ನವಲಗುಂದ ಪಟ್ಟಣದ ಮತ್ತು ಚೆನ್ನಮ್ಮನ ಕೆರೆಯ ಮಧ್ಯೆದ ಅಣ್ಣಿಗೇರಿ ಮಾರ್ಗದಲ್ಲಿ ಸಾರಿಗೆ ಬಸ್ ಹಾಗೂ ಟ್ರ್ಯಾಕ್ಟರ್ ಮಧ್ಯೆದಲ್ಲಿ ಭೀಕರ ಅಪಘಾತ ಸಂಭವಸಿದ್ದು ಅದೃಷ್ಟಾವತ ಯಾವುದೇ ಪ್ರಾಣಹಾನಿ ಆಗಿಲ್ಲ ನವಲಗುಂದ ಪಟ್ಟಣದಿಂದ ಅಣ್ಣಿಗೇರಿ ಮಾರ್ಗದಲ್ಲಿ ಹೊರಟಿದ್ದ ಕೆಎಸ್ಆರ್ ಟಿಸಿ ಸಾರಿಗೆ ಸಂಸ್ಥೆಯ ಬಸ್ಸಿನ ಮುಂಭಾಗದ ಎಕ್ಸೆಲ್ ಕಟ್ ಆದ ಪರಿಣಾಮದಿಂದ ಚಾಲಕನಿಗೆ ನಿಯಂತ್ರಣ ತಪ್ಪಿ ಬಸ್ ನ ಮುಂಭಾಗದಲ್ಲಿ ಚಲಿಸುತ್ತಿದ್ದ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದಿದೆ ಈ ಘಟನೆಯಲ್ಲಿ ಟ್ರಾಕ್ಟರ್ ನ ಹಿಂಬದಿಯಲ್ಲಿ (ಕೃಷಿ ಉಪಕರಣ) ಕುಂಟೆಯ ಮೇಲೆ ಕುಳಿತಿದ್ದ 32 ವರ್ಷದ ಫಕ್ಕಿರೇಶ್ ಭೋಸಲೆ ಅವರ ಕಾಲಿಗೆ ಗಂಭೀರವಾಗಿ ಗಾಯವಾಗಿದೆ ಕೂಡಲೇ ಸ್ಥಳೀಯ ದಾರಿ ಹೋಕರು ಫಕ್ಕಿರೇಶ್ ನನ್ನು ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದರು ಅಲ್ಲಿ ಫಕ್ಕಿರೇಶನ ಕಾಲಿಗೆ ಗಂಭೀರವಾಗಿ ಗಾಯವಾಗಿದ್ದರಿಂದ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ಬಂದು ದಾಖಲಾಗಿದ್ದಾರೆ ಇನ್ನೂ ಈ ದುರ್ಘನೆಯಲ್ಲಿ ಕೆಎಸ್ಆರ್ ಟಿಸಿ ಸಾರಿಗೆ ಸಂಸ್ಥೆಯ ಬಸ್ ದಲ್ಲಿ ಸುಮಾರು 28 ರಿಂದ 30 ಜನರು ಪ್ರಯಾಣಿಸುತ್ತಿದ್ದು ಕೆಲವರಿಗೆ ಚಿಕ್ಕ ಪುಟ್ಟ ಗಾಯಗಳಾಗಿವೆ ಯಾವ ಪ್ರಯಾಣಿಕರ ಪ್ರಾಣ ಹಾನಿಯೂ ಆಗಿಲ್ಲ ಎಂದು ಹೇಳಲಾಗುತ್ತಿದೆ ಅಷ್ಟೇ ಅಲ್ಲದೆ ಈ ದುರ್ಘನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ವರದಿ: ಶಿವು ಹುಬ್ಬಳ್ಳಿ .
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…