ನವಲಗುಂದ ಪಟ್ಟಣದ ಮತ್ತು ಚೆನ್ನಮ್ಮನ ಕೆರೆಯ ಮಧ್ಯೆದ ಅಣ್ಣಿಗೇರಿ ಮಾರ್ಗದಲ್ಲಿ ಸಾರಿಗೆ ಬಸ್ ಹಾಗೂ ಟ್ರ್ಯಾಕ್ಟರ್ ಮಧ್ಯೆದಲ್ಲಿ ಭೀಕರ ಅಪಘಾತ ಸಂಭವಸಿದ್ದು ಅದೃಷ್ಟಾವತ ಯಾವುದೇ ಪ್ರಾಣಹಾನಿ ಆಗಿಲ್ಲ ನವಲಗುಂದ ಪಟ್ಟಣದಿಂದ ಅಣ್ಣಿಗೇರಿ ಮಾರ್ಗದಲ್ಲಿ ಹೊರಟಿದ್ದ ಕೆಎಸ್ಆರ್ ಟಿಸಿ ಸಾರಿಗೆ ಸಂಸ್ಥೆಯ ಬಸ್ಸಿನ ಮುಂಭಾಗದ ಎಕ್ಸೆಲ್ ಕಟ್ ಆದ ಪರಿಣಾಮದಿಂದ ಚಾಲಕನಿಗೆ ನಿಯಂತ್ರಣ ತಪ್ಪಿ ಬಸ್ ನ ಮುಂಭಾಗದಲ್ಲಿ ಚಲಿಸುತ್ತಿದ್ದ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದಿದೆ ಈ ಘಟನೆಯಲ್ಲಿ ಟ್ರಾಕ್ಟರ್ ನ ಹಿಂಬದಿಯಲ್ಲಿ (ಕೃಷಿ ಉಪಕರಣ) ಕುಂಟೆಯ ಮೇಲೆ ಕುಳಿತಿದ್ದ 32 ವರ್ಷದ ಫಕ್ಕಿರೇಶ್ ಭೋಸಲೆ ಅವರ ಕಾಲಿಗೆ ಗಂಭೀರವಾಗಿ ಗಾಯವಾಗಿದೆ ಕೂಡಲೇ ಸ್ಥಳೀಯ ದಾರಿ ಹೋಕರು ಫಕ್ಕಿರೇಶ್ ನನ್ನು ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದರು ಅಲ್ಲಿ ಫಕ್ಕಿರೇಶನ ಕಾಲಿಗೆ ಗಂಭೀರವಾಗಿ ಗಾಯವಾಗಿದ್ದರಿಂದ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ಬಂದು ದಾಖಲಾಗಿದ್ದಾರೆ ಇನ್ನೂ ಈ ದುರ್ಘನೆಯಲ್ಲಿ ಕೆಎಸ್ಆರ್ ಟಿಸಿ ಸಾರಿಗೆ ಸಂಸ್ಥೆಯ ಬಸ್ ದಲ್ಲಿ ಸುಮಾರು 28 ರಿಂದ 30 ಜನರು ಪ್ರಯಾಣಿಸುತ್ತಿದ್ದು ಕೆಲವರಿಗೆ ಚಿಕ್ಕ ಪುಟ್ಟ ಗಾಯಗಳಾಗಿವೆ ಯಾವ ಪ್ರಯಾಣಿಕರ ಪ್ರಾಣ ಹಾನಿಯೂ ಆಗಿಲ್ಲ ಎಂದು ಹೇಳಲಾಗುತ್ತಿದೆ ಅಷ್ಟೇ ಅಲ್ಲದೆ ಈ ದುರ್ಘನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ವರದಿ: ಶಿವು ಹುಬ್ಬಳ್ಳಿ .
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…