Latest

ಉತ್ತರಕನ್ನಡ ಜಿಲ್ಲೆಯಲ್ಲಿನ ಅರಣ್ಯದಲ್ಲಿ ಅಧಿಕಾರಿಗಳ ಕಣ್ಣಿಗೆ ಮಣ್ಣೆರಚಿ ಪರಾರಿಯಾದ ಸಾಗವಾನಿ ಮರಗಳ್ಳ ಕೃಷ್ಣ

ಕಾಡು ಬೆಳೆಸಿ ನಾಡು ಉಳಿಸಿ ಎಂಬ ಮಾತಿನಂತೆ ನಮ್ಮ ಕಾಡು ಹಾಗೂ ಗಿಡ ಮರಗಳನ್ನು ಉಳಿಸಬೇಕು. ನಾಡಿಗೆ ಮತ್ತು ನಮಗೆ ಗಿಡ ಮರಗಳು ಅತ್ಯವಶ್ಯಕವಾಗಿರುತ್ತದೆ. ಅದೇ ರೀತಿ ನಮ್ಮ ನಿಮ್ಮೆಲ್ಲರ ಬಳಿ ಇರುವ ಅರಣ್ಯ ಸಂಪತ್ತನ್ನು ಕಾಪಾಡಿ ಕೊಳ್ಳಬೇಕಾಗಿದ್ದು ನಮ್ಮ ನಿಮ್ಮೆಲ್ಲರ ಕರ್ತವ್ಯ .ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಮಾರು ಅರಣ್ಯ ಸಂಪತ್ತು ಇದೆ . ಇದನ್ನು ರಕ್ಷಿಸಬೇಕಾದ ಸ್ಥಳೀಯರು ಅದನ್ನು ನಾಶ ಪಡಿಸಬಾರದು . ಹಾಗೂ ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಕೊಡಂಬಿ ಹಳ್ಳದಮನೆ ಎಂಬ ಅರಣ್ಯ ಸಂಪತ್ತಿನಲ್ಲಿ ಮರಗಳನ್ನೂ
ಕಡಿದು ಅಕ್ರಮ ಸಾಗಾಣಿಕೆ ಮಾಡುತ್ತಿದ್ದಾರೆ ಎಂಬ ವದಂತಿ ಇತ್ತು. ಈ ವದಂತಿ ಗಮನಿಸಿದ ಉತ್ತರಕನ್ನಡ ಜಿಲ್ಲಾ ಅರಣ್ಯ ವಿಭಾಗದ ಅಧಿಕಾರಿಗಳು. ಇವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಬೇಕು ಹಾಗೂ ನಮ್ಮ ಅರಣ್ಯ ಸಂಪತ್ತನ್ನು ನಾವೇಲ್ಲರು ರಕ್ಷಿಸಿಕೊಳ್ಳಬೇಕೆಂದು ಹರಸಾಹಸ ಪಡುತ್ತಿದ್ದರು ಇದೇ ಮಾತಿನಂತೆ ದಿ: 30/9/2022 ರಂದು ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ತಂಡದವರ ಜೊತೆ ದಾಳಿ ಮಾಡಿದ್ದರು. ಈ ಸಂದರ್ಭದಲ್ಲಿ ಅರಣ್ಯದಲ್ಲಿನ ಮರಗಳನ್ನು ಅಕ್ರಮವಾಗಿ ಕದ್ದು ಪರ್ನಿಚರಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಸಾಗವಾನಿ ಮರಗಳ ಕಳ್ಳ ಕೃಷ್ಣ ಹನುಮಂತಪ್ಪ ದೇವರಗುಡ್ಡ ಎಂಬ ವ್ಯಕ್ತಿ ಅರಣ್ಯದಲ್ಲಿ ಹಾಜರಿದ್ದು ಅರಣ್ಯ ಅಧಿಕಾರಿಗಳು ದಾಳಿ ಮಾಡಿದ್ದನ್ನು ನೋಡಿ ಅಲ್ಲಿಂದ ತಪ್ಪಿಸಿಕೊಂಡಿದ್ದಾನೆ ಈತನು ಕೆಲವು ದಿನಗಳಿಂದ ಅಕ್ರಮವಾಗಿ ಅರಣ್ಯದಲ್ಲಿನ ಸಾಗವಾನಿ ಮರಗಳನ್ನು ಕದ್ದು ಫರ್ನೀಚರ್ ತಯಾರಿಸಿ ಮಾರಾಟ ಮಾಡುತ್ತಿದ್ದ ಇವೆಲ್ಲವನ್ನೂ ಗಮನಿಸಿದ ಜಿಲ್ಲಾ ಅರಣ್ಯ ಅಧಿಕಾರಿ ಎಸ್ ಜಿ ಹೆಗಡೆ ರವರ ಮಾರ್ಗದರ್ಶನದಲ್ಲಿ ಅಧಿಕಾರಿಗಳು ಮತ್ತು ಅರಣ್ಯ ರಕ್ಷಕರು (ಸಿಬ್ಬಂದಿಗಳು) ಮರಗಳ್ಳನಿಗಾಗಿ ಶೋಧ ನಡೆಸುತ್ತಿದ್ದಾರೆ.

ವರದಿ: ಶ್ರೀಪಾದ್ ಹೆಗಡೆ

ಭ್ರಷ್ಟರ ಬೇಟೆ

Recent Posts

ವಿದ್ಯಾರ್ಥಿ ಸಾವಿನ ಪ್ರಕರಣ; ಶಿಕ್ಷಕರ ವಿರುದ್ಧ ಎಫ್‌ಐಆರ್ ದಾಖಲು

ಸಿದ್ದಾಪುರ: ತಾಲೂಕಿನ ಕಾನಸೂರ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಗೋಕುಲ ಕೃಷ್ಣ ಗೌಡ ಸಾ. ವಿನ…

2 minutes ago

ರೌಡಿಶೀಟರ್‌ಗಳು ಮತ್ತು ಮೀಟರ್ ಬಡ್ಡಿ ದಂಧೆಕೋರರಿಗೆ ಪೊಲೀಸರ ಶಾಕ್; ಮನೆಗಳ ಮೇಲೆ ದಿಢೀರ್ ದಾಳಿ!

ಮುಂಡಗೋಡ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮೀಟರ್ ಬಡ್ಡಿ ದಂಧೆ ಹಾಗೂ ಸಮಾಜಘಾತಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾ…

7 minutes ago

ಕುಡಿತದ ದುರಂತ ಅಂತ್ಯ: ಆಸ್ತಿ ಹಣದ ಜಗಳಕ್ಕೆ ತಾಯಿಯನ್ನೇ ಕೊಂದ ಮಗಳು-ಮೊಮ್ಮಗ!

ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…

15 hours ago

ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ: ಪ್ರೌಢಶಾಲಾ ಶಿಕ್ಷಕಿ ಬಂಧನ

ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…

15 hours ago

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

18 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

18 hours ago