Latest

ಉತ್ತರಕನ್ನಡ ಜಿಲ್ಲೆಯಲ್ಲಿನ ಅರಣ್ಯದಲ್ಲಿ ಅಧಿಕಾರಿಗಳ ಕಣ್ಣಿಗೆ ಮಣ್ಣೆರಚಿ ಪರಾರಿಯಾದ ಸಾಗವಾನಿ ಮರಗಳ್ಳ ಕೃಷ್ಣ

ಕಾಡು ಬೆಳೆಸಿ ನಾಡು ಉಳಿಸಿ ಎಂಬ ಮಾತಿನಂತೆ ನಮ್ಮ ಕಾಡು ಹಾಗೂ ಗಿಡ ಮರಗಳನ್ನು ಉಳಿಸಬೇಕು. ನಾಡಿಗೆ ಮತ್ತು ನಮಗೆ ಗಿಡ ಮರಗಳು ಅತ್ಯವಶ್ಯಕವಾಗಿರುತ್ತದೆ. ಅದೇ ರೀತಿ ನಮ್ಮ ನಿಮ್ಮೆಲ್ಲರ ಬಳಿ ಇರುವ ಅರಣ್ಯ ಸಂಪತ್ತನ್ನು ಕಾಪಾಡಿ ಕೊಳ್ಳಬೇಕಾಗಿದ್ದು ನಮ್ಮ ನಿಮ್ಮೆಲ್ಲರ ಕರ್ತವ್ಯ .ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಮಾರು ಅರಣ್ಯ ಸಂಪತ್ತು ಇದೆ . ಇದನ್ನು ರಕ್ಷಿಸಬೇಕಾದ ಸ್ಥಳೀಯರು ಅದನ್ನು ನಾಶ ಪಡಿಸಬಾರದು . ಹಾಗೂ ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಕೊಡಂಬಿ ಹಳ್ಳದಮನೆ ಎಂಬ ಅರಣ್ಯ ಸಂಪತ್ತಿನಲ್ಲಿ ಮರಗಳನ್ನೂ
ಕಡಿದು ಅಕ್ರಮ ಸಾಗಾಣಿಕೆ ಮಾಡುತ್ತಿದ್ದಾರೆ ಎಂಬ ವದಂತಿ ಇತ್ತು. ಈ ವದಂತಿ ಗಮನಿಸಿದ ಉತ್ತರಕನ್ನಡ ಜಿಲ್ಲಾ ಅರಣ್ಯ ವಿಭಾಗದ ಅಧಿಕಾರಿಗಳು. ಇವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಬೇಕು ಹಾಗೂ ನಮ್ಮ ಅರಣ್ಯ ಸಂಪತ್ತನ್ನು ನಾವೇಲ್ಲರು ರಕ್ಷಿಸಿಕೊಳ್ಳಬೇಕೆಂದು ಹರಸಾಹಸ ಪಡುತ್ತಿದ್ದರು ಇದೇ ಮಾತಿನಂತೆ ದಿ: 30/9/2022 ರಂದು ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ತಂಡದವರ ಜೊತೆ ದಾಳಿ ಮಾಡಿದ್ದರು. ಈ ಸಂದರ್ಭದಲ್ಲಿ ಅರಣ್ಯದಲ್ಲಿನ ಮರಗಳನ್ನು ಅಕ್ರಮವಾಗಿ ಕದ್ದು ಪರ್ನಿಚರಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಸಾಗವಾನಿ ಮರಗಳ ಕಳ್ಳ ಕೃಷ್ಣ ಹನುಮಂತಪ್ಪ ದೇವರಗುಡ್ಡ ಎಂಬ ವ್ಯಕ್ತಿ ಅರಣ್ಯದಲ್ಲಿ ಹಾಜರಿದ್ದು ಅರಣ್ಯ ಅಧಿಕಾರಿಗಳು ದಾಳಿ ಮಾಡಿದ್ದನ್ನು ನೋಡಿ ಅಲ್ಲಿಂದ ತಪ್ಪಿಸಿಕೊಂಡಿದ್ದಾನೆ ಈತನು ಕೆಲವು ದಿನಗಳಿಂದ ಅಕ್ರಮವಾಗಿ ಅರಣ್ಯದಲ್ಲಿನ ಸಾಗವಾನಿ ಮರಗಳನ್ನು ಕದ್ದು ಫರ್ನೀಚರ್ ತಯಾರಿಸಿ ಮಾರಾಟ ಮಾಡುತ್ತಿದ್ದ ಇವೆಲ್ಲವನ್ನೂ ಗಮನಿಸಿದ ಜಿಲ್ಲಾ ಅರಣ್ಯ ಅಧಿಕಾರಿ ಎಸ್ ಜಿ ಹೆಗಡೆ ರವರ ಮಾರ್ಗದರ್ಶನದಲ್ಲಿ ಅಧಿಕಾರಿಗಳು ಮತ್ತು ಅರಣ್ಯ ರಕ್ಷಕರು (ಸಿಬ್ಬಂದಿಗಳು) ಮರಗಳ್ಳನಿಗಾಗಿ ಶೋಧ ನಡೆಸುತ್ತಿದ್ದಾರೆ.

ವರದಿ: ಶ್ರೀಪಾದ್ ಹೆಗಡೆ

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago