Latest

ಉತ್ತರಕನ್ನಡ ಜಿಲ್ಲೆಯಲ್ಲಿನ ಅರಣ್ಯದಲ್ಲಿ ಅಧಿಕಾರಿಗಳ ಕಣ್ಣಿಗೆ ಮಣ್ಣೆರಚಿ ಪರಾರಿಯಾದ ಸಾಗವಾನಿ ಮರಗಳ್ಳ ಕೃಷ್ಣ

ಕಾಡು ಬೆಳೆಸಿ ನಾಡು ಉಳಿಸಿ ಎಂಬ ಮಾತಿನಂತೆ ನಮ್ಮ ಕಾಡು ಹಾಗೂ ಗಿಡ ಮರಗಳನ್ನು ಉಳಿಸಬೇಕು. ನಾಡಿಗೆ ಮತ್ತು ನಮಗೆ ಗಿಡ ಮರಗಳು ಅತ್ಯವಶ್ಯಕವಾಗಿರುತ್ತದೆ. ಅದೇ ರೀತಿ ನಮ್ಮ ನಿಮ್ಮೆಲ್ಲರ ಬಳಿ ಇರುವ ಅರಣ್ಯ ಸಂಪತ್ತನ್ನು ಕಾಪಾಡಿ ಕೊಳ್ಳಬೇಕಾಗಿದ್ದು ನಮ್ಮ ನಿಮ್ಮೆಲ್ಲರ ಕರ್ತವ್ಯ .ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಮಾರು ಅರಣ್ಯ ಸಂಪತ್ತು ಇದೆ . ಇದನ್ನು ರಕ್ಷಿಸಬೇಕಾದ ಸ್ಥಳೀಯರು ಅದನ್ನು ನಾಶ ಪಡಿಸಬಾರದು . ಹಾಗೂ ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಕೊಡಂಬಿ ಹಳ್ಳದಮನೆ ಎಂಬ ಅರಣ್ಯ ಸಂಪತ್ತಿನಲ್ಲಿ ಮರಗಳನ್ನೂ
ಕಡಿದು ಅಕ್ರಮ ಸಾಗಾಣಿಕೆ ಮಾಡುತ್ತಿದ್ದಾರೆ ಎಂಬ ವದಂತಿ ಇತ್ತು. ಈ ವದಂತಿ ಗಮನಿಸಿದ ಉತ್ತರಕನ್ನಡ ಜಿಲ್ಲಾ ಅರಣ್ಯ ವಿಭಾಗದ ಅಧಿಕಾರಿಗಳು. ಇವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಬೇಕು ಹಾಗೂ ನಮ್ಮ ಅರಣ್ಯ ಸಂಪತ್ತನ್ನು ನಾವೇಲ್ಲರು ರಕ್ಷಿಸಿಕೊಳ್ಳಬೇಕೆಂದು ಹರಸಾಹಸ ಪಡುತ್ತಿದ್ದರು ಇದೇ ಮಾತಿನಂತೆ ದಿ: 30/9/2022 ರಂದು ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ತಂಡದವರ ಜೊತೆ ದಾಳಿ ಮಾಡಿದ್ದರು. ಈ ಸಂದರ್ಭದಲ್ಲಿ ಅರಣ್ಯದಲ್ಲಿನ ಮರಗಳನ್ನು ಅಕ್ರಮವಾಗಿ ಕದ್ದು ಪರ್ನಿಚರಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಸಾಗವಾನಿ ಮರಗಳ ಕಳ್ಳ ಕೃಷ್ಣ ಹನುಮಂತಪ್ಪ ದೇವರಗುಡ್ಡ ಎಂಬ ವ್ಯಕ್ತಿ ಅರಣ್ಯದಲ್ಲಿ ಹಾಜರಿದ್ದು ಅರಣ್ಯ ಅಧಿಕಾರಿಗಳು ದಾಳಿ ಮಾಡಿದ್ದನ್ನು ನೋಡಿ ಅಲ್ಲಿಂದ ತಪ್ಪಿಸಿಕೊಂಡಿದ್ದಾನೆ ಈತನು ಕೆಲವು ದಿನಗಳಿಂದ ಅಕ್ರಮವಾಗಿ ಅರಣ್ಯದಲ್ಲಿನ ಸಾಗವಾನಿ ಮರಗಳನ್ನು ಕದ್ದು ಫರ್ನೀಚರ್ ತಯಾರಿಸಿ ಮಾರಾಟ ಮಾಡುತ್ತಿದ್ದ ಇವೆಲ್ಲವನ್ನೂ ಗಮನಿಸಿದ ಜಿಲ್ಲಾ ಅರಣ್ಯ ಅಧಿಕಾರಿ ಎಸ್ ಜಿ ಹೆಗಡೆ ರವರ ಮಾರ್ಗದರ್ಶನದಲ್ಲಿ ಅಧಿಕಾರಿಗಳು ಮತ್ತು ಅರಣ್ಯ ರಕ್ಷಕರು (ಸಿಬ್ಬಂದಿಗಳು) ಮರಗಳ್ಳನಿಗಾಗಿ ಶೋಧ ನಡೆಸುತ್ತಿದ್ದಾರೆ.

ವರದಿ: ಶ್ರೀಪಾದ್ ಹೆಗಡೆ

ಭ್ರಷ್ಟರ ಬೇಟೆ

Recent Posts

ಚಲಿಸುವ ರೈಲು ಕೆಳಗೆ ಸಿಲುಕಿದ ತಂದೆ-ಮಗು: ಅದಮ್ಯ ಧೈರ್ಯದಿಂದ ಪಾರಾದ ಜೀವಗಳು!

ಬಾಂಗ್ಲಾದೇಶದ ಕಿಶೋರ್‌ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…

6 hours ago

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ: ಅಥಣಿಯಲ್ಲಿ ಹೃದಯವಿದ್ರಾವಕ ಘಟನೆ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…

6 hours ago

ಬಿಜೆಪಿ ಯುವ ಮೋರ್ಚಾ ನಾಯಕ ವೆಂಕಟೇಶ್ ಕೊಲೆ ಪ್ರಕರಣ: ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…

6 hours ago

66ರ ವೃದ್ಧನಿಗೆ 35ರ ಯುವತಿಯೊಂದಿಗೆ ಮದುವೆ! ವಯಸ್ಸು ಕೇವಲ ಸಂಖ್ಯೆ ಮಾತ್ರವೇ?

66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…

7 hours ago

ವಿಮೆ-ಆಸ್ತಿ ಲಾಭಕ್ಕಾಗಿ ಗಂಡನ ಕೊಲೆ: ಹರಿಯಾಣದಲ್ಲಿ ಪ್ರಿಯಕರ ನೊಂದಿಗೆ ಪತ್ನಿ ರಚಿಸಿದ್ದ ಸಂಚು ಬಯಲು.!

ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…

7 hours ago

ಬೆಂಗಳೂರು ಡ್ರಗ್ಸ್ ಜಾಲದ ಮೇಲೆ ಭಾರೀ ದಾಳಿ: ₹36 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, 16 ಮಂದಿ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…

12 hours ago