ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ತನ್ನ ನೌಕರರ ಕುಟುಂಬಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಗೊಂಡಿದೆ. ಅನುಕಂಪದ ಆಧಾರದ ಮೇಲೆ ನೀಡುವ ಉದ್ಯೋಗ ನೇಮಕಾತಿ ನಿಯಮಗಳಲ್ಲಿ ಬದಲಾವಣೆ ಮಾಡಲಾಗಿದ್ದು, ಇನ್ನು ಮುಂದೆ ಮೃತ ನೌಕರರ ವಿವಾಹಿತ, ವಿಚ್ಛೇದಿತ ಅಥವಾ ವಿಧವೆ ಮಗಳು ಹಾಗೂ ಸಹೋದರಿಯರೂ ಸಹ ಉದ್ಯೋಗ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಇದುವರೆಗೆ ಅನುಕಂಪದ ನೇಮಕಾತಿಗೆ ಕೆಲವು ನಿರ್ಬಂಧಗಳು ಇದ್ದವು. ವಿಶೇಷವಾಗಿ ವಿವಾಹಿತ ಮಹಿಳೆಯರಿಗೆ ಅವಕಾಶ ಸೀಮಿತವಾಗಿತ್ತು. ಆದರೆ ನಿಗಮ ಹೊರಡಿಸಿರುವ ಹೊಸ ಸುತ್ತೋಲೆಯ ಪ್ರಕಾರ, ಮೃತ ನೌಕರರನ್ನು ಅವಲಂಬಿಸಿದ್ದ ಮಗಳು ಅಥವಾ ಸಹೋದರಿ ವಿವಾಹಿತರಾಗಿದ್ದರೂ ಅವರಿಗೆ ಉದ್ಯೋಗ ನೀಡಲು ಅವಕಾಶ ಮಾಡಿಕೊಡಲಾಗಿದೆ.
ಅರ್ಹತೆ ಏನು?
ಅನುಕಂಪದ ನೇಮಕಾತಿಗೆ ಅರ್ಜಿ ಸಲ್ಲಿಸುವವರು ಮೃತ ನೌಕರರು ಜೀವಂತವಾಗಿದ್ದಾಗ ಅವರ ಮೇಲೆಯೇ ಅವಲಂಬಿತರಾಗಿದ್ದು, ಅವರ ಜೊತೆಯೇ ವಾಸವಾಗಿದ್ದರು ಎಂಬುದನ್ನು ಸಾಬೀತುಪಡಿಸಬೇಕು. ಇದಕ್ಕಾಗಿ ಸಂಬಂಧಿಸಿದ ತಹಶೀಲ್ದಾರರಿಂದ ವಾಸಸ್ಥಳ ಮತ್ತು ಅವಲಂಬಿತತ್ವದ ಪ್ರಮಾಣ ಪತ್ರವನ್ನು ಸಲ್ಲಿಸುವುದು ಕಡ್ಡಾಯವಾಗಿದೆ.
ಯಾರಿಗೆ ಅನ್ವಯ?
ಮೃತ ನೌಕರನ ಅವಲಂಬಿತ ಅವಿವಾಹಿತ, ವಿವಾಹಿತ, ವಿಚ್ಛೇದಿತ ಅಥವಾ ವಿಧವೆ ಮಗಳು ಮತ್ತು ಸಹೋದರಿಯರು ಈ ಸೌಲಭ್ಯವನ್ನು ಪಡೆಯಬಹುದಾಗಿದೆ. ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ ಪಾಷ ಅವರು ಈ ಕುರಿತು ಅಧಿಕೃತ ಸುತ್ತೋಲೆ ಹೊರಡಿಸಿದ್ದು, ಸಂಕಷ್ಟದಲ್ಲಿರುವ ನೌಕರರ ಕುಟುಂಬಗಳಿಗೆ ಈ ನಿರ್ಧಾರವು ಮಹತ್ವದ ನೆರವಾಗಲಿದೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…