ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ತನ್ನ ನೌಕರರ ಕುಟುಂಬಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಗೊಂಡಿದೆ. ಅನುಕಂಪದ ಆಧಾರದ ಮೇಲೆ ನೀಡುವ ಉದ್ಯೋಗ ನೇಮಕಾತಿ ನಿಯಮಗಳಲ್ಲಿ ಬದಲಾವಣೆ ಮಾಡಲಾಗಿದ್ದು, ಇನ್ನು ಮುಂದೆ ಮೃತ ನೌಕರರ ವಿವಾಹಿತ, ವಿಚ್ಛೇದಿತ ಅಥವಾ ವಿಧವೆ ಮಗಳು ಹಾಗೂ ಸಹೋದರಿಯರೂ ಸಹ ಉದ್ಯೋಗ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಇದುವರೆಗೆ ಅನುಕಂಪದ ನೇಮಕಾತಿಗೆ ಕೆಲವು ನಿರ್ಬಂಧಗಳು ಇದ್ದವು. ವಿಶೇಷವಾಗಿ ವಿವಾಹಿತ ಮಹಿಳೆಯರಿಗೆ ಅವಕಾಶ ಸೀಮಿತವಾಗಿತ್ತು. ಆದರೆ ನಿಗಮ ಹೊರಡಿಸಿರುವ ಹೊಸ ಸುತ್ತೋಲೆಯ ಪ್ರಕಾರ, ಮೃತ ನೌಕರರನ್ನು ಅವಲಂಬಿಸಿದ್ದ ಮಗಳು ಅಥವಾ ಸಹೋದರಿ ವಿವಾಹಿತರಾಗಿದ್ದರೂ ಅವರಿಗೆ ಉದ್ಯೋಗ ನೀಡಲು ಅವಕಾಶ ಮಾಡಿಕೊಡಲಾಗಿದೆ.
ಅರ್ಹತೆ ಏನು?
ಅನುಕಂಪದ ನೇಮಕಾತಿಗೆ ಅರ್ಜಿ ಸಲ್ಲಿಸುವವರು ಮೃತ ನೌಕರರು ಜೀವಂತವಾಗಿದ್ದಾಗ ಅವರ ಮೇಲೆಯೇ ಅವಲಂಬಿತರಾಗಿದ್ದು, ಅವರ ಜೊತೆಯೇ ವಾಸವಾಗಿದ್ದರು ಎಂಬುದನ್ನು ಸಾಬೀತುಪಡಿಸಬೇಕು. ಇದಕ್ಕಾಗಿ ಸಂಬಂಧಿಸಿದ ತಹಶೀಲ್ದಾರರಿಂದ ವಾಸಸ್ಥಳ ಮತ್ತು ಅವಲಂಬಿತತ್ವದ ಪ್ರಮಾಣ ಪತ್ರವನ್ನು ಸಲ್ಲಿಸುವುದು ಕಡ್ಡಾಯವಾಗಿದೆ.
ಯಾರಿಗೆ ಅನ್ವಯ?
ಮೃತ ನೌಕರನ ಅವಲಂಬಿತ ಅವಿವಾಹಿತ, ವಿವಾಹಿತ, ವಿಚ್ಛೇದಿತ ಅಥವಾ ವಿಧವೆ ಮಗಳು ಮತ್ತು ಸಹೋದರಿಯರು ಈ ಸೌಲಭ್ಯವನ್ನು ಪಡೆಯಬಹುದಾಗಿದೆ. ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ ಪಾಷ ಅವರು ಈ ಕುರಿತು ಅಧಿಕೃತ ಸುತ್ತೋಲೆ ಹೊರಡಿಸಿದ್ದು, ಸಂಕಷ್ಟದಲ್ಲಿರುವ ನೌಕರರ ಕುಟುಂಬಗಳಿಗೆ ಈ ನಿರ್ಧಾರವು ಮಹತ್ವದ ನೆರವಾಗಲಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…