಕಾರಿಗಳ ಕಣ್ಣಿಗೆ ಮಣ್ಣೆರಚಿ ಪರಾರಿಯಾದ ಸಾಗವಾನಿ ಮರಗಳ್ಳ ಕೃಷ್ಣ

ಕಾಡು ಬೆಳೆಸಿ ನಾಡು ಉಳಿಸಿ ಎಂಬ ಮಾತಿನಂತೆ ನಮ್ಮ ಕಾಡು ಹಾಗೂ ಗಿಡ ಮರಗಳನ್ನು ಉಳಿಸಬೇಕು. ನಾಡಿಗೆ ಮತ್ತು ನಮಗೆ ಗಿಡ ಮರಗಳು ಅತ್ಯವಶ್ಯಕವಾಗಿರುತ್ತದೆ. ಅದೇ ರೀತಿ ನಮ್ಮ ನಿಮ್ಮೆಲ್ಲರ ಬಳಿ ಇರುವ ಅರಣ್ಯ ಸಂಪತ್ತನ್ನು ಕಾಪಾಡಿ ಕೊಳ್ಳಬೇಕಾಗಿದ್ದು ನಮ್ಮ ನಿಮ್ಮೆಲ್ಲರ ಕರ್ತವ್ಯ .ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಮಾರು ಅರಣ್ಯ ಸಂಪತ್ತು ಇದೆ . ಇದನ್ನು ರಕ್ಷಿಸಬೇಕಾದ ಸ್ಥಳೀಯರು ಅದನ್ನು ನಾಶ ಪಡಿಸಬಾರದು . ಹಾಗೂ ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಕೊಡಂಬಿ ಹಳ್ಳದಮನೆ ಎಂಬ ಅರಣ್ಯ ಸಂಪತ್ತಿನಲ್ಲಿ ಮರಗಳನ್ನೂ
ಕಡಿದು ಅಕ್ರಮ ಸಾಗಾಣಿಕೆ ಮಾಡುತ್ತಿದ್ದಾರೆ ಎಂಬ ವದಂತಿ ಇತ್ತು. ಈ ವದಂತಿ ಗಮನಿಸಿದ ಉತ್ತರಕನ್ನಡ ಜಿಲ್ಲಾ ಅರಣ್ಯ ವಿಭಾಗದ ಅಧಿಕಾರಿಗಳು. ಇವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಬೇಕು ಹಾಗೂ ನಮ್ಮ ಅರಣ್ಯ ಸಂಪತ್ತನ್ನು ನಾವೇಲ್ಲರು ರಕ್ಷಿಸಿಕೊಳ್ಳಬೇಕೆಂದು ಹರಸಾಹಸ ಪಡುತ್ತಿದ್ದರು ಇದೇ ಮಾತಿನಂತೆ ದಿ: 30/9/2022 ರಂದು ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ತಂಡದವರ ಜೊತೆ ದಾಳಿ ಮಾಡಿದ್ದರು. ಈ ಸಂದರ್ಭದಲ್ಲಿ ಅರಣ್ಯದಲ್ಲಿನ ಮರಗಳನ್ನು ಅಕ್ರಮವಾಗಿ ಕದ್ದು ಪರ್ನಿಚರಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಸಾಗವಾನಿ ಮರಗಳ ಕಳ್ಳ ಕೃಷ್ಣ ಹನುಮಂತಪ್ಪ ದೇವರಗುಡ್ಡ ಎಂಬ ವ್ಯಕ್ತಿ ಅರಣ್ಯದಲ್ಲಿ ಹಾಜರಿದ್ದು ಅರಣ್ಯ ಅಧಿಕಾರಿಗಳು ದಾಳಿ ಮಾಡಿದ್ದನ್ನು ನೋಡಿ ಅಲ್ಲಿಂದ ತಪ್ಪಿಸಿಕೊಂಡಿದ್ದಾನೆ ಈತನು ಕೆಲವು ದಿನಗಳಿಂದ ಅಕ್ರಮವಾಗಿ ಅರಣ್ಯದಲ್ಲಿನ ಸಾಗವಾನಿ ಮರಗಳನ್ನು ಕದ್ದು ಫರ್ನೀಚರ್ ತಯಾರಿಸಿ ಮಾರಾಟ ಮಾಡುತ್ತಿದ್ದ ಇವೆಲ್ಲವನ್ನೂ ಗಮನಿಸಿದ ಜಿಲ್ಲಾ ಅರಣ್ಯ ಅಧಿಕಾರಿ ಎಸ್ ಜಿ ಹೆಗಡೆ ರವರ ಮಾರ್ಗದರ್ಶನದಲ್ಲಿ ಅಧಿಕಾರಿಗಳು ಮತ್ತು ಅರಣ್ಯ ರಕ್ಷಕರು (ಸಿಬ್ಬಂದಿಗಳು) ಮರಗಳ್ಳನಿಗಾಗಿ ಶೋಧ ನಡೆಸುತ್ತಿದ್ದಾರೆ.

ವರದಿ: ಶ್ರೀಪಾದ್ ಹೆಗಡೆ

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

20 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

21 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

21 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

21 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

21 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

2 days ago